Homeಅಂಕಣಗಳುಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ...!

ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

- Advertisement -
- Advertisement -

ಗುಲಾಬಿ ಅಂತ ನಾವು ಯಾವುದನ್ನು ಕರೀತೀವೋ,

ಅದರ ಹೆಸರು ಏನಿದ್ದರೇನು ಸುಗಂಧ ಅಷ್ಟೇ ಸಿಹಿಯಲ್ಲವೇ ?

ಅಂತ ಕವಿಯೊಬ್ಬ ಸುಮಾರು 400 ವರ್ಷ ಹಿಂದ ಒದರಿ ಹೋದ.

ಅವನ ಹೆಸರು ವಿಲಿಯಮ್ ಷೇಕ್ಸ್‌ಪಿಯರ್. ಅವ ಇಂಗ್ಲಂಡದೊಳಗ ನಾಟಕ, ಹಾಡು ಬರಕೊಂಡು ಇದ್ದಾಗ ನಮ್ಮಲ್ಲೇ ಮೊಹಮ್ಮದ್ ಜಲಾಲಉದ್ದೀನ್ ಅಕ್ಬರ್ ಅವರು ರಾಜ್ಯ ಆಳತಾ ಇದ್ದರು.

ನಮ್ಮಲ್ಲೆ ಬಹುಶಃ ಎಲ್ಲರಿಗೂ ಷೇಕ್ಸ್‌ಪಿಯರ್ ಅವರ ಹೆಸರು ಗೊತ್ತು. ಆದರ ಅಕ್ಬರ್ ಅನ್ನೋದು ಅವರ ಬಿರುದು, ಅವನ ಹೆಸರು ಅಲ್ಲ ಅಂತ ಗೊತ್ತಿಲ್ಲ.

ಅವ ಹೋಗಲಿ ಬಿಡ್ರಿ, ಮಹಾಭಾರತದಾಗ ಭೀಷ್ಮ ಅನ್ನೋದು ಗಂಗಾಪುತ್ರನ ಬಿರುದು, ಹೆಸರು ಅಲ್ಲ ಅನ್ನೋದು ಗೊತ್ತಿರೋದಿಲ್ಲ. ಹಂಗ ನೋಡಿದರ ಮಹಾಭಾರತದಾಗ ಬಿರುದುಗಳೇ ಜಾಸ್ತಿ, ಹೆಸರು ಕಮ್ಮಿ. ಇರಲಿ ಬಿಡ್ರಿ.

ಈಗ ನಮ್ಮ ಮುಂದೆ ಬಂದಿರೋ ವಿಷಯ ಅಂದ್ರ ವಿಶ್ವ ಸಂಸ್ಥೆಯವರು ನಮ್ಮ ದೇಶದ ಕೆಲವು ರಾಜ್ಯಗಳ ಕೋವಿಡ್ ನಿರ್ವಹಣೆಯನ್ನು ಹೊಗಳಿದ ಸುದ್ದಿ.

ಅಲ್ಲಿನ ತಜ್ಞರು ಮುಂಬೈ ಶಹರದ ಧಾರಾವಿ ಝೋಪಡ ಪಟ್ಟಿಯೊಳಗ ಹೆಂಗ ಈ ರೋಗ ನಿಯಂತ್ರಣಕ್ಕ ಬಂತು ಅನ್ನೋದನ್ನು ನೋಡಿ, ಅಲ್ಲೇ ಸರಿ ಆಗಬಹುದು ಅಂದ್ರ ಎಲ್ಲಾದರೂ ಆಗಬಹುದು ಅಂತ ಹೇಳಿದರು. ಮತ್ತು ಕೇರಳದ ರೋಗಿ ಪತ್ತೆ ವಿಧಾನ ಹಾಗೂ ಆಸ್ಪತ್ರೆ ನಿರ್ವಹಣೆ ವಿಷಯದ ಬಗ್ಗೆ ಹೊಗಳಿದರು. ಅವರು ಇನ್ನೊಂದು ವಿಷಯ ಪ್ರಸ್ತಾಪ ಮಾಡಿದರು.

