Homeಅಂತರಾಷ್ಟ್ರೀಯಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್‌ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.

- Advertisement -
- Advertisement -

ಲಡಾಕ್‌ ಗಡಿ ಸಂಘರ್ಷಕ್ಕೆ ಸಂಬಂಧಿಸಿದ ಬಿಕ್ಕಟ್ಟನ್ನು ಶಮನಗೊಳಿಸಲು ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾದ್ಯವಾಗುವುದಾದರೆ, ಪಾಕಿಸ್ತಾನದೊಂದಿಗೆ ಯಾಕೆ ಸಾಧ್ಯವಾಗುವುದಿಲ್ಲ ಎಂದು ಸಂಸದ ಫಾರೂಕ್‌ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಲಡಾಖ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ತಕರಾರನ್ನು ಬಗೆಹರಿಸಲು ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿವೆ. ಆದರೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿನ ಸಮಸ್ಯೆಗಳನ್ನೂ ಬಗೆಹರಿಸಲು ಭಾರತ-ಪಾಕ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಕಾಶ್ಮೀರದಲ್ಲಿ ಯಾರನ್ನೂ ಗೃಹಬಂಧನದಲ್ಲಿಟ್ಟಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್

ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಕಾದಾಟದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕ್ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದೆ. ಅದು ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಆದರೆ, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್‌ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.

ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷವಾಗಿರುವ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಮುಖ್ಯಸ್ಥ ಮತ್ತು ಸಂಸದರಾಗಿರುವ ಫಾರುಕ್‌ ಅಬ್ದುಲ್ಲಾ ಅವರನ್ನು ಕೇಂದ್ರ ಸರ್ಕಾರ ಕಳೆದ ವರ್ಷ ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ನ್ನು ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿ ಇಡಲಾಗಿತ್ತು. ತಿಂಗಳ ಹಿಂದೆ ಅವರನ್ನು ಗೃಹ ಬಂಧನದಿಂದ ಮುಕ್ತಗೊಳಿಸಲಾಗಿತ್ತು.


ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...