Homeಕರ್ನಾಟಕಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

- Advertisement -
- Advertisement -

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌‌ ಪಂದ್ಯಾಟದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಸೋತ ಭಾರತ ತಂಡವನ್ನು ‘ದಿಗ್ವಿಜಯ ನ್ಯೂಸ್‌’ ಕನ್ನಡದ ಸುದ್ದಿ ವಾಹಿನಿಯು ‘ದಂಡುಪಾಳ್ಯದ ದಂಡಪಿಂಡಗಳು’ ಎಂದು ಕರೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಭಾರತ ತಂಡವು ಎಂಟು ವಿಕೆಟ್‌ ಅಂತರದಲ್ಲಿ ಸೋತಿತ್ತು. ಇದಕ್ಕೆ ಭಾರತ ತಂಡದ ಅಭಿಮಾನಿಗಳು ನಿರಾಸೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ದಿಗ್ವಿಜಯ ನ್ಯೂಸ್ ತಂಡವನ್ನು ದಂಡುಪಾಳ್ಯದ ದಂಡಪಿಂಡಗಳು ಎಂದು ಕರೆದು ಅವಮಾನಿಸಿದೆ ಎಂದು ಆರೋಪಿಸಲಾಗಿದೆ. ದಿಗ್ವಿಜಯ ನ್ಯೂಸ್ ನಡೆಸಿದೆ ಎನ್ನಲಾಗಿರುವ ಕಾರ್ಯಕ್ರಮದ ಸ್ಕ್ರೀನ್‌ ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಚಾನೆಲ್ ವಿರುದ್ದ ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸದ್ಯಕ್ಕೆ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ಭಾರತ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗ ದೊಡ್ಡ ಗಣೇಶ್ ಅವರು ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು ಚಾನೆಲ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ನಮ್ಮ ಈ ಕನ್ನಡ ನ್ಯೂಸ್ ಚ್ಯಾನಲ್‌ಗಳಿಗೆ ವೃತ್ತಿಪರ ನೀತಿ ಎನ್ನವುದೇ ಇಲ್ವಾ? ಒಂದು ಪಂದ್ಯ ಸೋತ ಮಾತ್ರಕ್ಕೆ ನಮ್ಮ ಆಟಗಾರರನ್ನು ಇಂತಹ ಕೀಳು ಮಟ್ಟದ ಶೀರ್ಷಿಕೆಯಿಂದ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ ?” ಎಂದು ದಿಗ್ವಿಜಯ ನ್ಯೂಸ್‌ಗೆ ಪ್ರಶ್ನೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕೂಡಾ ದಿಗ್ವಿಜಯ ನ್ಯೂಸ್‌ ಪದ ಬಳಕೆಗೆ ಆಕ್ರೋಶ ವ್ಯಕ್ತವಾಗಿದೆ. ಬೋಪಣ್ಣ ಬೊಳ್ಳಿಯಂಗಡ ಅಪ್ಪು ಎಂಬವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಈ ಚಾನಲ್ ಗಳು ಅದೆಷ್ಟು ಕೀಳು ಮಟ್ಟಕ್ಕೆ ಇಳಿಯುತ್ತವೆ ಎನ್ನುವುದು ಈ ಶಿರ್ಷಿಕೆ ನೋಡಿದರೆ ತಿಳಿಯುತ್ತದೆ. ದಿಗ್ವಿಜಯ ನ್ಯೂಸ್‌ ಅವರೆ ಒಂದೇ ಒಂದು ಪಂದ್ಯ, ಅದೂ ಫೈನಲ್‌ನಲ್ಲಿ ಸೋತಿದಕ್ಕೆ ತಂಡವನ್ನು ‘ದಂಡುಪಾಳ್ಯ’ಕ್ಕೆ…’ದಂಡಪಿಂಡ’ಗಳಿಗೆ ಹೋಲಿಸುತ್ತೀರಿ ಎಂದರೆ ನಾಚಿಕೆ ಆಗಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ದೊಡ್ಡ ಗಣೇಶ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದರು ಕ್ರುಶಿಕ ಎನ್ನುವವರು, “ಪಾಕಿಸ್ತಾನದ ಜೊತೆಗಿನ ಆಟದ ಬಗ್ಗೆ ಹೀಗೆ ವರದಿ ಮಾಡಿ ಮಾಡಿ ಅದನ್ನೇ ನ್ಯೂಜಿಲೆಂಡ್ ಜೊತೆಗಿನ ಆಟಕ್ಕೂ ಹೇಳುತ್ತಾ ಇದ್ದಾರೆ. ಪಾಕಿಸ್ತಾನದ ಜೊತೆಗಿನ ಆಟದ ಸಮಯದಲ್ಲಿ ಕಿತ್ತೊದವರಂತೆ ಬರೆಯುವವರನ್ನು ಜಾಡಿಸಿದ್ದಿದ್ರೆ, ಈಗ ಬುದ್ದಿ ಕಲ್ತಿರೋರು. ಇಂಡಿಯಾದ ಜನಕ್ಕೆ ಭಾವನಾತ್ಮಕತೆಯೇ ಜಾಸ್ತಿ, ಅದೇ ಆಸ್ತಿ. ಆಟವನ್ನು ಆಟ ಅಂತ ನೋಡಲ್ಲ!” ಎಂದು ಹೇಳಿದ್ದಾರೆ.

ದಿಗ್ವಿಜಯ ನ್ಯೂಸ್ ಈ ಹಿಂದೆ ‘ಓಂ ಫಿನಿಶಾಯ ನಮಃ’ ಎಂಬ ಶಿರ್ಷಿಕೆಯನ್ನು ನೀಡಿ ಕಾರ್ಯಕ್ರಮವನ್ನು ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ ಕಾರ್ಕಳ ಅವರು, ‘ದಿಗ್ವಿಜಯದ ಶಬ್ಧ ದಾರಿದ್ರ್ಯ’ ಎಂದು ಹೇಳಿದ್ದರು.

ಅವರು, “ಇದು ಧೋನಿ ಎಂಬ ಮಹಾನ್ ಕ್ರಿಕೆಟಿಗನ ನಿವೃತ್ತಿಯ ಕುರಿತ ನುಡಿಚಿತ್ರಕ್ಕೆ ದಿಗ್ವಿಜಯ ಟಿವಿ ನೀಡಿದ ತಲೆಬರಹ.. ಅಲ್ಲಲ್ಲ ತಲೆಕೆಟ್ಟ ಬರಹ..!! ಭಾರತೀಯ ಕ್ರಿಕೆಟ್ ಚರಿತ್ರೆಯಲ್ಲೊಂದು ಅದ್ಭುತ ಅಧ್ಯಾಯ ಬರೆದ ಜಂಟಲ್ ಮ್ಯಾನ್ ಯಾರನ್ನು ಫಿನಿಶ್ ಮಾಡಿದರು? ಅಥವಾ ಅವರನ್ನೇ ಅವರು ಫಿನಿಶ್ ಮಾಡಿಕೊಂಡ್ರಾ? ತಲೆಬರಹ ಕೊಡುವವರಿಗೇನಾದರೂ ತಲೆಕೆಟ್ಟಿದೆಯೇ? ನುಡಿಚಿತ್ರ ಕಾರ್ಯಕ್ರಮದಲ್ಲಿ ಸೊಗಸಾದ ‘ಮಾಹಿ’ತಿಯನ್ನೇನೋ ನೀಡಿದರು. ಆದರೆ ನೆಗೆಟಿವ್ ಅರ್ಥ ಕೊಡುವ ತಲೆಬರಹವೇಕೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...