Homeಅಂಕಣಗಳುಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ...!

ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

- Advertisement -
- Advertisement -

ಗುಲಾಬಿ ಅಂತ ನಾವು ಯಾವುದನ್ನು ಕರೀತೀವೋ,

ಅದರ ಹೆಸರು ಏನಿದ್ದರೇನು ಸುಗಂಧ ಅಷ್ಟೇ ಸಿಹಿಯಲ್ಲವೇ ?

ಅಂತ ಕವಿಯೊಬ್ಬ ಸುಮಾರು 400 ವರ್ಷ ಹಿಂದ ಒದರಿ ಹೋದ.

ಅವನ ಹೆಸರು ವಿಲಿಯಮ್ ಷೇಕ್ಸ್‌ಪಿಯರ್. ಅವ ಇಂಗ್ಲಂಡದೊಳಗ ನಾಟಕ, ಹಾಡು ಬರಕೊಂಡು ಇದ್ದಾಗ ನಮ್ಮಲ್ಲೇ ಮೊಹಮ್ಮದ್ ಜಲಾಲಉದ್ದೀನ್ ಅಕ್ಬರ್ ಅವರು ರಾಜ್ಯ ಆಳತಾ ಇದ್ದರು.

ನಮ್ಮಲ್ಲೆ ಬಹುಶಃ ಎಲ್ಲರಿಗೂ ಷೇಕ್ಸ್‌ಪಿಯರ್ ಅವರ ಹೆಸರು ಗೊತ್ತು. ಆದರ ಅಕ್ಬರ್ ಅನ್ನೋದು ಅವರ ಬಿರುದು, ಅವನ ಹೆಸರು ಅಲ್ಲ ಅಂತ ಗೊತ್ತಿಲ್ಲ.

ಅವ ಹೋಗಲಿ ಬಿಡ್ರಿ, ಮಹಾಭಾರತದಾಗ ಭೀಷ್ಮ ಅನ್ನೋದು ಗಂಗಾಪುತ್ರನ ಬಿರುದು, ಹೆಸರು ಅಲ್ಲ ಅನ್ನೋದು ಗೊತ್ತಿರೋದಿಲ್ಲ. ಹಂಗ ನೋಡಿದರ ಮಹಾಭಾರತದಾಗ ಬಿರುದುಗಳೇ ಜಾಸ್ತಿ, ಹೆಸರು ಕಮ್ಮಿ. ಇರಲಿ ಬಿಡ್ರಿ.

ಈಗ ನಮ್ಮ ಮುಂದೆ ಬಂದಿರೋ ವಿಷಯ ಅಂದ್ರ ವಿಶ್ವ ಸಂಸ್ಥೆಯವರು ನಮ್ಮ ದೇಶದ ಕೆಲವು ರಾಜ್ಯಗಳ ಕೋವಿಡ್ ನಿರ್ವಹಣೆಯನ್ನು ಹೊಗಳಿದ ಸುದ್ದಿ.

ಅಲ್ಲಿನ ತಜ್ಞರು ಮುಂಬೈ ಶಹರದ ಧಾರಾವಿ ಝೋಪಡ ಪಟ್ಟಿಯೊಳಗ ಹೆಂಗ ಈ ರೋಗ ನಿಯಂತ್ರಣಕ್ಕ ಬಂತು ಅನ್ನೋದನ್ನು ನೋಡಿ, ಅಲ್ಲೇ ಸರಿ ಆಗಬಹುದು ಅಂದ್ರ ಎಲ್ಲಾದರೂ ಆಗಬಹುದು ಅಂತ ಹೇಳಿದರು. ಮತ್ತು ಕೇರಳದ ರೋಗಿ ಪತ್ತೆ ವಿಧಾನ ಹಾಗೂ ಆಸ್ಪತ್ರೆ ನಿರ್ವಹಣೆ ವಿಷಯದ ಬಗ್ಗೆ ಹೊಗಳಿದರು. ಅವರು ಇನ್ನೊಂದು ವಿಷಯ ಪ್ರಸ್ತಾಪ ಮಾಡಿದರು.

ಅದು ಎನಪ ಅಂದ್ರ ಕೇರಳದ ಕುಟುಂಬಶ್ರೀ ವ್ಯವಸ್ಥೆ ಕೆಳಗ ನಡೀತಾ ಇರೋ ಕಮ್ಮಿ ಖರ್ಚಿನ ಸರ್ಕಾರಿ ಕ್ಯಾಂಟೀನ್‌ಗಳು ಹೆಂಗ ಬಡವರ ಹಸಿವನ್ನು ಕಮ್ಮಿ ಮಾಡಿದರು ಅನ್ನೋದನ್ನ ಎತ್ತಿ ತೋರಿಸಿದರು.

