Homeಕರ್ನಾಟಕಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

- Advertisement -
- Advertisement -

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌‌ ಪಂದ್ಯಾಟದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಸೋತ ಭಾರತ ತಂಡವನ್ನು ‘ದಿಗ್ವಿಜಯ ನ್ಯೂಸ್‌’ ಕನ್ನಡದ ಸುದ್ದಿ ವಾಹಿನಿಯು ‘ದಂಡುಪಾಳ್ಯದ ದಂಡಪಿಂಡಗಳು’ ಎಂದು ಕರೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಭಾರತ ತಂಡವು ಎಂಟು ವಿಕೆಟ್‌ ಅಂತರದಲ್ಲಿ ಸೋತಿತ್ತು. ಇದಕ್ಕೆ ಭಾರತ ತಂಡದ ಅಭಿಮಾನಿಗಳು ನಿರಾಸೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ದಿಗ್ವಿಜಯ ನ್ಯೂಸ್ ತಂಡವನ್ನು ದಂಡುಪಾಳ್ಯದ ದಂಡಪಿಂಡಗಳು ಎಂದು ಕರೆದು ಅವಮಾನಿಸಿದೆ ಎಂದು ಆರೋಪಿಸಲಾಗಿದೆ. ದಿಗ್ವಿಜಯ ನ್ಯೂಸ್ ನಡೆಸಿದೆ ಎನ್ನಲಾಗಿರುವ ಕಾರ್ಯಕ್ರಮದ ಸ್ಕ್ರೀನ್‌ ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಚಾನೆಲ್ ವಿರುದ್ದ ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸದ್ಯಕ್ಕೆ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ಭಾರತ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗ ದೊಡ್ಡ ಗಣೇಶ್ ಅವರು ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು ಚಾನೆಲ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ನಮ್ಮ ಈ ಕನ್ನಡ ನ್ಯೂಸ್ ಚ್ಯಾನಲ್‌ಗಳಿಗೆ ವೃತ್ತಿಪರ ನೀತಿ ಎನ್ನವುದೇ ಇಲ್ವಾ? ಒಂದು ಪಂದ್ಯ ಸೋತ ಮಾತ್ರಕ್ಕೆ ನಮ್ಮ ಆಟಗಾರರನ್ನು ಇಂತಹ ಕೀಳು ಮಟ್ಟದ ಶೀರ್ಷಿಕೆಯಿಂದ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ ?” ಎಂದು ದಿಗ್ವಿಜಯ ನ್ಯೂಸ್‌ಗೆ ಪ್ರಶ್ನೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕೂಡಾ ದಿಗ್ವಿಜಯ ನ್ಯೂಸ್‌ ಪದ ಬಳಕೆಗೆ ಆಕ್ರೋಶ ವ್ಯಕ್ತವಾಗಿದೆ. ಬೋಪಣ್ಣ ಬೊಳ್ಳಿಯಂಗಡ ಅಪ್ಪು ಎಂಬವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಈ ಚಾನಲ್ ಗಳು ಅದೆಷ್ಟು ಕೀಳು ಮಟ್ಟಕ್ಕೆ ಇಳಿಯುತ್ತವೆ ಎನ್ನುವುದು ಈ ಶಿರ್ಷಿಕೆ ನೋಡಿದರೆ ತಿಳಿಯುತ್ತದೆ. ದಿಗ್ವಿಜಯ ನ್ಯೂಸ್‌ ಅವರೆ ಒಂದೇ ಒಂದು ಪಂದ್ಯ, ಅದೂ ಫೈನಲ್‌ನಲ್ಲಿ ಸೋತಿದಕ್ಕೆ ತಂಡವನ್ನು ‘ದಂಡುಪಾಳ್ಯ’ಕ್ಕೆ…’ದಂಡಪಿಂಡ’ಗಳಿಗೆ ಹೋಲಿಸುತ್ತೀರಿ ಎಂದರೆ ನಾಚಿಕೆ ಆಗಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ದೊಡ್ಡ ಗಣೇಶ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದರು ಕ್ರುಶಿಕ ಎನ್ನುವವರು, “ಪಾಕಿಸ್ತಾನದ ಜೊತೆಗಿನ ಆಟದ ಬಗ್ಗೆ ಹೀಗೆ ವರದಿ ಮಾಡಿ ಮಾಡಿ ಅದನ್ನೇ ನ್ಯೂಜಿಲೆಂಡ್ ಜೊತೆಗಿನ ಆಟಕ್ಕೂ ಹೇಳುತ್ತಾ ಇದ್ದಾರೆ. ಪಾಕಿಸ್ತಾನದ ಜೊತೆಗಿನ ಆಟದ ಸಮಯದಲ್ಲಿ ಕಿತ್ತೊದವರಂತೆ ಬರೆಯುವವರನ್ನು ಜಾಡಿಸಿದ್ದಿದ್ರೆ, ಈಗ ಬುದ್ದಿ ಕಲ್ತಿರೋರು. ಇಂಡಿಯಾದ ಜನಕ್ಕೆ ಭಾವನಾತ್ಮಕತೆಯೇ ಜಾಸ್ತಿ, ಅದೇ ಆಸ್ತಿ. ಆಟವನ್ನು ಆಟ ಅಂತ ನೋಡಲ್ಲ!” ಎಂದು ಹೇಳಿದ್ದಾರೆ.

ದಿಗ್ವಿಜಯ ನ್ಯೂಸ್ ಈ ಹಿಂದೆ ‘ಓಂ ಫಿನಿಶಾಯ ನಮಃ’ ಎಂಬ ಶಿರ್ಷಿಕೆಯನ್ನು ನೀಡಿ ಕಾರ್ಯಕ್ರಮವನ್ನು ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ ಕಾರ್ಕಳ ಅವರು, ‘ದಿಗ್ವಿಜಯದ ಶಬ್ಧ ದಾರಿದ್ರ್ಯ’ ಎಂದು ಹೇಳಿದ್ದರು.

ಅವರು, “ಇದು ಧೋನಿ ಎಂಬ ಮಹಾನ್ ಕ್ರಿಕೆಟಿಗನ ನಿವೃತ್ತಿಯ ಕುರಿತ ನುಡಿಚಿತ್ರಕ್ಕೆ ದಿಗ್ವಿಜಯ ಟಿವಿ ನೀಡಿದ ತಲೆಬರಹ.. ಅಲ್ಲಲ್ಲ ತಲೆಕೆಟ್ಟ ಬರಹ..!! ಭಾರತೀಯ ಕ್ರಿಕೆಟ್ ಚರಿತ್ರೆಯಲ್ಲೊಂದು ಅದ್ಭುತ ಅಧ್ಯಾಯ ಬರೆದ ಜಂಟಲ್ ಮ್ಯಾನ್ ಯಾರನ್ನು ಫಿನಿಶ್ ಮಾಡಿದರು? ಅಥವಾ ಅವರನ್ನೇ ಅವರು ಫಿನಿಶ್ ಮಾಡಿಕೊಂಡ್ರಾ? ತಲೆಬರಹ ಕೊಡುವವರಿಗೇನಾದರೂ ತಲೆಕೆಟ್ಟಿದೆಯೇ? ನುಡಿಚಿತ್ರ ಕಾರ್ಯಕ್ರಮದಲ್ಲಿ ಸೊಗಸಾದ ‘ಮಾಹಿ’ತಿಯನ್ನೇನೋ ನೀಡಿದರು. ಆದರೆ ನೆಗೆಟಿವ್ ಅರ್ಥ ಕೊಡುವ ತಲೆಬರಹವೇಕೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...