Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...