Homeಕರ್ನಾಟಕಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

- Advertisement -
- Advertisement -

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌‌ ಪಂದ್ಯಾಟದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಸೋತ ಭಾರತ ತಂಡವನ್ನು ‘ದಿಗ್ವಿಜಯ ನ್ಯೂಸ್‌’ ಕನ್ನಡದ ಸುದ್ದಿ ವಾಹಿನಿಯು ‘ದಂಡುಪಾಳ್ಯದ ದಂಡಪಿಂಡಗಳು’ ಎಂದು ಕರೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ದ ಭಾರತ ತಂಡವು ಎಂಟು ವಿಕೆಟ್‌ ಅಂತರದಲ್ಲಿ ಸೋತಿತ್ತು. ಇದಕ್ಕೆ ಭಾರತ ತಂಡದ ಅಭಿಮಾನಿಗಳು ನಿರಾಸೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ದಿಗ್ವಿಜಯ ನ್ಯೂಸ್ ತಂಡವನ್ನು ದಂಡುಪಾಳ್ಯದ ದಂಡಪಿಂಡಗಳು ಎಂದು ಕರೆದು ಅವಮಾನಿಸಿದೆ ಎಂದು ಆರೋಪಿಸಲಾಗಿದೆ. ದಿಗ್ವಿಜಯ ನ್ಯೂಸ್ ನಡೆಸಿದೆ ಎನ್ನಲಾಗಿರುವ ಕಾರ್ಯಕ್ರಮದ ಸ್ಕ್ರೀನ್‌ ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಚಾನೆಲ್ ವಿರುದ್ದ ಕಿಡಿಕಾರಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸದ್ಯಕ್ಕೆ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

ಭಾರತ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗ ದೊಡ್ಡ ಗಣೇಶ್ ಅವರು ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು ಚಾನೆಲ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ನಮ್ಮ ಈ ಕನ್ನಡ ನ್ಯೂಸ್ ಚ್ಯಾನಲ್‌ಗಳಿಗೆ ವೃತ್ತಿಪರ ನೀತಿ ಎನ್ನವುದೇ ಇಲ್ವಾ? ಒಂದು ಪಂದ್ಯ ಸೋತ ಮಾತ್ರಕ್ಕೆ ನಮ್ಮ ಆಟಗಾರರನ್ನು ಇಂತಹ ಕೀಳು ಮಟ್ಟದ ಶೀರ್ಷಿಕೆಯಿಂದ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ ?” ಎಂದು ದಿಗ್ವಿಜಯ ನ್ಯೂಸ್‌ಗೆ ಪ್ರಶ್ನೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕೂಡಾ ದಿಗ್ವಿಜಯ ನ್ಯೂಸ್‌ ಪದ ಬಳಕೆಗೆ ಆಕ್ರೋಶ ವ್ಯಕ್ತವಾಗಿದೆ. ಬೋಪಣ್ಣ ಬೊಳ್ಳಿಯಂಗಡ ಅಪ್ಪು ಎಂಬವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಈ ಚಾನಲ್ ಗಳು ಅದೆಷ್ಟು ಕೀಳು ಮಟ್ಟಕ್ಕೆ ಇಳಿಯುತ್ತವೆ ಎನ್ನುವುದು ಈ ಶಿರ್ಷಿಕೆ ನೋಡಿದರೆ ತಿಳಿಯುತ್ತದೆ. ದಿಗ್ವಿಜಯ ನ್ಯೂಸ್‌ ಅವರೆ ಒಂದೇ ಒಂದು ಪಂದ್ಯ, ಅದೂ ಫೈನಲ್‌ನಲ್ಲಿ ಸೋತಿದಕ್ಕೆ ತಂಡವನ್ನು ‘ದಂಡುಪಾಳ್ಯ’ಕ್ಕೆ…’ದಂಡಪಿಂಡ’ಗಳಿಗೆ ಹೋಲಿಸುತ್ತೀರಿ ಎಂದರೆ ನಾಚಿಕೆ ಆಗಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ದೊಡ್ಡ ಗಣೇಶ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದರು ಕ್ರುಶಿಕ ಎನ್ನುವವರು, “ಪಾಕಿಸ್ತಾನದ ಜೊತೆಗಿನ ಆಟದ ಬಗ್ಗೆ ಹೀಗೆ ವರದಿ ಮಾಡಿ ಮಾಡಿ ಅದನ್ನೇ ನ್ಯೂಜಿಲೆಂಡ್ ಜೊತೆಗಿನ ಆಟಕ್ಕೂ ಹೇಳುತ್ತಾ ಇದ್ದಾರೆ. ಪಾಕಿಸ್ತಾನದ ಜೊತೆಗಿನ ಆಟದ ಸಮಯದಲ್ಲಿ ಕಿತ್ತೊದವರಂತೆ ಬರೆಯುವವರನ್ನು ಜಾಡಿಸಿದ್ದಿದ್ರೆ, ಈಗ ಬುದ್ದಿ ಕಲ್ತಿರೋರು. ಇಂಡಿಯಾದ ಜನಕ್ಕೆ ಭಾವನಾತ್ಮಕತೆಯೇ ಜಾಸ್ತಿ, ಅದೇ ಆಸ್ತಿ. ಆಟವನ್ನು ಆಟ ಅಂತ ನೋಡಲ್ಲ!” ಎಂದು ಹೇಳಿದ್ದಾರೆ.

ದಿಗ್ವಿಜಯ ನ್ಯೂಸ್ ಈ ಹಿಂದೆ ‘ಓಂ ಫಿನಿಶಾಯ ನಮಃ’ ಎಂಬ ಶಿರ್ಷಿಕೆಯನ್ನು ನೀಡಿ ಕಾರ್ಯಕ್ರಮವನ್ನು ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ ಕಾರ್ಕಳ ಅವರು, ‘ದಿಗ್ವಿಜಯದ ಶಬ್ಧ ದಾರಿದ್ರ್ಯ’ ಎಂದು ಹೇಳಿದ್ದರು.

ಅವರು, “ಇದು ಧೋನಿ ಎಂಬ ಮಹಾನ್ ಕ್ರಿಕೆಟಿಗನ ನಿವೃತ್ತಿಯ ಕುರಿತ ನುಡಿಚಿತ್ರಕ್ಕೆ ದಿಗ್ವಿಜಯ ಟಿವಿ ನೀಡಿದ ತಲೆಬರಹ.. ಅಲ್ಲಲ್ಲ ತಲೆಕೆಟ್ಟ ಬರಹ..!! ಭಾರತೀಯ ಕ್ರಿಕೆಟ್ ಚರಿತ್ರೆಯಲ್ಲೊಂದು ಅದ್ಭುತ ಅಧ್ಯಾಯ ಬರೆದ ಜಂಟಲ್ ಮ್ಯಾನ್ ಯಾರನ್ನು ಫಿನಿಶ್ ಮಾಡಿದರು? ಅಥವಾ ಅವರನ್ನೇ ಅವರು ಫಿನಿಶ್ ಮಾಡಿಕೊಂಡ್ರಾ? ತಲೆಬರಹ ಕೊಡುವವರಿಗೇನಾದರೂ ತಲೆಕೆಟ್ಟಿದೆಯೇ? ನುಡಿಚಿತ್ರ ಕಾರ್ಯಕ್ರಮದಲ್ಲಿ ಸೊಗಸಾದ ‘ಮಾಹಿ’ತಿಯನ್ನೇನೋ ನೀಡಿದರು. ಆದರೆ ನೆಗೆಟಿವ್ ಅರ್ಥ ಕೊಡುವ ತಲೆಬರಹವೇಕೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...