ಅದು ಎನಪ ಅಂದ್ರ ಕೇರಳದ ಕುಟುಂಬಶ್ರೀ ವ್ಯವಸ್ಥೆ ಕೆಳಗ ನಡೀತಾ ಇರೋ ಕಮ್ಮಿ ಖರ್ಚಿನ ಸರ್ಕಾರಿ ಕ್ಯಾಂಟೀನ್‌ಗಳು ಹೆಂಗ ಬಡವರ ಹಸಿವನ್ನು ಕಮ್ಮಿ ಮಾಡಿದರು ಅನ್ನೋದನ್ನ ಎತ್ತಿ ತೋರಿಸಿದರು.

ಆ ರಾಜ್ಯದ 510 ನಗರ ಹಾಗೂ ಹಳ್ಳಿಗಳಲ್ಲಿ ರಾಜ್ಯ ಸರಕಾರದಿಂದ ಬಡವರಿಗೆ ಅಂತ ಹೇಳಿ ‘ಜನಕೀಯ ಕುಟುಂಬಶ್ರೀ’ ಕ್ಯಾಂಟೀನು ಶುರು ಅಗಿದಾವ. ಇವನ್ನ ಮಹಿಳಾ ಸಂಘಗಳು ನಡಸತಾವ. ಅವರು ಇಪ್ಪತ್ತು ರೂಪಾಯಿಗೆ ಒಂದು ಊಟ ಕೊಡತಾರ. ಅದರಾಗ ಅರ್ಧ ಖರ್ಚು ರಾಜ್ಯ ಸರಕಾರ ವಹಿಸಿಕೊಳ್ಳೋದಕ್ಕ ಅವರಿಗೆ ಒಂದು ಊಟದ ಮ್ಯಾಲೆ ಹತ್ತು ರೂಪಾಯಿ ಸಿಗತದ.

ಇಲ್ಲಿ ತನಕ ಆ ಮಹಿಳಾ ಖಾನಾವಳಿಗಳು ಸುಮಾರು ಹತ್ತು ಲಕ್ಷ ತಾಟು ಊಟ ಮಾರಾಟ ಮಾಡಿದಾವ. ಇವುಗಳ ಯಶಸ್ಸು ನೋಡಿ ಇನ್ನೂ ಹೆಚ್ಚು ಕ್ಯಾಂಟೀನ್ ಶುರು ಮಾಡಬೇಕು ಅಂತ ಸರಕಾರ ನಿರ್ಧಾರ ಮಾಡೇತಿ.

ಎಲ್ಲಕ್ಕಿಂತ ಮುಖ್ಯ ಅಂದ್ರ ಇವು ಲಾಕಡೌನ್‌ದಾಗೂ ಕೆಲಸ ಮಾಡಿದಾವು.

ಅಲ್ಲಿ ಸಾಧ್ಯ ಆಗಿದ್ದು ನಮ್ಮಲ್ಲೆ ಯಾಕ ಸಾಧ್ಯ ಆಗಿಲ್ಲ? ನಮ್ಮಲ್ಲೆ ಯಾಕ ಬಡವರು ರಸ್ತೆದಾಗ ಸತ್ತರು? ಯಾಕ ಅವರಿಗೆ ಹೊತ್ತಿಗೆ ಸರಿಯಾಗಿ ಊಟ ಸಿಗಲಿಲ್ಲ? ಯಾಕ ನಮ್ಮ ಸರ್ಕಾರಿ ಖಾನಾವಳಿಗಳು ಲಾಕಡೌನ್‌ದಾಗ ಬಂದ ಆಗಿದ್ದವು?

