Homeಅಂತರಾಷ್ಟ್ರೀಯವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

ವಜ್ರದ ಹುಡುಕಾಟಕ್ಕೆ ನೆರೆದ ಸಾವಿರಾರು ಜನರು: ದಕ್ಷಿಣ ಆಫ್ರಿಕಾದ ಹಳ್ಳಿಯಲ್ಲಿ ಜನಸಾಗರ

- Advertisement -
- Advertisement -

ಚಿನ್ನ, ವಜ್ರಗಳು ಸಿಗುವುದಾದರೆ ಜನರು ಎಷ್ಟು ದೂರ ಬೇಕಾದರೂ ಹುಡುಕಾಟವನ್ನು ನಡೆಸುತ್ತಾರೆ. ನಿಧಿ ಶೋಧವನ್ನು ನಡೆಸುತ್ತಾರೆ. ನೆಲದಾಳವನ್ನು ಅಗೆಯುತ್ತಾರೆ. ಎಲ್ಲೊ ಕೆಲವರು ರಾತ್ರಿ ಹೊತ್ತು ನಿಧಿ ಶೋಧವನ್ನು ನಡೆಸಿರುವ, ನೆಲವನ್ನು ಅಗೆದಿರುವ, ದೇವಸ್ಥಾನಗಳ ಸ್ಥಳವನ್ನು ಒಡೆದಿರುವ ಘಟನೆಗಳು ಇದುವರೆಗೆ ನಡೆಯುತ್ತಿದ್ದವು. ಸಾವಿರಾರು ಜನರು ವಜ್ರಗಳಿಗಾಗಿ ಒಮ್ಮೆಲೆ ಮುಗಿಬಿದ್ದು ನೆಲವನ್ನು ಅಗೆಯುತ್ತಿರುವ ಘಟನೆಗಳು ಇದುವರೆಗೆ ವರದಿಯಾಗಿಲ್ಲ. ಈಗ ನೂರಾರು ಜನರು ತಮ್ಮಷ್ಟಕ್ಕೆ ಅನೇಕ ದಿನಗಳಿಂದ ನಿಧಿಗಾಗಿ ನೆಲವನ್ನು ಅಗೆಯುತ್ತಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.

ದಕ್ಷಿಣ ಆಫ್ರಿಕಾ ಜಗತ್ತಿನಲ್ಲಿಯೇ ಅತಿಹೆಚ್ಚು ವಜ್ರದ ಗಣಿಯನ್ನು ಹೊಂದಿರುವ ದೇಶ. ಜಗತ್ತಿನ ಮುಕ್ಕಾಲು ಪಾಲು ವಜ್ರಗಳು ದಕ್ಷಿಣ ಆಫ್ರಿಕಾದಿಂದಲೇ ರಫ್ತಾಗುತ್ತವೆ. ದಕ್ಷಿಣ ಆಫ್ರಿಕಾದ ಹತ್ತಾರು ವಜ್ರದ ಗಣಿಯಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಾರೆ. ಜನರು ಹೊಸ ಹೊಸ ಪ್ರದೇಶಗಳಲ್ಲಿ ವಜ್ರದ ನಿಕ್ಷೇಪ ಸಿಗುವ ನಿರೀಕ್ಷೆಯಿಂದ ನೆಲವನ್ನು ಅಗೆಯುವ ಕೆಲಸವನ್ನೂ ಮಾಡುತ್ತಾರೆ. ಆದರೆ ದಕ್ಷಿಣ ಆಫ್ರಿಕಾದ ಪ್ರಾಂತ್ಯದ ಕ್ವಾ ಜುಲು ನಟಾಲ್‌ನ ಒಂದು ಸಣ್ಣ ಹಳ್ಳಿಯಲ್ಲಿ ಕಳೆದ ಒಂದು ತಿಂಗಳಿಂದ ವಿಚಿತ್ರ ಘಟನೆಗಳು ನಡೆಯತೊಡಗಿವೆ.