ಆ ರಾಜ್ಯದ 510 ನಗರ ಹಾಗೂ ಹಳ್ಳಿಗಳಲ್ಲಿ ರಾಜ್ಯ ಸರಕಾರದಿಂದ ಬಡವರಿಗೆ ಅಂತ ಹೇಳಿ ‘ಜನಕೀಯ ಕುಟುಂಬಶ್ರೀ’ ಕ್ಯಾಂಟೀನು ಶುರು ಅಗಿದಾವ. ಇವನ್ನ ಮಹಿಳಾ ಸಂಘಗಳು ನಡಸತಾವ. ಅವರು ಇಪ್ಪತ್ತು ರೂಪಾಯಿಗೆ ಒಂದು ಊಟ ಕೊಡತಾರ. ಅದರಾಗ ಅರ್ಧ ಖರ್ಚು ರಾಜ್ಯ ಸರಕಾರ ವಹಿಸಿಕೊಳ್ಳೋದಕ್ಕ ಅವರಿಗೆ ಒಂದು ಊಟದ ಮ್ಯಾಲೆ ಹತ್ತು ರೂಪಾಯಿ ಸಿಗತದ.

ಇಲ್ಲಿ ತನಕ ಆ ಮಹಿಳಾ ಖಾನಾವಳಿಗಳು ಸುಮಾರು ಹತ್ತು ಲಕ್ಷ ತಾಟು ಊಟ ಮಾರಾಟ ಮಾಡಿದಾವ. ಇವುಗಳ ಯಶಸ್ಸು ನೋಡಿ ಇನ್ನೂ ಹೆಚ್ಚು ಕ್ಯಾಂಟೀನ್ ಶುರು ಮಾಡಬೇಕು ಅಂತ ಸರಕಾರ ನಿರ್ಧಾರ ಮಾಡೇತಿ.

ಎಲ್ಲಕ್ಕಿಂತ ಮುಖ್ಯ ಅಂದ್ರ ಇವು ಲಾಕಡೌನ್‌ದಾಗೂ ಕೆಲಸ ಮಾಡಿದಾವು.

ಅಲ್ಲಿ ಸಾಧ್ಯ ಆಗಿದ್ದು ನಮ್ಮಲ್ಲೆ ಯಾಕ ಸಾಧ್ಯ ಆಗಿಲ್ಲ? ನಮ್ಮಲ್ಲೆ ಯಾಕ ಬಡವರು ರಸ್ತೆದಾಗ ಸತ್ತರು? ಯಾಕ ಅವರಿಗೆ ಹೊತ್ತಿಗೆ ಸರಿಯಾಗಿ ಊಟ ಸಿಗಲಿಲ್ಲ? ಯಾಕ ನಮ್ಮ ಸರ್ಕಾರಿ ಖಾನಾವಳಿಗಳು ಲಾಕಡೌನ್‌ದಾಗ ಬಂದ ಆಗಿದ್ದವು?

ಇದರ ಹಿಂದ ಏನು ದೊಡ್ಡ ರಹಸ್ಯ ಇಲ್ಲ. ಇದರ ಹಿಂದ ಒಂದು ಮಜಾ ಕತಿ ಐತಿ. ಅದನ್ನ ಹೇಳಬೇಕು ಅಂದ್ರ ಷೇಕ್ಸ್‌ಪಿಯರ್‌ನ ನೆನಪು ಮಾಡಿಕೋಬೇಕು. ಅವನ ರೋಮಿಯೋ ಜೂಲಿಯಟ್ ನಾಟಕದ ಜಗತ್ ವಿಖ್ಯಾತ ಸಾಲು ‘ಹೆಸರಿನಲ್ಲಿ ಏನಿದೆ’ ಅನ್ನೋದನ್ನ ನೆನಪು ಮಾಡಿಕೋಬೇಕು.

ಕರ್ನಾಟಕದಾಗ ಸರ್ಕಾರಿ ಖಾನಾವಳಿಗಳಿಗೆ ಏನು ಅಂತ ಕರೀತಾರ? ಇಂದಿರಾ ಕ್ಯಾಂಟೀನು ಅಂತಾರ. ಆ ಹೆಸರನ ಅವಕ್ಕ ಕಂಟಕ ಆಗೇದ. ಹೆಂಗ ಅಂತೀರಿ? ಇಲ್ಲಿ ಕೇಳರಿ.

ಲಾಕಡೌನ್ ಆಗಿದ್ದಾಗ ಒಂದು ದಿವಸ ಯಾರೋ ಬಡವರು ಬಂದು ಅಲ್ಲಿ ಊಟ ಮಾಡಿದರು ಅಂದುಕೋರಿ. ಅವರು ಹೊರಗ ಹೋಗಿ ಏನು ಹೇಳತಾರ?