ಇದರ ಹಿಂದ ಏನು ದೊಡ್ಡ ರಹಸ್ಯ ಇಲ್ಲ. ಇದರ ಹಿಂದ ಒಂದು ಮಜಾ ಕತಿ ಐತಿ. ಅದನ್ನ ಹೇಳಬೇಕು ಅಂದ್ರ ಷೇಕ್ಸ್‌ಪಿಯರ್‌ನ ನೆನಪು ಮಾಡಿಕೋಬೇಕು. ಅವನ ರೋಮಿಯೋ ಜೂಲಿಯಟ್ ನಾಟಕದ ಜಗತ್ ವಿಖ್ಯಾತ ಸಾಲು ‘ಹೆಸರಿನಲ್ಲಿ ಏನಿದೆ’ ಅನ್ನೋದನ್ನ ನೆನಪು ಮಾಡಿಕೋಬೇಕು.

ಕರ್ನಾಟಕದಾಗ ಸರ್ಕಾರಿ ಖಾನಾವಳಿಗಳಿಗೆ ಏನು ಅಂತ ಕರೀತಾರ? ಇಂದಿರಾ ಕ್ಯಾಂಟೀನು ಅಂತಾರ. ಆ ಹೆಸರನ ಅವಕ್ಕ ಕಂಟಕ ಆಗೇದ. ಹೆಂಗ ಅಂತೀರಿ? ಇಲ್ಲಿ ಕೇಳರಿ.

ಲಾಕಡೌನ್ ಆಗಿದ್ದಾಗ ಒಂದು ದಿವಸ ಯಾರೋ ಬಡವರು ಬಂದು ಅಲ್ಲಿ ಊಟ ಮಾಡಿದರು ಅಂದುಕೋರಿ. ಅವರು ಹೊರಗ ಹೋಗಿ ಏನು ಹೇಳತಾರ?

ನಾವು ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂತ ಹೇಳತಾರ. ಅದು ಈಗಿನ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ. ನಾವು ಊಟ ಹಾಕಿದೀವಿ, ಅದರ ಕಾಂಗ್ರೆಸ್ ನಾಯಕಿಗೆ ಹೆಸರು ಬಂತು ಅಂತ ಅವರು ಕಿರಿಕಿರಿ ಮಾಡಿಕೋತಾರ.

ಇದನ್ನು ತಪ್ಪಿಸೋದು ಹೆಂಗ ಅಂದ್ರ ಬಡವರು ಹಸಿವೆಯಿಂದ ಇರೋದು ಅವರ ಪ್ರಾಬ್ಲಂ ಅಂತ ಸರಕಾರ ಬ್ಯಾರೆ ಕಡೆ ನೋಡೋದು. ಭಾಷಣ, ಹೆಸರು ಬದಲಾವಣೆ, ರಸ್ತೆ, ಸೇತುವೆ, ಗಟಾರು, ಕೋರೋನಾ ಔಷಧಿ ಗುತ್ತಿಗೆ, ಕೋರೋನಾ ಕಾಳಜಿ ಕೇಂದ್ರದ ಬಾಡಿಗೆ ಮುಂತಾದ ಅತಿ ಮುಖ್ಯ ಸಂಗತಿಗಳ ಬಗ್ಗೆ ಸಚಿವರು ತಲೆ ಕೆಡಿಸಿಕೊಳ್ಳೋದು. ಆ ಕ್ಲಿಷ್ಟ ಸಮಸ್ಯೆಗಳಿಗೆ ಈ ಸರಳ ಪರಿಹಾರಗಳು.

