HomeUncategorizedದೇಸೀ ಗೋವುಗಳು ನಮ್ಮ ತಾಯಿಯಿದ್ದಂತೆ: ವಿದೇಶಿ ಗೋವುಗಳು ಆಂಟಿಯಂತೆ ಎಂದ ಭೂಪ!

ದೇಸೀ ಗೋವುಗಳು ನಮ್ಮ ತಾಯಿಯಿದ್ದಂತೆ: ವಿದೇಶಿ ಗೋವುಗಳು ಆಂಟಿಯಂತೆ ಎಂದ ಭೂಪ!

- Advertisement -
- Advertisement -

ಕೆಲ ಬುದ್ಧಿಜೀವಿಗಳು ಬೀದಿಗೆ ಬಂದು ಗೋಮಾಂಸ ಸೇವಿಸಿದರು. ಯಾರು ಗೋಮಾಂಸ ತಿಂದರೋ ಅವರು ನಾಯಿಯ ಮಾಂಸವನ್ನೂ ಬೇಕಾದರೂ ತಿನ್ನಲಿ. ಇದು ಅವರ ಆರೋಗ್ಯವನ್ನು ಸ್ಥಿರವಾಗಿರಿಸುತ್ತದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್ ಘೋಷ್  ಅವಹೇಳನ ಮಾಡಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಾಗುವ ದಿಲೀಪ್ ಘೋಷ್ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

ಕೋಲ್ಕತ್ತಾ ಸಮೀಪದ ಬರ್ದ್ವಾನ್‌ನ ಗೋಪ ಅಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದ ದಿಲೀಪ್ ಘೋಷ್, ಭಾರತ ಮೂಲದ ಗೋವುಗಳಲ್ಲಿ ಬಂಗಾರದ ಅಂಶವಿದೆ. ವಿದೇಶಿ ಹಸುಗಳು ನಮ್ಮ ತಾಯಂದಿರಲ್ಲ ಅವರು ಆಂಟಿಗಳಿದ್ದಂತೆ ಎಂದು ಹೀಯಾಳಿಸಿದ್ದಾರೆ. ನಮ್ಮ ದೇಸಿ ಗೋವುಗಳಲ್ಲಿ ವಿಶೇಷ ಗುಣವಿದ್ದು, ಬಂಗಾರ ಮಿಶ್ರಿತ ಹಾಲು ನೀಡುತ್ತದೆ. ದೇಸೀ ಗೋವುಗಳ ಕಣ ಕಣದಲ್ಲಿ ಬಂಗಾರದ ಹಾಲು ನೀಡುವ ಗುಣವಿದ್ದು, ಸೂರ್ಯನ ಶಾಖದಿಂದ ಉತ್ತಮ ಹಾಲು ಕೊಡುತ್ತವೆ. ಅಂತಹ ಗೋವುಗಳನ್ನು ಮಾತ್ರ ಇಟ್ಟುಕೊಳ್ಳಬೇಕು. ದೇಸಿ ಗೋವಿನ ಹಾಲು ಕುಡಿಯುವುದರಿಂದ ನಾವು ಆರೋಗ್ಯವಂತರಾಗಿರುತ್ತೇವೆ ಮತ್ತು ಕಾಯಿಲೆಗಳಿಂದ ದೂರವಿರಬಹುದು ಎಂದು ಹೇಳಿದರು.

ಅಲ್ಲದೇ ವಿದೇಶಿ ತಳಿಯ ಗೋವುಗಳು, ಗೋವುಗಳೇ ಅಲ್ಲ. ಅವು ಒಂದು ರೀತಿಯ ಪ್ರಾಣಿಗಳು. ವಿದೇಶಿ ತಳಿಯ ಗೋವುಗಳು, ಹಸುವಿನಂತೆ ಒದರುವುದಿಲ್ಲ. ಅವು ನಮ್ಮ ಗೋಮಾತಾ ಅಲ್ಲ ಆದರೆ ಅವು ನಮ್ಮ ಆಂಟಿಗಳು. ಇವು ದೇಶದ ಬೆಳವಣಿಗೆಗೆ ಉತ್ತಮವಲ್ಲ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ದೇಸೀ ಗೋವುಗಳು ನಮ್ಮ ತಾಯಿಯಿದ್ದಂತೆ. ಅವುಗಳೊಂದಿಗೆ ಯಾರಾದರೂ ಕೆಟ್ಟದಾಗಿ ವರ್ತಿಸಿದರೆ, ನಾವು ಹಾಗೆಯೇ ತಿರುಗೇಟು ಕೊಡಬೇಕು. ಭಾರತದಲ್ಲಿ ಗೋ ಹತ್ಯೆ ಮಾಡುವುದು ಮಹಾ ಅಪರಾಧ. ಬುದ್ಧಿಜೀವಿಗಳು ರಸ್ತೆಗಿಳಿದು ಗೋ ಮಾಂಸ ತಿನ್ನುವ ಬದಲು, ವಿದೇಶಿ ತಳಿಯ ನಾಯಿಗಳನ್ನು ತಿನ್ನಲಿ. ಯಾವುದೇ ಪ್ರಾಣಿಯ ಮಾಂಸ ತಿಂದರೂ ಬುದ್ಧಿಜೀವಿಗಳ ಆರೋಗ್ಯ ಸ್ಥಿರವಾಗಿರುತ್ತದೆ. ಹಾಗಾಗಿ ರಸ್ತೆಯಲ್ಲಿ ತಿನ್ನುವ ಬದಲು ಮನೆಯಲ್ಲೇ ತಿನ್ನಲಿ.   ಹೊರಗೆ  ಬಂದು ತಿನ್ನುವಂಥದ್ದು ಏನಿದೆ..? ಎಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...