Homeಮುಖಪುಟ'ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ' - ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

‘ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ’ – ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

ಇತ್ತೀಚೆಗೆ ಟಿಎಂಸಿ ತೊರೆದಿರುವ ಪ್ರಮುಖ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಇದರ ಬೆನ್ನಲ್ಲೆ ತ್ರಿವೇದಿಯವರ ರಾಜೀನಾಮೆ ಟಿಎಂಸಿಗೆ ತುಂಬಲಾರದ ನಷ್ಟವಾಗಿದೆ

- Advertisement -
- Advertisement -

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಜ್ಯಸಭಾ ಸಂಸದ ಮತ್ತು ಪ್ರಬಲ ಮುಖಂಡ ದಿನೇಶ್ ತ್ರಿವೇದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ಇದು ಮಮತಾ ಬ್ಯಾನರ್ಜಿಯವರ ಪಕ್ಷಕ್ಕೆ ಅತ್ಯಂತ ದೊಡ್ಡ ಹಿನ್ನಡೆಯಾಗಿದೆ.

ಈ ಕುರಿತು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ತ್ರಿವೇದಿ, “ಇಂದು ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನನ್ನು ಇಲ್ಲಿಗೆ ಕಳುಹಿಸಿರುವ ನನ್ನ ಪಕ್ಷಕ್ಕೆ ಕೃತಜ್ಞನಾಗಿದ್ದೇನೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನನ್ನಿಂದ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿ ಕುಳಿತುಕೊಂಡು ಏನನ್ನೂ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು ಎಂದು ನನ್ನ ಆತ್ಮವು ಹೇಳುತ್ತಿದೆ. ಹಾಗಾಗಿ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ಪಶ್ಚಿಮ ಬಂಗಾಳದ ಜನರಿಗಾಗಿ ಸೇವೆ ಮಾಡುವುದನ್ನು ಮುಂದುವರೆಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ರಾಜೀನಾಮೆಗೂ ಮುನ್ನಾದಿನ ದಿನೇಶ್ ತ್ರಿವೇದಿಯವರು ಮೋದಿಯವರನ್ನು ಹೊಗಳಿ ಟ್ವೀಟ್ ಮಾಡಿದ್ದರು.

“ಇದು ದುರದೃಷ್ಟಕರವಾಗಿದ್ದು ನನಗೆ ಅತೀವ ದುಃಖವಾಗಿದೆ. ಅವರು ರಾಜೀನಾಮೆ ನೀಡಿರುವುದು ಒಳ್ಳೆಯದಲ್ಲ. ಅವರು ಅತೃಪ್ತರಾಗಿದ್ದಾರೆಂದು ನನಗೆ ತಿಳಿದಿತ್ತು. ಆದರೆ ಅವರು ಪಕ್ಷ ತ್ಯಜಿಸುತ್ತಾರೆ ಎಂದು ನನಗೆ ತಿಳಿದಿರಲಿಲ್ಲ” ಎಂದು ಟಿಎಂಸಿಯ ಹಿರಿಯ ಮುಖಂಡ ಸೌಗತ ರಾಯ್ ಹೇಳಿದ್ದಾರೆ.

ಇತ್ತೀಚೆಗೆ ಟಿಎಂಸಿ ತೊರೆದಿರುವ ಪ್ರಮುಖ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಇದರ ಬೆನ್ನಲ್ಲೆ ತ್ರಿವೇದಿಯವರ ರಾಜೀನಾಮೆ ಟಿಎಂಸಿಗೆ ತುಂಬಲಾರದ ನಷ್ಟವಾಗಿದೆ.

ಇನ್ನೇನು ಕೆಲವೇ ತಿಂಗಳಲ್ಲಿ 5 ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಅದರಲ್ಲಿ ಪಶ್ಚಿಮ ಬಂಗಾಳ ರಾಜ್ಯವೂ ಒಂದು.


ಇದನ್ನೂ ಓದಿ: ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...