Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...