Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...