Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...