Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....