Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...