Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...