Homeಅಂತರಾಷ್ಟ್ರೀಯಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

- Advertisement -
- Advertisement -

ಕೊರೊನಾ ದಿನೇ ದಿನೇ ಉಲ್ಭಣಿಸುತ್ತಿರುವುದರ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ ನಲ್ಲಿ ಸಿಕ್ಕಿಕೊಂಡಿರುವ 700 ತಮಿಳು ವಿದ್ಯಾರ್ಥಿಗಳು ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಕಿರ್ಗಿಸ್ತಾನ್ ಸರ್ಕಾರವು, ಕೊರೊನಾ ಕಾರಣದಿಂದ ನಾವು ನಮ್ಮ ಸ್ವಂತನೆಲಕ್ಕೆ ತೆರಳುವಂತೆ ತಮಿಳುನಾಡಿನ 700 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೇಳಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಚೆನ್ನೈಗೆ ನೇರ ವಿಮಾನಗಳಿಲ್ಲದ ಕಾರಣ, ವಿದ್ಯಾರ್ಥಿಗಳು ತಮಿಳುನಾಡಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಮಿಳುನಾಡಿಗೆ ವಿಶೇಷ ವಿಮಾನಯಾನ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

62 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕಿರ್ಗಿಸ್ತಾನ್‌ನಲ್ಲಿ 8,141 ಕೊರೊನಾ ಸೋಂಕಿತರಿದ್ದಾರೆ. ಇದರಲ್ಲಿ 6,366 ಪ್ರಕರಣಗಳು ಬಿಷ್ಕೆಕ್ ನಲ್ಲಿ ಕೇಂದ್ರೀಕೃತವಾಗಿವೆ. ಅಲ್ಲಿಯೇ ತಮಿಳುನಾಡಿನ ವೈದ್ಯಕೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಹಾಗಾಗಿ ಅವರು ಆದಷ್ಟು ಬೇಗ ತಾವು ತಮಿಳುನಾಡಿಗೆ ಮರಳಬೇಕೆಂದು ಮನವಿ ಮಾಡಿದ್ದಾರೆ.

ಸುಮಾರು 300 ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತವನ್ನು ತಲುಪುವಲ್ಲಿ ಯಶಸ್ವಿಯಾದರು. ಆದರೆ ನೇರ ವಿಮಾನಗಳ ಕೊರತೆಯಿಂದಾಗಿ ಇತರೆ ಸುಮಾರು 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. “ಸರ್ಕಾರವು ನೇರ ವಿಮಾನಗಳನ್ನು ಒದಗಿಸದಿದ್ದರೆ, ನಮ್ಮ ಆಯ್ಕೆ ದೆಹಲಿಗೆ ಹೋಗಿ 7 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಉಳಿಯುವುದು. ನಂತರ ನಾವು ತಮಿಳುನಾಡಿಗೆ ತೆರಳಬೇಕು. ತಮಿಳುನಾಡಿಗೆ ನೇರ ವಿಮಾನಗಳ ಕೊರತೆಯಿಂದ ನಮಗೆ ಕಷ್ಟವಾಗುತ್ತಿದೆ. ಟಿಕೆಟ್ ದರವೂ ಹೆಚ್ಚಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಸಂಸ್ಥೆಗಳು ಖಾಸಗಿ ವಿಮಾನಯಾನ ವ್ಯವಸ್ಥೆ ಮಾಡಿವೆ. ಆದರೆ ಅನೇಕರು ಸಹಾಯ ಸಿಗದೇ ಇಲ್ಲಿ ಉಳಿದಿದ್ದಾರೆ” ಎಂದು ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿ ಸಂಸುದ್ದೀನ್ ಶಬೀರ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

ಜೂನ್ 29 ರಂದು ಡಿಎಂಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ”ತಮಿಳುನಾಡು ಸರ್ಕಾರದ ಕೋರಿಕೆಯ ಆಧಾರದ ಮೇಲೆ ರಾಜ್ಯಕ್ಕೆ ಕಡಿಮೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲಾಗುತ್ತಿದೆ” ಎಂದು ಕೇಂದ್ರವು ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಿರ್ಗಿಸ್ತಾನ್‌ನಲ್ಲಿ ವಿದ್ಯಾರ್ಥಿಗಳ ಅವಸ್ಥೆ:

ಕಿರ್ಗಿಸ್ತಾನ್‌ನಲ್ಲಿ ಲಾಕ್‌ಡೌನ್ ಹೇರಿದಾಗಿನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ದೊರೆತಿಲ್ಲ. “ಚೆನ್ನೈಗೆ ಕೊನೆಯ ವಿಮಾನ ಜುಲೈ 4 ರಂದು ಇತ್ತು. ಮುಂದಿನ 15 ದಿನಗಳವರೆಗೆ ನಮಗೆ ವಿಮಾನಗಳಿಲ್ಲ. ಆದರೆ, ಕಿರ್ಗಿಸ್ತಾನ್ ಸರ್ಕಾರ ನಮ್ಮನ್ನು ಸ್ಥಳಾಂತರಗೊಳ್ಳಲು ಹೇಳಿದೆ. ಭಾರತೀಯ ವಿದ್ಯಾರ್ಥಿಗಳಿಗೆ ನಾವು ಜವಾಬ್ದಾರರಲ್ಲ ಎಂದು ಅವರು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ಇಲ್ಲಿಂದ ಹೊರಡಲು ಬಯಸುತ್ತೇವೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಸಂಸುದ್ದೀನ್ ತಿಳಿಸಿದರು.

“ಪಾಕಿಸ್ತಾನ ಮತ್ತು ಭಾರತದಿಂದ ಅಕ್ಕಿ ಪೂರೈಕೆ ಕೂಡ ಸ್ಥಗಿತಗೊಂಡಿದ್ದು, ನಾವು ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು. 


ಇದನ್ನೂ ಓದಿ : 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...