Homeಚಳವಳಿಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.

- Advertisement -
- Advertisement -

ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಷಯವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಟ್ವಿಟ್ಟರ್‌ ವಾಗ್ವಾದಕ್ಕೆ ಇಳಿದಿದ್ದ ಬಾಲಿವುಡ್​ ಗಾಯಕ-ನಟ ದಿಲ್ಜಿತ್​ ದೋಸಂಜ್ ಚಳಿಯಲ್ಲಿ ನಡುಗುತ್ತಿರುವ ಹೋರಾಟನಿರತ ರೈತರಿಗಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ನಿನ್ನೆ ಭಾಗವಹಿಸಿದ್ದ ದಿಲ್ಜಿತ್ ದೋಸಾಂಜ್, ಅನ್ನದಾತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರೈತರ ಬಗ್ಗೆ ಅವಹಳನಕಾರಿಯಾಗಿ ಮಾತಾಡಿದ್ದ ನಟಿ ಕಂಗನಾ ಜೊತೆಗಿನ ಟ್ವಿಟರ್‌ ಜಗಳದಲ್ಲಿ ರೈತರ ಪರವಹಿಸಿ ಸುದ್ದಿಯಾಗಿದ್ದರು ದಿಲ್ಜಿತ್ ದೋಸಂಜ್.

ಕೊರೆಯುವ ಚಳಿಯಲ್ಲೂ ಕೇಂದ್ರ ಸರ್ಕಾರದ ದೌರ್ಜನ್ಯಗಳಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ದಿಲ್ಜಿತ್ ದೋಸಂಜ್ ಒಂದು ಕೋಟಿ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪಂಜಾಬಿ ಗಾಯಕ ಸಿಂಗಾ ಎಂಬವರು ಇನ್ಸ್​​ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ದಿಲ್ಜಿತ್ ದೋಸಂಜ್‌ ಅವರಿಗೆ ಧನ್ಯವಾದ ಹೇಳಿದ್ದಾರೆ. 10 ರೂಪಾಯಿ ಕೊಟ್ಟರು ಹೇಳಿಕೊಳ್ಳುವ ಜನರ ಮಧ್ಯೆ ನೀವು ಉದಾರವಾದ ದೇಣಿಗೆ ನೀಡಿದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡದೇ ದೊಡ್ಡತನ ಮೆರೆದಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಧನ್ಯವಾದಗಳು ಸಹೋದರ, ನೀವು ರೈತರಿಗೆ, ಅವರ ಬೆಚ್ಚಗಿನ ಬಟ್ಟೆಗಳಿಗೆ 1 ಕೋಟಿ ರೂ. ಕೊಟ್ಟಿದ್ದೀರಿ, ಮತ್ತು ಯಾರಿಗೂ ಈ ಬಗ್ಗೆ ತಿಳಿದಿಲ್ಲ. ನೀವು ಇದರ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು 10 ರೂ. ದೇಣಿಗೆ ನೀಡಿದರು ಜನ ಮುಚ್ಚಿಟ್ಟುಕೊಳ್ಳುವುದಿಲ್ಲ” ಎಂದಿದ್ದಾರೆ.

ನಿನ್ನೆ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಲು ಮತ್ತು ಅವರಲ್ಲಿ ಮತ್ತಷ್ಟು ಉತ್ಸಾಹ ತುಂಬಲು ಪಂಜಾಬಿ ಗಾಯಕರು ಸಿಂಗೂ ಗಡಿಯಲ್ಲಿ ಜಮಾಯಿಸಿದ್ದರು.  ದಿಲ್ಜಿತ್ ದೋಸಂಜ್, ಗುರ್ಷಾಬಾದ್ ಸಿಂಗ್ ಕುಲಾರ್ ಮತ್ತು ಹಾರ್ಫ್ ಚೀಮಾ ಸೇರಿದಂತೆ ಹಲವಾರು ಗಾಯಕರು ಕಾಣಿಸಿಕೊಂಡರು.

“ನಾವು ನಮ್ಮ ಹಾಡುಗಳ ಮೂಲಕ ರೈತರ ಮನೋಸ್ಥೈರ್ಯವನ್ನು ಹೆಚ್ಚಿಸುತ್ತಿದ್ದೇವೆ” ಎಂದು ಗಾಯಕ ಗುರ್ಷಾಬಾದ್ ಎಸ್ ಕುಲಾರ್ ಹೇಳಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಇನ್ನು, ಸಿಂಗೂ ಗಡಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ದೋಸಂಜ್, “ಎಲ್ಲ ರೈತರಿಗೆ ಹ್ಯಾಟ್ಸ್ ಆಫ್, ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಪ್ರತಿಭಟನೆಯನ್ನು ಯಾರು ದಾರಿತಪ್ಪಿಸಬಾರದು” ಎಂದರು.

’ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

You have created a new history,' says Diljit Dosanjh to protesting farmers
PC: ANI

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.


ಇದನ್ನೂ ಓದಿ: ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...