Homeಕರ್ನಾಟಕದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ನಮ್ಮ ಸಂವಿಧಾನ ಎಲ್ಲ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸಿದೆ. ಅದರ ಭಾಗವಾಗಿ ದಲಿತರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ. ಆದರೆ ಸ್ವಾಭಿಮಾನ ಮೆರೆದ ದಲಿತರ ಆರ್ಥಿಕ ಮೂಲಗಳಿಗೆ ಸವರ್ಣಿಯರು ಅಡ್ಡಿಯುಂಟು ಮಾಡುವ ವಿದ್ಯಮಾನಗಳು ವರದಿಯಾಗುತ್ತಿವೆ. ಅದಕ್ಕೆ ಇತ್ತೀಚಿನ ಉದಾಹರಣೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕಿನ ದಿಂಡಗನೂರು ಪ್ರಕರಣ.

8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಲಾಗಿತ್ತು. ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದರು.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದರು. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದರು.

ದೇವಾಲಯಗಳಿಗೆ ದಲಿತರು ಪ್ರವೇಶಿಸಿದ ಬಳಿಕ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸವರ್ಣೀಯರನ್ನು ದಲಿತರು ಅವಲಂಬಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ದೇವಾಲಯ ಪ್ರವೇಶವನ್ನೇ ನೆಪವಾಗಿಟ್ಟುಕೊಂಡು ದಲಿತರನ್ನು ಮೂಲೆಗುಂಪು ಮಾಡುವ ಪ್ರವೃತ್ತಿಯನ್ನು ಎಲ್ಲೆಡೆ ಕಾಣಬಹುದು. ಇದಕ್ಕೆ ದಿಂಡಿಗನೂರು ಗ್ರಾಮ ಒಂದು ಉದಾಹರಣೆಯಷ್ಟೇ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ದಿಂಡಗನೂರು ದಲಿತ ಮುಖಂಡ, ಭೀಮ್‌ ಆರ್ಮಿಯ ಸಂಘಟಕ ನಟರಾಜ್‌‌ ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ದೇವಾಲಯ ಪ್ರವೇಶೋತ್ತರ ಪರಿಸ್ಥಿತಿಗಳನ್ನು ಬಿಚ್ಚಿಟ್ಟರು.

“ನಾವು ದೇವಾಲಯ ಪ್ರವೇಶ ಮಾಡಿದ್ದು ಸಾಮಾಜಿಕ ನ್ಯಾಯಕ್ಕಾಗಿ. ನಾವು ಕೂಡ ಮನುಷ್ಯರು ಎಂಬುದನ್ನು ಸಾರುವುದಕ್ಕಾಗಿ. ನಮ್ಮ ಧಾರ್ಮಿಕ ಹಕ್ಕಿಗಾಗಿ ದೇವಾಲಯ ಪ್ರವೇಶಿಸಿದೆವು. ಆದರೆ ಆನಂತರದಲ್ಲಿ ನಮ್ಮ ಮೇಲೆ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕುವುದು ನಡೆಯುತ್ತಿದೆ” ಎಂದರು.

“ನಮ್ಮ ಊರಿನಲ್ಲಿ ದಲಿತರು ಸೇರಿ ಸುಮಾರು ಏಟೆಂಟು ಜಾತಿಗಳಿವೆ. ದಲಿತರಿಗೆ ಮಾತ್ರ ಬಹಿಷ್ಕಾರ ಹಾಕುವ ಪದ್ಧತಿ ರೂಢಿಗೆ ಬಂದಿದೆ. ನಾವು ದೇವಾಲಯ ಪ್ರವೇಶಿಸಿದ ಬಳಿಕ ಸವರ್ಣೀಯ ಮುಖಂಡರು ಸಭೆ ಸೇರಿ ಅಘೋಷಿತ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ದಲಿತರ ಬಳಿ ಯಾವುದೇ  ಮಾತುಕತೆ, ವ್ಯವಹಾರ ಮಾಡಬೇಡಿ ಎಂದು ತಮ್ಮ ಜಾತಿಯ ಜನರಿಗೆ ತಿಳಿಸಿದ್ದಾರೆ. ನಮ್ಮ ಜೊತೆ ಮಾತನಾಡಿದವರಿಗೆ ದಂಡ ಹಾಕುವ ಪದ್ಧತಿಯನ್ನು ಆಂತರಿಕವಾಗಿ ಮಾಡಿಕೊಂಡಿದ್ದಾರೆ. ಈಗಲೂ ಅದು ಚಾಲ್ತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

