Homeಅಂತರಾಷ್ಟ್ರೀಯಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

- Advertisement -
- Advertisement -

ಕೊರೊನಾ ದಿನೇ ದಿನೇ ಉಲ್ಭಣಿಸುತ್ತಿರುವುದರ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ ನಲ್ಲಿ ಸಿಕ್ಕಿಕೊಂಡಿರುವ 700 ತಮಿಳು ವಿದ್ಯಾರ್ಥಿಗಳು ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಕಿರ್ಗಿಸ್ತಾನ್ ಸರ್ಕಾರವು, ಕೊರೊನಾ ಕಾರಣದಿಂದ ನಾವು ನಮ್ಮ ಸ್ವಂತನೆಲಕ್ಕೆ ತೆರಳುವಂತೆ ತಮಿಳುನಾಡಿನ 700 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೇಳಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಚೆನ್ನೈಗೆ ನೇರ ವಿಮಾನಗಳಿಲ್ಲದ ಕಾರಣ, ವಿದ್ಯಾರ್ಥಿಗಳು ತಮಿಳುನಾಡಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಮಿಳುನಾಡಿಗೆ ವಿಶೇಷ ವಿಮಾನಯಾನ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

62 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕಿರ್ಗಿಸ್ತಾನ್‌ನಲ್ಲಿ 8,141 ಕೊರೊನಾ ಸೋಂಕಿತರಿದ್ದಾರೆ. ಇದರಲ್ಲಿ 6,366 ಪ್ರಕರಣಗಳು ಬಿಷ್ಕೆಕ್ ನಲ್ಲಿ ಕೇಂದ್ರೀಕೃತವಾಗಿವೆ. ಅಲ್ಲಿಯೇ ತಮಿಳುನಾಡಿನ ವೈದ್ಯಕೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಹಾಗಾಗಿ ಅವರು ಆದಷ್ಟು ಬೇಗ ತಾವು ತಮಿಳುನಾಡಿಗೆ ಮರಳಬೇಕೆಂದು ಮನವಿ ಮಾಡಿದ್ದಾರೆ.

ಸುಮಾರು 300 ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತವನ್ನು ತಲುಪುವಲ್ಲಿ ಯಶಸ್ವಿಯಾದರು. ಆದರೆ ನೇರ ವಿಮಾನಗಳ ಕೊರತೆಯಿಂದಾಗಿ ಇತರೆ ಸುಮಾರು 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. “ಸರ್ಕಾರವು ನೇರ ವಿಮಾನಗಳನ್ನು ಒದಗಿಸದಿದ್ದರೆ, ನಮ್ಮ ಆಯ್ಕೆ ದೆಹಲಿಗೆ ಹೋಗಿ 7 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಉಳಿಯುವುದು. ನಂತರ ನಾವು ತಮಿಳುನಾಡಿಗೆ ತೆರಳಬೇಕು. ತಮಿಳುನಾಡಿಗೆ ನೇರ ವಿಮಾನಗಳ ಕೊರತೆಯಿಂದ ನಮಗೆ ಕಷ್ಟವಾಗುತ್ತಿದೆ. ಟಿಕೆಟ್ ದರವೂ ಹೆಚ್ಚಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಸಂಸ್ಥೆಗಳು ಖಾಸಗಿ ವಿಮಾನಯಾನ ವ್ಯವಸ್ಥೆ ಮಾಡಿವೆ. ಆದರೆ ಅನೇಕರು ಸಹಾಯ ಸಿಗದೇ ಇಲ್ಲಿ ಉಳಿದಿದ್ದಾರೆ” ಎಂದು ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿ ಸಂಸುದ್ದೀನ್ ಶಬೀರ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

ಜೂನ್ 29 ರಂದು ಡಿಎಂಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ”ತಮಿಳುನಾಡು ಸರ್ಕಾರದ ಕೋರಿಕೆಯ ಆಧಾರದ ಮೇಲೆ ರಾಜ್ಯಕ್ಕೆ ಕಡಿಮೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲಾಗುತ್ತಿದೆ” ಎಂದು ಕೇಂದ್ರವು ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಿರ್ಗಿಸ್ತಾನ್‌ನಲ್ಲಿ ವಿದ್ಯಾರ್ಥಿಗಳ ಅವಸ್ಥೆ:

ಕಿರ್ಗಿಸ್ತಾನ್‌ನಲ್ಲಿ ಲಾಕ್‌ಡೌನ್ ಹೇರಿದಾಗಿನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ದೊರೆತಿಲ್ಲ. “ಚೆನ್ನೈಗೆ ಕೊನೆಯ ವಿಮಾನ ಜುಲೈ 4 ರಂದು ಇತ್ತು. ಮುಂದಿನ 15 ದಿನಗಳವರೆಗೆ ನಮಗೆ ವಿಮಾನಗಳಿಲ್ಲ. ಆದರೆ, ಕಿರ್ಗಿಸ್ತಾನ್ ಸರ್ಕಾರ ನಮ್ಮನ್ನು ಸ್ಥಳಾಂತರಗೊಳ್ಳಲು ಹೇಳಿದೆ. ಭಾರತೀಯ ವಿದ್ಯಾರ್ಥಿಗಳಿಗೆ ನಾವು ಜವಾಬ್ದಾರರಲ್ಲ ಎಂದು ಅವರು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ಇಲ್ಲಿಂದ ಹೊರಡಲು ಬಯಸುತ್ತೇವೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಸಂಸುದ್ದೀನ್ ತಿಳಿಸಿದರು.

“ಪಾಕಿಸ್ತಾನ ಮತ್ತು ಭಾರತದಿಂದ ಅಕ್ಕಿ ಪೂರೈಕೆ ಕೂಡ ಸ್ಥಗಿತಗೊಂಡಿದ್ದು, ನಾವು ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು. 


ಇದನ್ನೂ ಓದಿ : 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...