Homeಮುಖಪುಟಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದ ಎಡಿಟ್‌ ವಿಡಿಯೋವೊಂದನ್ನು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಚೌಹಾಣ್‌ ಅವರ ಹೆಸರಿಗೆ ಮಸಿ ಬಳಿಯುವಂತ ವಿಡಿಯೋವನ್ನು ಸಿಂಗ್‌ ಅವರು ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, “ಕಮಲ್ ನಾಥ್ ಸರ್ಕಾರವು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ನೀತಿಯನ್ನು ರೂಪಿಸಿದಾಗ ಚೌಹಾಣ್‌ ಅವರ ಪ್ರತಿಕ್ರಿಯೆಯ ಭಾಗವಾಗಿದೆ” ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಈ ವಿಡಿಯೋವನ್ನು ಭಾನುವಾರ ಮಧ್ಯಾಹ್ನ ದಿಗ್ವಿಜಯ ಸಿಂಗ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್ ಹಂಚಿಕೊಂಡಿದ್ದು, ನಂತರ 10 ಮಂದಿ ಮರು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಪ್ರತಿಭಟನೆ ನಡೆಸಿದ ನಂತರ, ದಿಗ್ವಿಜಯ್‌ ಸಿಂಗ್ ಅವರ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ತೆಗೆದುಹಾಕಲಾಗಿದೆ.

ಆದರೆ ಮಾಜಿ ಗೃಹ ಸಚಿವ ಉಮಾಶಂಕರ್ ಗುಪ್ತಾ ನೇತೃತ್ವದ ಬಿಜೆಪಿ, ವಿಡಿಯೋಗೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಮತ್ತು ಇತರ ಸಾಕ್ಷ್ಯಗಳನ್ನು ಅಪರಾಧ ವಿಭಾಗಕ್ಕೆ ಎರಡು ಪುಟಗಳ ದೂರಿನೊಂದಿಗೆ ಸಲ್ಲಿಸಿದೆ.

ಮುಖ್ಯಮಂತ್ರಿಯವರ ವಿರುದ್ಧ ಅಪಪ್ರಚಾರ ಮಾಡಲು ದಿಗ್ವಿಜಯ ಸಿಂಗ್ ಉದ್ದೇಶಪೂರ್ವಕವಾಗಿ ವಿಡಿಯೋ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ವೀಡಿಯೊವನ್ನು ರಿಟ್ವೀಟ್ ಮಾಡಿದ ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ 11 ಜನರ ವಿರುದ್ಧ ಸೈಬರ್ ಸೆಲ್‌ನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಘಟಕವು ಸಂಜೆ ಎಫ್ಐಆರ್ ಅನ್ನು ನೋಂದಾಯಿಸಿದೆ ಎಂದು ಅಪರಾಧ ಶಾಖೆಯ ಹಿರಿಯ ಅಧಿಕಾರಿ ನಿಶ್ಚಲ್‌ ಜಾರಿಯಾ ಹೇಳಿದ್ದಾರೆ. ಸಿಂಗ್ ವಿರುದ್ಧ ಮಾನಹಾನಿ ಮತ್ತು ಖೋಟಾ ಆರೋಪ ಹೊರಿಸಲಾಗಿದೆ.

ಬುಡಕಟ್ಟು ಜನಾಂಗದ ಪರಿಸ್ತಿತಿಯನ್ನು ಎತ್ತಿ ತೋರಿಸಿದ್ದಕ್ಕಾಗಿ ನಮ್ಮನ್ನು ಹಿಮ್ಮೆಟ್ಟಿಸುವುದು ಬಿಜೆಪಿಯ ರಾಜಕೀಯ ತಂತ್ರವಾಗಿದೆ ಮತ್ತು ವೀಡಿಯೊವನ್ನು ಯಾರು ಸಂಪಾದಿಸಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ದಿಗ್ವಿಜಯ್‌ ಸಿಂಗ್ ಹೇಳಿದರು.

“ಬುಡ್ನಿಯ ಬುಡಕಟ್ಟು ಜನಾಂಗದವರಿಗೆ ಶಿವರಾಜ್ ಸಿಂಗ್ ಚೌಹಾನ್ ಅವರ ಏಜೆಂಟರು 4.5 ಕೋಟಿ ರೂ. ವಂಚಿಸಿದ್ದಾರೆ. ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ಅವರ ನಿವಾಸದಲ್ಲಿ ಧರಣಿ ಪ್ರತಿಭಟನೆ ನಡೆಸುತ್ತೇನೆ ಎಂದು ನಾನು ಅವರಿಗೆ ಪತ್ರ ಬರೆದಿದ್ದೇನೆ. ಇದು ಬಿಜೆಪಿಯನ್ನು ಗೊಂದಲಕ್ಕೀಡು ಮಾಡಿದೆ. ಹಾಗಾಗಿ ನನ್ನ ಮೇಲೆ ದೂರು ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...