Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...