ಆದರ ಆಳುವ ಪಕ್ಷಕ್ಕೆ ಹೆಸರು ಬದಲಾವಣೆ ಮಾಡೋದು ಏನು ಅಷ್ಟು ಕಷ್ಟದ ಕೆಲಸ ಅಲ್ಲ. ಪಂಥ ಪ್ರಧಾನ ಸೇವಕರು ಬಂದ ಮ್ಯಾಲೆ ಎರಡು ನೂರಕ್ಕೂ ಹೆಚ್ಚು ಯೋಜನೆಗಳ ಹೆಸರು ಬದಲಾವಣೆ ಮಾಡಿದಾರು. ಕಾಂಗ್ರೆಸ್ ನವರು ಶುರು ಮಾಡಿದ ಯೋಜನೆ ಹೋಗಲಿ, ತಮ್ಮದೇ ಪಕ್ಷದ ಹಿರಿಯರು ಹರಿಬಿಟ್ಟ ಸ್ವದೇಶಿ ಅನ್ನೋ ವಿಚಾರದ ಹೆಸರು ಬದಲು ಮಾಡಿ ಆತ್ಮನಿರ್ಭರ ಅಂತ ಮಾಡಿದರು.

ಆದರ ಕರ್ನಾಟಕದೊಳಗ ಅದು ಸಾಧ್ಯ ಆಗಲಿಲ್ಲ. ಯಾಕೋ ಗೊತ್ತಿಲ್ಲ. ಅದಕ್ಕ ಆಡಳಿತಾತ್ಮಕ ಕಾರಣಗಳಿಗಿಂತ ರಾಜಕೀಯ ಕಾರಣನ ಹೆಚ್ಚು ಇರಬಹುದು.

ಅದು ಹೋಗಲಿ ಬಿಡ್ರಿ.

ಕರ್ನಾಟಕದ ಖಾನಾವಳಿಗೆ ಇಂದಿರಮ್ಮನ ಹೆಸರು ಹೆಂಗ ಬಂತು ಅಂತ ಗೊತ್ತೇನು ನಿಮಗ?

ಅದು ಗೊತ್ತಾಗಬೇಕು ಅಂದ್ರ ನಿಮಗ ಕೊಲ್ಲು ಹುಡುಗಿ ಒಮ್ಮೆ ನನ್ನ ಅನ್ನೋ ಹಾಡು ಗೊತ್ತಿರಬೇಕು. ಅದು ಮುಂಗಾರು ಮಳೆ ಅನ್ನೋ ಪಿಚ್ಚರುದಾಗಿನದು. ಅದರ ನಿರ್ದೇಶಕ ಯಾರು, ಅದಕ್ಕ ರೊಕ್ಕ ಕೊಟ್ಟವರು ಯಾರು ಅಂತ ನಿಮಗ ಗೊತ್ತಿರಬೇಕು. ಹಂಗ ಅದಕ್ಕ ರೊಕ್ಕ ಹೊಂದಿಸಿದವರು ಒಬ್ಬರು ರಾಜಕೀಯದಾಗ ಹೋಗೋಣು ಅಂತ ನಿರ್ಧಾರ ಮಾಡಿದರು.

ಅವರು ಅಂದಿನ ಆಡಳಿತ ಪಕ್ಷವಾದ ಕಾಂಗ್ರೆಸ್ ಸೇರಿಕೊಂಡರು. ಅಷ್ಟರೊಳಗ ರಾಜ್ಯ ಸರಕಾರ ಖಾನಾವಳಿ ಆರಂಭ ಮಾಡಬೇಕು, ಅವಕ್ಕ ನಮ್ಮ ಕ್ಯಾಂಟೀನ್ ಅಂತ ಹೆಸರು ಇಡಬೇಕು ಅಂತ ನಿರ್ಧಾರ ಮಾಡಿತ್ತು.