ನಾವು ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂತ ಹೇಳತಾರ. ಅದು ಈಗಿನ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ. ನಾವು ಊಟ ಹಾಕಿದೀವಿ, ಅದರ ಕಾಂಗ್ರೆಸ್ ನಾಯಕಿಗೆ ಹೆಸರು ಬಂತು ಅಂತ ಅವರು ಕಿರಿಕಿರಿ ಮಾಡಿಕೋತಾರ.

ಇದನ್ನು ತಪ್ಪಿಸೋದು ಹೆಂಗ ಅಂದ್ರ ಬಡವರು ಹಸಿವೆಯಿಂದ ಇರೋದು ಅವರ ಪ್ರಾಬ್ಲಂ ಅಂತ ಸರಕಾರ ಬ್ಯಾರೆ ಕಡೆ ನೋಡೋದು. ಭಾಷಣ, ಹೆಸರು ಬದಲಾವಣೆ, ರಸ್ತೆ, ಸೇತುವೆ, ಗಟಾರು, ಕೋರೋನಾ ಔಷಧಿ ಗುತ್ತಿಗೆ, ಕೋರೋನಾ ಕಾಳಜಿ ಕೇಂದ್ರದ ಬಾಡಿಗೆ ಮುಂತಾದ ಅತಿ ಮುಖ್ಯ ಸಂಗತಿಗಳ ಬಗ್ಗೆ ಸಚಿವರು ತಲೆ ಕೆಡಿಸಿಕೊಳ್ಳೋದು. ಆ ಕ್ಲಿಷ್ಟ ಸಮಸ್ಯೆಗಳಿಗೆ ಈ ಸರಳ ಪರಿಹಾರಗಳು.

ಆದರ ಆಳುವ ಪಕ್ಷಕ್ಕೆ ಹೆಸರು ಬದಲಾವಣೆ ಮಾಡೋದು ಏನು ಅಷ್ಟು ಕಷ್ಟದ ಕೆಲಸ ಅಲ್ಲ. ಪಂಥ ಪ್ರಧಾನ ಸೇವಕರು ಬಂದ ಮ್ಯಾಲೆ ಎರಡು ನೂರಕ್ಕೂ ಹೆಚ್ಚು ಯೋಜನೆಗಳ ಹೆಸರು ಬದಲಾವಣೆ ಮಾಡಿದಾರು. ಕಾಂಗ್ರೆಸ್ ನವರು ಶುರು ಮಾಡಿದ ಯೋಜನೆ ಹೋಗಲಿ, ತಮ್ಮದೇ ಪಕ್ಷದ ಹಿರಿಯರು ಹರಿಬಿಟ್ಟ ಸ್ವದೇಶಿ ಅನ್ನೋ ವಿಚಾರದ ಹೆಸರು ಬದಲು ಮಾಡಿ ಆತ್ಮನಿರ್ಭರ ಅಂತ ಮಾಡಿದರು.

ಆದರ ಕರ್ನಾಟಕದೊಳಗ ಅದು ಸಾಧ್ಯ ಆಗಲಿಲ್ಲ. ಯಾಕೋ ಗೊತ್ತಿಲ್ಲ. ಅದಕ್ಕ ಆಡಳಿತಾತ್ಮಕ ಕಾರಣಗಳಿಗಿಂತ ರಾಜಕೀಯ ಕಾರಣನ ಹೆಚ್ಚು ಇರಬಹುದು.

ಅದು ಹೋಗಲಿ ಬಿಡ್ರಿ.

ಕರ್ನಾಟಕದ ಖಾನಾವಳಿಗೆ ಇಂದಿರಮ್ಮನ ಹೆಸರು ಹೆಂಗ ಬಂತು ಅಂತ ಗೊತ್ತೇನು ನಿಮಗ?

ಅದು ಗೊತ್ತಾಗಬೇಕು ಅಂದ್ರ ನಿಮಗ ಕೊಲ್ಲು ಹುಡುಗಿ ಒಮ್ಮೆ ನನ್ನ ಅನ್ನೋ ಹಾಡು ಗೊತ್ತಿರಬೇಕು. ಅದು ಮುಂಗಾರು ಮಳೆ ಅನ್ನೋ ಪಿಚ್ಚರುದಾಗಿನದು. ಅದರ ನಿರ್ದೇಶಕ ಯಾರು, ಅದಕ್ಕ ರೊಕ್ಕ ಕೊಟ್ಟವರು ಯಾರು ಅಂತ ನಿಮಗ ಗೊತ್ತಿರಬೇಕು. ಹಂಗ ಅದಕ್ಕ ರೊಕ್ಕ ಹೊಂದಿಸಿದವರು ಒಬ್ಬರು ರಾಜಕೀಯದಾಗ ಹೋಗೋಣು ಅಂತ ನಿರ್ಧಾರ ಮಾಡಿದರು.

