Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...