Homeಮುಖಪುಟ'ಗೌರವದಿಂದ ಬದುಕುವ ಹಕ್ಕು ಖೈದಿಗಳಿಗೂ ಅನ್ವಯ' : ಸುಪ್ರೀಂಕೋರ್ಟ್‌

‘ಗೌರವದಿಂದ ಬದುಕುವ ಹಕ್ಕು ಖೈದಿಗಳಿಗೂ ಅನ್ವಯ’ : ಸುಪ್ರೀಂಕೋರ್ಟ್‌

- Advertisement -
- Advertisement -

“ಗೌರವದಿಂದ ಬದುಕುವ ಹಕ್ಕು ಸೆರೆವಾಸದಲ್ಲಿರುವವರಿಗೂ ಅನ್ವಯಿಸುತ್ತದೆ”, ಒಂದು ವೇಳೆ ಈ ಹಕ್ಕು ಅವರಿಗೆ ನಿರಾಕರಣೆಯಾದರೆ ಅದು “ವಸಾಹತುಶಾಹಿ ಮತ್ತು ಪೂರ್ವ ವಸಾಹತುಶಾಹಿ ಕಾರ್ಯವಿಧಾನಗಳ ಪಳೆಯುಳಿಕೆಯಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಗುರುವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಈ ಅವಲೋಕನಗಳನ್ನು ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ತೀರ್ಪು ಜಾತಿ-ಆಧಾರಿತ ತಾರತಮ್ಯವಾದ ದೈಹಿಕ ಕಾರ್ಮಿಕರ ವಿಭಜನೆ, ಬ್ಯಾರಕ್‌ಗಳ ಪ್ರತ್ಯೇಕತೆ ಮತ್ತು ಡಿನೋಟಿಫೈಡ್ ಬುಡಕಟ್ಟುಗಳ ಕೈದಿಗಳು ಮತ್ತು ಅಭ್ಯಾಸ ಅಪರಾಧಿಗಳ ವಿರುದ್ಧ ಪಕ್ಷಪಾತವನ್ನು ನಿಷೇಧಿಸಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ 10 ರಾಜ್ಯಗಳ ಕೆಲವು ಆಕ್ಷೇಪಾರ್ಹ ಜೈಲು ಕೈಪಿಡಿ ನಿಯಮಗಳನ್ನು ಈ ತೀರ್ಪು ಅಸಂವಿಧಾನಿಕ ಎಂದು ಪರಿಗಣಿಸಿದೆ.

ಇದನ್ನೂ ಓದಿ: ಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ

21 ನೇ ವಿಧಿಯ ಅಡಿಯಲ್ಲಿ ವ್ಯವಹರಿಸುವಾಗ, “ಗೌರವದಿಂದ ಬದುಕುವ ಹಕ್ಕು ಜೈಲಿನಲ್ಲಿರುವವರಿಗೂ ಅನ್ವಯಿಸುತ್ತದೆ ಎಂದು ತೀರ್ಪು ಹೇಳಿದೆ. ಕೈದಿಗಳಿಗೆ ಘನತೆಯನ್ನು ನೀಡದಿರುವುದು ವಸಾಹತುಶಾಹಿಗಳು ಮತ್ತು ಪೂರ್ವ ವಸಾಹತುಶಾಹಿ ಕಾರ್ಯವಿಧಾನಗಳ ಪಳೆಯುಳಿಕೆಯಾಗಿದೆ. ವಸಾಹತುಶಾಹಿಗಳ ಆಡಳಿತದ ದಬ್ಬಾಳಿಕೆಯ ವ್ಯವಸ್ಥೆಗಳನ್ನು ಸರ್ಕಾರದ ನಿಯಂತ್ರಣದಲ್ಲಿರುವವರನ್ನು ಅಮಾನವೀಯಗೊಳಿಸಲು ಮತ್ತು ಕೇಳುಮಟ್ಟಕ್ಕೆ ತರಲು ವಿನ್ಯಾಸಗೊಳಿಸಲಾಗಿದೆ ಎಂದು ತೀರ್ಪು ಹೇಳಿದೆ.

“ಸಂವಿಧಾನಪೂರ್ವ ಯುಗದ ನಿರಂಕುಶ ಪ್ರಭುತ್ವಗಳು ಜೈಲುಗಳನ್ನು ಬಂಧನದ ಸ್ಥಳಗಳಾಗಿ ಮಾತ್ರವಲ್ಲದೆ ತನ್ನ ಪ್ರಾಬಲ್ಯದ ಸಾಧನಗಳಾಗಿಯೂ ನೋಡಿದವು. ಈ ನ್ಯಾಯಾಲಯವು ಸಂವಿಧಾನವು ತಂದ ಬದಲಾದ ಕಾನೂನು ಚೌಕಟ್ಟಿನ ಮೇಲೆ ಕೇಂದ್ರೀಕರಿಸಿದ್ದು, ಕೈದಿಗಳು ಕೂಡಾ ಘನತೆಯ ಹಕ್ಕಿಗೆ ಅರ್ಹರು ಎಂದು ಗುರುತಿಸಿದೆ” ಎಂದು ತೀರ್ಪು ಉಲ್ಲೇಖಿಸಿದೆ.

ಸಂವಿಧಾನದ ಆರ್ಟಿಕಲ್ 14 ಸರ್ಕಾರವು ಯಾವುದೇ ವ್ಯಕ್ತಿಗೆ ಕಾನೂನಿನ ಮುಂದೆ ಸಮಾನತೆ ಅಥವಾ ಭಾರತದ ಪ್ರದೇಶದೊಳಗಿನ ಕಾನೂನುಗಳ ಸಮಾನ ರಕ್ಷಣೆಯನ್ನು ನಿರಾಕರಿಸಬಾರದು ಮತ್ತು ಸಮಾನತೆಯು ಸಾಂವಿಧಾನಿಕ ದೃಷ್ಟಿಕೋನದ ನಿರ್ಣಾಯಕ ಅಂಶವಾಗಿದೆ ಎಂದು ಹೇಳಿದೆ. ನಂತರ ತೀರ್ಪು ಜಾತಿ, ಜನಾಂಗ, ಧರ್ಮ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಭಾರತೀಯ ಸಂವಿಧಾನ 15 ನೇ ವಿಧಿಯ ಬಗ್ಗೆ ಉಲ್ಲೇಖಿಸಿದೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...