Homeಕರ್ನಾಟಕಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

- Advertisement -
- Advertisement -

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌‌ ಪಂದ್ಯಾಟದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಸೋತ ಭಾರತ ತಂಡವನ್ನು ‘ದಿಗ್ವಿಜಯ ನ್ಯೂಸ್‌’ ಕನ್ನಡದ ಸುದ್ದಿ ವಾಹಿನಿಯು ‘ದಂಡುಪಾಳ್ಯದ ದಂಡಪಿಂಡಗಳು’ ಎಂದು ಕರೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಭಾರತ ತಂಡವು ಎಂಟು ವಿಕೆಟ್‌ ಅಂತರದಲ್ಲಿ ಸೋತಿತ್ತು. ಇದಕ್ಕೆ ಭಾರತ ತಂಡದ ಅಭಿಮಾನಿಗಳು ನಿರಾಸೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ದಿಗ್ವಿಜಯ ನ್ಯೂಸ್ ತಂಡವನ್ನು ದಂಡುಪಾಳ್ಯದ ದಂಡಪಿಂಡಗಳು ಎಂದು ಕರೆದು ಅವಮಾನಿಸಿದೆ ಎಂದು ಆರೋಪಿಸಲಾಗಿದೆ. ದಿಗ್ವಿಜಯ ನ್ಯೂಸ್ ನಡೆಸಿದೆ ಎನ್ನಲಾಗಿರುವ ಕಾರ್ಯಕ್ರಮದ ಸ್ಕ್ರೀನ್‌ ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಚಾನೆಲ್ ವಿರುದ್ದ ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸದ್ಯಕ್ಕೆ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ಭಾರತ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗ ದೊಡ್ಡ ಗಣೇಶ್ ಅವರು ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು ಚಾನೆಲ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ನಮ್ಮ ಈ ಕನ್ನಡ ನ್ಯೂಸ್ ಚ್ಯಾನಲ್‌ಗಳಿಗೆ ವೃತ್ತಿಪರ ನೀತಿ ಎನ್ನವುದೇ ಇಲ್ವಾ? ಒಂದು ಪಂದ್ಯ ಸೋತ ಮಾತ್ರಕ್ಕೆ ನಮ್ಮ ಆಟಗಾರರನ್ನು ಇಂತಹ ಕೀಳು ಮಟ್ಟದ ಶೀರ್ಷಿಕೆಯಿಂದ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ ?” ಎಂದು ದಿಗ್ವಿಜಯ ನ್ಯೂಸ್‌ಗೆ ಪ್ರಶ್ನೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕೂಡಾ ದಿಗ್ವಿಜಯ ನ್ಯೂಸ್‌ ಪದ ಬಳಕೆಗೆ ಆಕ್ರೋಶ ವ್ಯಕ್ತವಾಗಿದೆ. ಬೋಪಣ್ಣ ಬೊಳ್ಳಿಯಂಗಡ ಅಪ್ಪು ಎಂಬವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಈ ಚಾನಲ್ ಗಳು ಅದೆಷ್ಟು ಕೀಳು ಮಟ್ಟಕ್ಕೆ ಇಳಿಯುತ್ತವೆ ಎನ್ನುವುದು ಈ ಶಿರ್ಷಿಕೆ ನೋಡಿದರೆ ತಿಳಿಯುತ್ತದೆ. ದಿಗ್ವಿಜಯ ನ್ಯೂಸ್‌ ಅವರೆ ಒಂದೇ ಒಂದು ಪಂದ್ಯ, ಅದೂ ಫೈನಲ್‌ನಲ್ಲಿ ಸೋತಿದಕ್ಕೆ ತಂಡವನ್ನು ‘ದಂಡುಪಾಳ್ಯ’ಕ್ಕೆ…’ದಂಡಪಿಂಡ’ಗಳಿಗೆ ಹೋಲಿಸುತ್ತೀರಿ ಎಂದರೆ ನಾಚಿಕೆ ಆಗಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ದೊಡ್ಡ ಗಣೇಶ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದರು ಕ್ರುಶಿಕ ಎನ್ನುವವರು, “ಪಾಕಿಸ್ತಾನದ ಜೊತೆಗಿನ ಆಟದ ಬಗ್ಗೆ ಹೀಗೆ ವರದಿ ಮಾಡಿ ಮಾಡಿ ಅದನ್ನೇ ನ್ಯೂಜಿಲೆಂಡ್ ಜೊತೆಗಿನ ಆಟಕ್ಕೂ ಹೇಳುತ್ತಾ ಇದ್ದಾರೆ. ಪಾಕಿಸ್ತಾನದ ಜೊತೆಗಿನ ಆಟದ ಸಮಯದಲ್ಲಿ ಕಿತ್ತೊದವರಂತೆ ಬರೆಯುವವರನ್ನು ಜಾಡಿಸಿದ್ದಿದ್ರೆ, ಈಗ ಬುದ್ದಿ ಕಲ್ತಿರೋರು. ಇಂಡಿಯಾದ ಜನಕ್ಕೆ ಭಾವನಾತ್ಮಕತೆಯೇ ಜಾಸ್ತಿ, ಅದೇ ಆಸ್ತಿ. ಆಟವನ್ನು ಆಟ ಅಂತ ನೋಡಲ್ಲ!” ಎಂದು ಹೇಳಿದ್ದಾರೆ.

ದಿಗ್ವಿಜಯ ನ್ಯೂಸ್ ಈ ಹಿಂದೆ ‘ಓಂ ಫಿನಿಶಾಯ ನಮಃ’ ಎಂಬ ಶಿರ್ಷಿಕೆಯನ್ನು ನೀಡಿ ಕಾರ್ಯಕ್ರಮವನ್ನು ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ ಕಾರ್ಕಳ ಅವರು, ‘ದಿಗ್ವಿಜಯದ ಶಬ್ಧ ದಾರಿದ್ರ್ಯ’ ಎಂದು ಹೇಳಿದ್ದರು.

ಅವರು, “ಇದು ಧೋನಿ ಎಂಬ ಮಹಾನ್ ಕ್ರಿಕೆಟಿಗನ ನಿವೃತ್ತಿಯ ಕುರಿತ ನುಡಿಚಿತ್ರಕ್ಕೆ ದಿಗ್ವಿಜಯ ಟಿವಿ ನೀಡಿದ ತಲೆಬರಹ.. ಅಲ್ಲಲ್ಲ ತಲೆಕೆಟ್ಟ ಬರಹ..!! ಭಾರತೀಯ ಕ್ರಿಕೆಟ್ ಚರಿತ್ರೆಯಲ್ಲೊಂದು ಅದ್ಭುತ ಅಧ್ಯಾಯ ಬರೆದ ಜಂಟಲ್ ಮ್ಯಾನ್ ಯಾರನ್ನು ಫಿನಿಶ್ ಮಾಡಿದರು? ಅಥವಾ ಅವರನ್ನೇ ಅವರು ಫಿನಿಶ್ ಮಾಡಿಕೊಂಡ್ರಾ? ತಲೆಬರಹ ಕೊಡುವವರಿಗೇನಾದರೂ ತಲೆಕೆಟ್ಟಿದೆಯೇ? ನುಡಿಚಿತ್ರ ಕಾರ್ಯಕ್ರಮದಲ್ಲಿ ಸೊಗಸಾದ ‘ಮಾಹಿ’ತಿಯನ್ನೇನೋ ನೀಡಿದರು. ಆದರೆ ನೆಗೆಟಿವ್ ಅರ್ಥ ಕೊಡುವ ತಲೆಬರಹವೇಕೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...