“ಕೂಲಿಯನ್ನೇ ನಂಬಿಕೊಂಡಿದ್ದ ದಲಿತರನ್ನು ಕೂಲಿಗೆ ಕರೆಯುತ್ತಿಲ್ಲ. ಕೇಳಿದರೆ ಅದಕ್ಕೆ ಸಬೂಬುಗಳನ್ನು ಹೇಳುತ್ತಿದ್ದಾರೆ. ಇಷ್ಟು ದಿನ ಕೆಲಸ ಇತ್ತು, ಕರೆಯುತ್ತಿದ್ದೆವು; ಈಗ ಕೆಲಸ ಇಲ್ಲ ಎನ್ನುತ್ತಾರೆ. ಮಿಲ್‌ ಅಂಗಡಿಗೆ ದಲಿತರು ಹೋದರೆ ನಮಗೆ ಹುಷಾರಿಲ್ಲ, ನಾವು ಮಿಲ್‌ ನಿಲ್ಲಿಸಬೇಕೆಂದಿದ್ದೇವೆ ಎನ್ನುತ್ತಾರೆ. ಅವರಿಗೆ ಸರಿಸಮಾನವಾಗಿ ದೇವಾಲಯ ಪ್ರವೇಶಿಸಿದ್ದೇ ಅವರಿಗೆ ಸಹಿಸಲು ಆಗಿಲ್ಲ. ನಾವು ಯಾವಾಗಲೂ ಅವರ ಕಾಲಡಿ ಇರಬೇಕೆಂಬುದು ಅವರ ಮನಸ್ಥಿತಿ. ಹೊರಗಿನ ಪ್ರಪಂಚಕ್ಕೆ ಇದು ಗೊತ್ತಾಗುತ್ತಿಲ್ಲ” ಎಂದು ವಿಷಾದಿಸಿದರು.

“ನಾವು ಕೂಲಿನಾಲಿ ಮಾಡಿಕೊಂಡು ಹೇಗೋ ಇದ್ದೆವು. ಸಂಘಟಕರೆಲ್ಲ ಸೇರಿ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದೇ ಇದಕ್ಕೆಲ್ಲ ಕಾರಣ ಎಂದು ಕೆಲವು ದಲಿತರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ದೇವಾಲಯಕ್ಕೆ ಹೋಗಿ ನಮಗೆ ಆರ್ಥಿಕವಾಗಿ ಹಿನ್ನೆಡೆಯಾಯಿತು. ಆದರೆ ಧಾರ್ಮಿಕ ಸ್ವತಂತ್ರವನ್ನು ಪಡೆದುಕೊಂಡಿದ್ದೇವೆ” ಎನ್ನುತ್ತಾರೆ ನಟರಾಜ್‌.

“ನಮಗೆ ಸರ್ಕಾರಿ ಸವಲತ್ತುಗಳನ್ನು ದೊರಕಿಸಿ, ಸ್ವಾವಲಂಬಿಗಳಾಗಲು ಅವಕಾಶವನ್ನು ಸರ್ಕಾರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಶಾಸಕರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ದಲಿತರ ಸ್ವಯಂ ಉದ್ಯೋಗಕ್ಕೆ ಜನಪ್ರತಿನಿಧಿಗಳು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಶ್ರೀಶಕ್ತಿ ಸಂಘವನ್ನು ಆರಂಭಿಸಿದ್ದೇವೆ. ಎಷ್ಟು ದಿನ ಸವರ್ಣೀಯರನ್ನೇ ಅವಲಂಬಿಸಲು ಸಾಧ್ಯ?” ಎಂದು ಕೇಳುವ ನಟರಾಜ್‌ ಅವರ ಪ್ರಶ್ನೆಯಲ್ಲಿ ಬಿಡುಗಡೆಯ ಮಾರ್ಗವಿದೆ. ಆದರೆ ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಬೆನ್ನೆಲುಬಾಗಿ ನಿಲ್ಲಬೇಕಿದೆ.


ಇದನ್ನೂ ಓದಿರಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವೆಲ್ಲಾ ಹುನ್ನಾರಗಳಿಗೆ ದಲಿತರು ಎದರಬಾರದು ಸರ್ಕಾರ ಮಧ್ಯಪ್ರವೇಶಿಸಿ ಅವರಿಗೆ ಭೂಮಿ ಸ್ವಯಂ ಉದ್ಯೋಗ ಸಾಲಸೌಲಭ್ಯ ನೀಡಿ ಅವರ ಗೌಲವಯುತ ಬದುಕಿಗೆ ನೆರವಾಗಬೇಕು ವಿದ್ಯಾವಂತ ದಲಿತರ ಜವಾಬ್ದಾರಿಯು ಹೆಚ್ಚಿದೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...