Homeಚಳವಳಿಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.

- Advertisement -
- Advertisement -

ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಷಯವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಟ್ವಿಟ್ಟರ್‌ ವಾಗ್ವಾದಕ್ಕೆ ಇಳಿದಿದ್ದ ಬಾಲಿವುಡ್​ ಗಾಯಕ-ನಟ ದಿಲ್ಜಿತ್​ ದೋಸಂಜ್ ಚಳಿಯಲ್ಲಿ ನಡುಗುತ್ತಿರುವ ಹೋರಾಟನಿರತ ರೈತರಿಗಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ನಿನ್ನೆ ಭಾಗವಹಿಸಿದ್ದ ದಿಲ್ಜಿತ್ ದೋಸಾಂಜ್, ಅನ್ನದಾತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರೈತರ ಬಗ್ಗೆ ಅವಹಳನಕಾರಿಯಾಗಿ ಮಾತಾಡಿದ್ದ ನಟಿ ಕಂಗನಾ ಜೊತೆಗಿನ ಟ್ವಿಟರ್‌ ಜಗಳದಲ್ಲಿ ರೈತರ ಪರವಹಿಸಿ ಸುದ್ದಿಯಾಗಿದ್ದರು ದಿಲ್ಜಿತ್ ದೋಸಂಜ್.

ಕೊರೆಯುವ ಚಳಿಯಲ್ಲೂ ಕೇಂದ್ರ ಸರ್ಕಾರದ ದೌರ್ಜನ್ಯಗಳಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ದಿಲ್ಜಿತ್ ದೋಸಂಜ್ ಒಂದು ಕೋಟಿ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪಂಜಾಬಿ ಗಾಯಕ ಸಿಂಗಾ ಎಂಬವರು ಇನ್ಸ್​​ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ದಿಲ್ಜಿತ್ ದೋಸಂಜ್‌ ಅವರಿಗೆ ಧನ್ಯವಾದ ಹೇಳಿದ್ದಾರೆ. 10 ರೂಪಾಯಿ ಕೊಟ್ಟರು ಹೇಳಿಕೊಳ್ಳುವ ಜನರ ಮಧ್ಯೆ ನೀವು ಉದಾರವಾದ ದೇಣಿಗೆ ನೀಡಿದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡದೇ ದೊಡ್ಡತನ ಮೆರೆದಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಧನ್ಯವಾದಗಳು ಸಹೋದರ, ನೀವು ರೈತರಿಗೆ, ಅವರ ಬೆಚ್ಚಗಿನ ಬಟ್ಟೆಗಳಿಗೆ 1 ಕೋಟಿ ರೂ. ಕೊಟ್ಟಿದ್ದೀರಿ, ಮತ್ತು ಯಾರಿಗೂ ಈ ಬಗ್ಗೆ ತಿಳಿದಿಲ್ಲ. ನೀವು ಇದರ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು 10 ರೂ. ದೇಣಿಗೆ ನೀಡಿದರು ಜನ ಮುಚ್ಚಿಟ್ಟುಕೊಳ್ಳುವುದಿಲ್ಲ” ಎಂದಿದ್ದಾರೆ.

ನಿನ್ನೆ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಲು ಮತ್ತು ಅವರಲ್ಲಿ ಮತ್ತಷ್ಟು ಉತ್ಸಾಹ ತುಂಬಲು ಪಂಜಾಬಿ ಗಾಯಕರು ಸಿಂಗೂ ಗಡಿಯಲ್ಲಿ ಜಮಾಯಿಸಿದ್ದರು.  ದಿಲ್ಜಿತ್ ದೋಸಂಜ್, ಗುರ್ಷಾಬಾದ್ ಸಿಂಗ್ ಕುಲಾರ್ ಮತ್ತು ಹಾರ್ಫ್ ಚೀಮಾ ಸೇರಿದಂತೆ ಹಲವಾರು ಗಾಯಕರು ಕಾಣಿಸಿಕೊಂಡರು.

“ನಾವು ನಮ್ಮ ಹಾಡುಗಳ ಮೂಲಕ ರೈತರ ಮನೋಸ್ಥೈರ್ಯವನ್ನು ಹೆಚ್ಚಿಸುತ್ತಿದ್ದೇವೆ” ಎಂದು ಗಾಯಕ ಗುರ್ಷಾಬಾದ್ ಎಸ್ ಕುಲಾರ್ ಹೇಳಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಇನ್ನು, ಸಿಂಗೂ ಗಡಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ದೋಸಂಜ್, “ಎಲ್ಲ ರೈತರಿಗೆ ಹ್ಯಾಟ್ಸ್ ಆಫ್, ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಪ್ರತಿಭಟನೆಯನ್ನು ಯಾರು ದಾರಿತಪ್ಪಿಸಬಾರದು” ಎಂದರು.

’ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

You have created a new history,' says Diljit Dosanjh to protesting farmers
PC: ANI

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.


ಇದನ್ನೂ ಓದಿ: ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...