Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...