Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...