ಕೆಲವು ದಿನಗಳ ಹಿಂದೆ ನಟಾಲ್‌ನ ಸಣ್ಣ ಹಳ್ಳಿಯಲ್ಲಿ ದಾರಿ ಹೋಕರೊಬ್ಬರಿಗೆ ವಜ್ರದ ತುಂಡೊಂದು ಸಿಕ್ಕಿತು ಎಂಬ ಸುದ್ದಿ ಹರಿದಾಡತೊಡಗಿತ್ತು. ವಜ್ರ ಸಿಕ್ಕಿದ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆಯೂ ಹರಡಿ ಮಾರನೇ ದಿನದಿಂದ ಸಾವಿರಾರು ಜನರು ನಟಾಲ್ ಹಳ್ಳಿಗೆ ಬಂದು ನೆಲ ಅಗೆಯಲು ಪ್ರಾರಂಭಿಸಿದ್ದಾರೆ. ವಜ್ರದ ಹುಡುಕಾಟದಲ್ಲಿ ತೊಡಗಿದ ಕೆಲವರು ತಮಗೆ ವಜ್ರ ಸಿಕ್ಕಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವರು ನಮ್ಮಲ್ಲಿ ತುಂಬಾ ಬಡತನವಿದೆ. ಒಳ್ಳೆಯ ಆಹಾರ, ಒಳ್ಳೆಯ ಬಟ್ಟೆ, ಒಳ್ಳೆಯ ಮನೆ, ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಒಂದು ವೇಳೆ ವಜ್ರ ದೊರೆತರೆ ನಮಗೆ ಒಳ್ಳೆಯ ಜೀವನ ಸಿಗಬಹುದು ಎಂಬ ನಿರೀಕ್ಷೆ ಇದೆ. ಹಾಗಾಗಿ ಇಲ್ಲಿ ವಜ್ರದ ಶೋಧಕ್ಕೆ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರ್ಕಾರ ನಟಾಲು ಗ್ರಾಮದಲ್ಲಿ ವಜ್ರದ ನಿಕ್ಷೇಪವಿರುವುದನ್ನು ಇದುವರೆಗೆ ಖಚಿತ ಪಡಿಸಿಲ್ಲ. ಸರ್ಕಾರದ ಭೂಗೋಳ ಶಾಸ್ತ್ರಜ್ಞರು ನಟಾಲು ಹಳ್ಲಿಯಲ್ಲಿ ವಜ್ರ ಇರುವ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾದ ಕಾನೂನಿನ ಪ್ರಕಾರ ಜನರು ವಜ್ರವನ್ನು ನೆಲದಾಳದಿಂದ ತೆಗೆಯುವಂತಿಲ್ಲ. ನೆಲದಡಿಯ ಖನಿಜಗಳು ಸರ್ಕಾರಕ್ಕೆ ಸೇರಿದ್ದಾಗಿದೆ.

ಕಾನೂನು ಏನೇ ಇರಲಿ ನಟಾಲು ಗ್ರಾಮಕ್ಕೆ ವಜ್ರ ಹುಡುಕಲು ಬರುವವರ ಸಂಖ್ಯೆ ದಿನದಿಂದ ಹೆಚ್ಚುತ್ತಲೇ ಇದೆ. ಜನರು ವಜ್ರದಿಂದ ತಮ್ಮ ಜೀವನ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿ ಅದೃಷ್ಟ ಪರೀಕ್ಷೆಯಲ್ಲಿ ತೊಡಗುತ್ತಲೆ ಇದ್ದಾರೆ.


ಇದನ್ನೂ ಓದಿ : ಸರ್ಕಾರದ ಸಹಾಯಧನ ಕೇಂದ್ರ ಸರ್ಕಾರದ ಸಾಲಕ್ಕೆ ವಜಾ: ಬೀದಿ ಬದಿ ವ್ಯಾಪಾರಿಗಳನ್ನು ತಲುಪದ ಸರ್ಕಾರದ ನೆರವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...