Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...