ಅವರು ಅಂದಿನ ಆಡಳಿತ ಪಕ್ಷವಾದ ಕಾಂಗ್ರೆಸ್ ಸೇರಿಕೊಂಡರು. ಅಷ್ಟರೊಳಗ ರಾಜ್ಯ ಸರಕಾರ ಖಾನಾವಳಿ ಆರಂಭ ಮಾಡಬೇಕು, ಅವಕ್ಕ ನಮ್ಮ ಕ್ಯಾಂಟೀನ್ ಅಂತ ಹೆಸರು ಇಡಬೇಕು ಅಂತ ನಿರ್ಧಾರ ಮಾಡಿತ್ತು.

ನಮ್ಮ ಸಿನಿಮಾ ಸ್ಟಾರ್ ಅವರು ಕಾಂಗ್ರೆಸ್‌ನೊಳಗ ಫಳ ಫಳ ಹೊಳೀಬೇಕು ಅಂತ ಹೇಳಿ ಒಂದು ಸಲಹೆ ಕೊಟ್ಟರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೊಳಗ ಇದಕ್ಕ ನಮ್ಮ ಕ್ಯಾಂಟೀನ್ ಅನ್ನೋದು ಬ್ಯಾಡ, ಇಂದಿರಾ ಕ್ಯಾಂಟೀನ್ ಅನ್ನೋಣು ಅಂತ ಅಂದರು. ಇಂತಹ ಬೀಜ ಮಂತ್ರ ಪ್ರಯೋಗ ಆದ ಮೇಲೆ ಅದನ್ನ ವಿರೋಧ ಮಾಡೋ ಗಣ ಮಗ ಕಾಂಗ್ರೆಸ್ ದೊಳಗ ಯಾರ ಅದಾರು? ಎಲ್ಲರೂ ಸುಮ್ಮನೇ ಕೂತರು. ಜೈಕಾರ ಹಾಕಿದರು.

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

ಬರ ಬರ್ತಾ ಅವನ್ನ ಮಹಿಳಾ ಸಂಘಗಳಿಗೆ ವಹಿಸಿ ಕೊಡಬೇಕು ಅನ್ನೋ ವಿಚಾರ ಹೋತು. ಅವು ಖಾಸಗಿ ಗುತ್ತಿಗೆದಾರರ ಕೈಯಾಗ ಸಿಕ್ಕು ನಮ್ಮ ಕ್ಯಾಂಟೀನು ಆಗದೇ ಕಾಂಟ್ರಾಕ್ಟರ ಕ್ಯಾಂಟೀನು ಆದವು.

ಇನ್ನು ಆ ಐತಿಹಾಸಿಕ ಐಡಿಯಾ ಕೊಟ್ಟ ಪುಣ್ಯಾತ್ಮ ಇಂದಿರಾ ಅವರ ಪಕ್ಷದೊಳಗ ಬಹಳ ದಿವಸ ಉಳೀಲಿಲ್ಲ. ಮುಂಗಾರು ಮಾರುತ ಇತ್ತಲಾಗ ಬೀಸಲಿಕ್ಕೆ ಹತ್ತಿದ್ದು ನೋಡಿದ ಅವರು ಈಗ ಕಮಲ ಪಕ್ಷ ದೊಳಗ ಅದಾರು.

ಯಕ್ಷಗಾನ ಭಾಗವತರು ಪ್ರತಿ ಸರೆ “ಬಲಿರೆ ಪರಾಕ್ರಮ ಕಂಠೀರವ” ಅಂತ ಹೇಳಿದಾಗ ಅವರು ಹೊಸ ಪಾತ್ರದ ಪರಿಚಯ ಮಾಡತಿರತಾರ. ಒಮ್ಮೊಮ್ಮೆ ಹಳೇ ಪಾತ್ರನ ಹೊಸ ಹೆಸರಿನಿಂದ ಬರತಾವೂ. ಯಾವಾಗ ಭಾಗ್ಯವಾತರು ನಕ್ಕೋತ ಹೊಸಬರ ಪರಿಚಯ ಮಾಡತಾರ.

ಆ ವಿಲಿಯಮ್ ಷೇಕ್ಸ್‌ಪಿಯರ್‌ಗೆ ಏನು ಗೊತ್ತು – ಹೆಸರಿನ ಗಮ್ಮತ್ತು? ನಮ್ಮಲ್ಲೇ ಗುಲಾಬಿ ಹೂವಿಗೆ ಕಮಲ ಅಂತ ಹೆಸರು ಇಟ್ಟರ ಅದು ಸೂಸೋ ಗಂಧನ ಬೇರೆ!

ಅಲ್ಲವೇ ಮನೋಲ್ಲಾಸಿನಿ?


ಇದನ್ನು ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...