Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...