Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...