Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...