Homeಚಳವಳಿಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.

- Advertisement -
- Advertisement -

ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಷಯವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಟ್ವಿಟ್ಟರ್‌ ವಾಗ್ವಾದಕ್ಕೆ ಇಳಿದಿದ್ದ ಬಾಲಿವುಡ್​ ಗಾಯಕ-ನಟ ದಿಲ್ಜಿತ್​ ದೋಸಂಜ್ ಚಳಿಯಲ್ಲಿ ನಡುಗುತ್ತಿರುವ ಹೋರಾಟನಿರತ ರೈತರಿಗಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ನಿನ್ನೆ ಭಾಗವಹಿಸಿದ್ದ ದಿಲ್ಜಿತ್ ದೋಸಾಂಜ್, ಅನ್ನದಾತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರೈತರ ಬಗ್ಗೆ ಅವಹಳನಕಾರಿಯಾಗಿ ಮಾತಾಡಿದ್ದ ನಟಿ ಕಂಗನಾ ಜೊತೆಗಿನ ಟ್ವಿಟರ್‌ ಜಗಳದಲ್ಲಿ ರೈತರ ಪರವಹಿಸಿ ಸುದ್ದಿಯಾಗಿದ್ದರು ದಿಲ್ಜಿತ್ ದೋಸಂಜ್.

ಕೊರೆಯುವ ಚಳಿಯಲ್ಲೂ ಕೇಂದ್ರ ಸರ್ಕಾರದ ದೌರ್ಜನ್ಯಗಳಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ದಿಲ್ಜಿತ್ ದೋಸಂಜ್ ಒಂದು ಕೋಟಿ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪಂಜಾಬಿ ಗಾಯಕ ಸಿಂಗಾ ಎಂಬವರು ಇನ್ಸ್​​ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ದಿಲ್ಜಿತ್ ದೋಸಂಜ್‌ ಅವರಿಗೆ ಧನ್ಯವಾದ ಹೇಳಿದ್ದಾರೆ. 10 ರೂಪಾಯಿ ಕೊಟ್ಟರು ಹೇಳಿಕೊಳ್ಳುವ ಜನರ ಮಧ್ಯೆ ನೀವು ಉದಾರವಾದ ದೇಣಿಗೆ ನೀಡಿದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡದೇ ದೊಡ್ಡತನ ಮೆರೆದಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಧನ್ಯವಾದಗಳು ಸಹೋದರ, ನೀವು ರೈತರಿಗೆ, ಅವರ ಬೆಚ್ಚಗಿನ ಬಟ್ಟೆಗಳಿಗೆ 1 ಕೋಟಿ ರೂ. ಕೊಟ್ಟಿದ್ದೀರಿ, ಮತ್ತು ಯಾರಿಗೂ ಈ ಬಗ್ಗೆ ತಿಳಿದಿಲ್ಲ. ನೀವು ಇದರ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು 10 ರೂ. ದೇಣಿಗೆ ನೀಡಿದರು ಜನ ಮುಚ್ಚಿಟ್ಟುಕೊಳ್ಳುವುದಿಲ್ಲ” ಎಂದಿದ್ದಾರೆ.

ನಿನ್ನೆ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಲು ಮತ್ತು ಅವರಲ್ಲಿ ಮತ್ತಷ್ಟು ಉತ್ಸಾಹ ತುಂಬಲು ಪಂಜಾಬಿ ಗಾಯಕರು ಸಿಂಗೂ ಗಡಿಯಲ್ಲಿ ಜಮಾಯಿಸಿದ್ದರು.  ದಿಲ್ಜಿತ್ ದೋಸಂಜ್, ಗುರ್ಷಾಬಾದ್ ಸಿಂಗ್ ಕುಲಾರ್ ಮತ್ತು ಹಾರ್ಫ್ ಚೀಮಾ ಸೇರಿದಂತೆ ಹಲವಾರು ಗಾಯಕರು ಕಾಣಿಸಿಕೊಂಡರು.

“ನಾವು ನಮ್ಮ ಹಾಡುಗಳ ಮೂಲಕ ರೈತರ ಮನೋಸ್ಥೈರ್ಯವನ್ನು ಹೆಚ್ಚಿಸುತ್ತಿದ್ದೇವೆ” ಎಂದು ಗಾಯಕ ಗುರ್ಷಾಬಾದ್ ಎಸ್ ಕುಲಾರ್ ಹೇಳಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಇನ್ನು, ಸಿಂಗೂ ಗಡಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ದೋಸಂಜ್, “ಎಲ್ಲ ರೈತರಿಗೆ ಹ್ಯಾಟ್ಸ್ ಆಫ್, ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಪ್ರತಿಭಟನೆಯನ್ನು ಯಾರು ದಾರಿತಪ್ಪಿಸಬಾರದು” ಎಂದರು.

’ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

You have created a new history,' says Diljit Dosanjh to protesting farmers
PC: ANI

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.


ಇದನ್ನೂ ಓದಿ: ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...