Homeಅಂತರಾಷ್ಟ್ರೀಯಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

- Advertisement -
- Advertisement -

ಕೊರೊನಾ ದಿನೇ ದಿನೇ ಉಲ್ಭಣಿಸುತ್ತಿರುವುದರ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ ನಲ್ಲಿ ಸಿಕ್ಕಿಕೊಂಡಿರುವ 700 ತಮಿಳು ವಿದ್ಯಾರ್ಥಿಗಳು ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಕಿರ್ಗಿಸ್ತಾನ್ ಸರ್ಕಾರವು, ಕೊರೊನಾ ಕಾರಣದಿಂದ ನಾವು ನಮ್ಮ ಸ್ವಂತನೆಲಕ್ಕೆ ತೆರಳುವಂತೆ ತಮಿಳುನಾಡಿನ 700 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೇಳಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಚೆನ್ನೈಗೆ ನೇರ ವಿಮಾನಗಳಿಲ್ಲದ ಕಾರಣ, ವಿದ್ಯಾರ್ಥಿಗಳು ತಮಿಳುನಾಡಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಮಿಳುನಾಡಿಗೆ ವಿಶೇಷ ವಿಮಾನಯಾನ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

62 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕಿರ್ಗಿಸ್ತಾನ್‌ನಲ್ಲಿ 8,141 ಕೊರೊನಾ ಸೋಂಕಿತರಿದ್ದಾರೆ. ಇದರಲ್ಲಿ 6,366 ಪ್ರಕರಣಗಳು ಬಿಷ್ಕೆಕ್ ನಲ್ಲಿ ಕೇಂದ್ರೀಕೃತವಾಗಿವೆ. ಅಲ್ಲಿಯೇ ತಮಿಳುನಾಡಿನ ವೈದ್ಯಕೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಹಾಗಾಗಿ ಅವರು ಆದಷ್ಟು ಬೇಗ ತಾವು ತಮಿಳುನಾಡಿಗೆ ಮರಳಬೇಕೆಂದು ಮನವಿ ಮಾಡಿದ್ದಾರೆ.

ಸುಮಾರು 300 ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತವನ್ನು ತಲುಪುವಲ್ಲಿ ಯಶಸ್ವಿಯಾದರು. ಆದರೆ ನೇರ ವಿಮಾನಗಳ ಕೊರತೆಯಿಂದಾಗಿ ಇತರೆ ಸುಮಾರು 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. “ಸರ್ಕಾರವು ನೇರ ವಿಮಾನಗಳನ್ನು ಒದಗಿಸದಿದ್ದರೆ, ನಮ್ಮ ಆಯ್ಕೆ ದೆಹಲಿಗೆ ಹೋಗಿ 7 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಉಳಿಯುವುದು. ನಂತರ ನಾವು ತಮಿಳುನಾಡಿಗೆ ತೆರಳಬೇಕು. ತಮಿಳುನಾಡಿಗೆ ನೇರ ವಿಮಾನಗಳ ಕೊರತೆಯಿಂದ ನಮಗೆ ಕಷ್ಟವಾಗುತ್ತಿದೆ. ಟಿಕೆಟ್ ದರವೂ ಹೆಚ್ಚಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಸಂಸ್ಥೆಗಳು ಖಾಸಗಿ ವಿಮಾನಯಾನ ವ್ಯವಸ್ಥೆ ಮಾಡಿವೆ. ಆದರೆ ಅನೇಕರು ಸಹಾಯ ಸಿಗದೇ ಇಲ್ಲಿ ಉಳಿದಿದ್ದಾರೆ” ಎಂದು ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿ ಸಂಸುದ್ದೀನ್ ಶಬೀರ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

ಜೂನ್ 29 ರಂದು ಡಿಎಂಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ”ತಮಿಳುನಾಡು ಸರ್ಕಾರದ ಕೋರಿಕೆಯ ಆಧಾರದ ಮೇಲೆ ರಾಜ್ಯಕ್ಕೆ ಕಡಿಮೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲಾಗುತ್ತಿದೆ” ಎಂದು ಕೇಂದ್ರವು ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಿರ್ಗಿಸ್ತಾನ್‌ನಲ್ಲಿ ವಿದ್ಯಾರ್ಥಿಗಳ ಅವಸ್ಥೆ:

ಕಿರ್ಗಿಸ್ತಾನ್‌ನಲ್ಲಿ ಲಾಕ್‌ಡೌನ್ ಹೇರಿದಾಗಿನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ದೊರೆತಿಲ್ಲ. “ಚೆನ್ನೈಗೆ ಕೊನೆಯ ವಿಮಾನ ಜುಲೈ 4 ರಂದು ಇತ್ತು. ಮುಂದಿನ 15 ದಿನಗಳವರೆಗೆ ನಮಗೆ ವಿಮಾನಗಳಿಲ್ಲ. ಆದರೆ, ಕಿರ್ಗಿಸ್ತಾನ್ ಸರ್ಕಾರ ನಮ್ಮನ್ನು ಸ್ಥಳಾಂತರಗೊಳ್ಳಲು ಹೇಳಿದೆ. ಭಾರತೀಯ ವಿದ್ಯಾರ್ಥಿಗಳಿಗೆ ನಾವು ಜವಾಬ್ದಾರರಲ್ಲ ಎಂದು ಅವರು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ಇಲ್ಲಿಂದ ಹೊರಡಲು ಬಯಸುತ್ತೇವೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಸಂಸುದ್ದೀನ್ ತಿಳಿಸಿದರು.

“ಪಾಕಿಸ್ತಾನ ಮತ್ತು ಭಾರತದಿಂದ ಅಕ್ಕಿ ಪೂರೈಕೆ ಕೂಡ ಸ್ಥಗಿತಗೊಂಡಿದ್ದು, ನಾವು ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು. 


ಇದನ್ನೂ ಓದಿ : 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...