ನಮ್ಮ ಸಿನಿಮಾ ಸ್ಟಾರ್ ಅವರು ಕಾಂಗ್ರೆಸ್‌ನೊಳಗ ಫಳ ಫಳ ಹೊಳೀಬೇಕು ಅಂತ ಹೇಳಿ ಒಂದು ಸಲಹೆ ಕೊಟ್ಟರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೊಳಗ ಇದಕ್ಕ ನಮ್ಮ ಕ್ಯಾಂಟೀನ್ ಅನ್ನೋದು ಬ್ಯಾಡ, ಇಂದಿರಾ ಕ್ಯಾಂಟೀನ್ ಅನ್ನೋಣು ಅಂತ ಅಂದರು. ಇಂತಹ ಬೀಜ ಮಂತ್ರ ಪ್ರಯೋಗ ಆದ ಮೇಲೆ ಅದನ್ನ ವಿರೋಧ ಮಾಡೋ ಗಣ ಮಗ ಕಾಂಗ್ರೆಸ್ ದೊಳಗ ಯಾರ ಅದಾರು? ಎಲ್ಲರೂ ಸುಮ್ಮನೇ ಕೂತರು. ಜೈಕಾರ ಹಾಕಿದರು.

ಭಾರೀ ಪ್ರಚಾರ ದೊಂದಿಗೆ ಶುರು ಆದ ಆ ಖಾನಾವಳಿಗಳು ಬಡವರಿಗೆ ಯಾವ ಕಾಲಕ್ಕೆ ಬೇಕಾಗಿದ್ದವೋ ಆ ಕಾಲಕ್ಕೆ ಉಪಯೋಗ ಆಗಲಿಲ್ಲ.

ಬರ ಬರ್ತಾ ಅವನ್ನ ಮಹಿಳಾ ಸಂಘಗಳಿಗೆ ವಹಿಸಿ ಕೊಡಬೇಕು ಅನ್ನೋ ವಿಚಾರ ಹೋತು. ಅವು ಖಾಸಗಿ ಗುತ್ತಿಗೆದಾರರ ಕೈಯಾಗ ಸಿಕ್ಕು ನಮ್ಮ ಕ್ಯಾಂಟೀನು ಆಗದೇ ಕಾಂಟ್ರಾಕ್ಟರ ಕ್ಯಾಂಟೀನು ಆದವು.

ಇನ್ನು ಆ ಐತಿಹಾಸಿಕ ಐಡಿಯಾ ಕೊಟ್ಟ ಪುಣ್ಯಾತ್ಮ ಇಂದಿರಾ ಅವರ ಪಕ್ಷದೊಳಗ ಬಹಳ ದಿವಸ ಉಳೀಲಿಲ್ಲ. ಮುಂಗಾರು ಮಾರುತ ಇತ್ತಲಾಗ ಬೀಸಲಿಕ್ಕೆ ಹತ್ತಿದ್ದು ನೋಡಿದ ಅವರು ಈಗ ಕಮಲ ಪಕ್ಷ ದೊಳಗ ಅದಾರು.

ಯಕ್ಷಗಾನ ಭಾಗವತರು ಪ್ರತಿ ಸರೆ “ಬಲಿರೆ ಪರಾಕ್ರಮ ಕಂಠೀರವ” ಅಂತ ಹೇಳಿದಾಗ ಅವರು ಹೊಸ ಪಾತ್ರದ ಪರಿಚಯ ಮಾಡತಿರತಾರ. ಒಮ್ಮೊಮ್ಮೆ ಹಳೇ ಪಾತ್ರನ ಹೊಸ ಹೆಸರಿನಿಂದ ಬರತಾವೂ. ಯಾವಾಗ ಭಾಗ್ಯವಾತರು ನಕ್ಕೋತ ಹೊಸಬರ ಪರಿಚಯ ಮಾಡತಾರ.

ಆ ವಿಲಿಯಮ್ ಷೇಕ್ಸ್‌ಪಿಯರ್‌ಗೆ ಏನು ಗೊತ್ತು – ಹೆಸರಿನ ಗಮ್ಮತ್ತು? ನಮ್ಮಲ್ಲೇ ಗುಲಾಬಿ ಹೂವಿಗೆ ಕಮಲ ಅಂತ ಹೆಸರು ಇಟ್ಟರ ಅದು ಸೂಸೋ ಗಂಧನ ಬೇರೆ!

ಅಲ್ಲವೇ ಮನೋಲ್ಲಾಸಿನಿ?


ಇದನ್ನು ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...