Homeಕರ್ನಾಟಕಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

’ನಾನು ಅಂದು ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು’.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ದಕ್ಷಿಣ ಭಾರತದಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಬರುತ್ತಲೇ ಇವೆ. ಸೆ.14 ರ ಹಿಂದಿ ದಿವಸದ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ತಮಿಳು, ಕನ್ನಡ ಭಾಷೆಗಳಲ್ಲಿ ಹಿಂದಿ ತೆರಿಯಾದು ಪೋಡಾ, ಹಿಂದಿ ಗೊತ್ತಿಲ್ಲ ಹೋಗ್ರಪ್ಪ ಎಂಬ  ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿದ್ದವು.

ಸ್ಯಾಂಡಲ್‌ವುಡ್ ನಟರು ಕೂಡ ಹಿಂದಿ ದಿವಸ್‌ಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದರು. ಟೀ ಶರ್ಟ್‌ಗಳ ಮೇಲೆ ಹಿಂದಿ ಗೊತ್ತಿಲ್ಲ ಹೋಗೋ ನಾನು ಕನ್ನಡಿಗ ಎಂದು ನಟ ಚೇತನ್, ಕನ್ನಡವೇ ನನ್ನ ಬೇರು ‌ಎಂದು ಬಹುಭಾಷಾ ನಟ ಪ್ರಕಾಶ್ ರಾಜ್, ಜೊತೆಗೆ ನನ್ನ ದೇಶ ಭಾರತ, ನನ್ನ ಬೇರು ಕನ್ನಡ ಎಂದು ನಟ ಧನಂಜಯ್ ಕೂಡ ಪೋಸ್ಟ್ ಶೇರ್ ಮಾಡಿದ್ದರು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ ಎಂದು ನಟ ದರ್ಶನ್ ತೂಗುದೀಪ್ ಕೂಡ ಹಿಂದಿ ದಿವಸ್‌ಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಇವುಗಳ ನಡುವೆಯೇ ಚಂದನವನದ ನಿರ್ದೇಶಕ ಲೂಸಿಯಾ ಪವನ್ ಕುಮಾರ್‌ ಸೆ.13 ರಂದು ಫೇಸ್‌ಬುಕ್‌ನಲ್ಲಿ ಹಿಂದಿ ದಿವಸವನ್ನು ವಿರೋಧಿಸುವವರ ವಿರುದ್ಧ ಮಾತನಾಡಿ ವಿವಾದಕ್ಕೆ ಸಿಲುಕಿದ್ದರು. ಫೇಸ್‌ಬುಕ್‌ನಲ್ಲಿ ನೆಗೆಟಿವ್ ಕಾಮೆಂಟ್‌ಗಳನ್ನು ಪಡೆದಿದ್ದರು.

Posted by Pawan Kumar on Sunday, September 13, 2020

ಆದರೆ ಇಂದು ಬೆಳಗ್ಗೆ ಮತ್ತೊಂದು ವಿಡಿಯೋ ಮಾಡಿರುವ ನಿರ್ದೇಶಕ ಹಿಂದಿ ಹೇರಿಕೆ ಬಗ್ಗೆ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಪವನ್ ಕುಮಾರ್ ಮಾಡಿರುವ ವಿಡಿಯೋದಲ್ಲಿ, ಹಿಂದಿ ಹೇರಿಕೆಯನ್ನು ವಿರೋಧಿಸುವವರು ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡುವುದು. ಅದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸುವುದು ಅವರು ಕೊಡುವ ಪ್ರಮಾಣಪತ್ರವನ್ನು ಕನ್ನಡದಲ್ಲಿ ಕೇಳುವುದು. ಅವರು ಕನ್ನಡದಲ್ಲಿ ಸರ್ಟಿಫಿಕೆಟ್ ಕೊಡುವುದಿಲ್ಲ. ಆಗ ಚಿತ್ರವನ್ನು ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಹಾಗೇಯೇ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವುದು.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. ಆದರೆ 50 ಜನ ಸೇರಿ ಚಿತ್ರ ಮಾಡಿದರೇ ಅದು ಪ್ರತಿಭಟನೆ. ಹಾಗಾಗಿ ಇದಕ್ಕೆ ನಟರು, ನಿರ್ದೇಶಕರ ಬೆಂಬಲ ಬೇಕು ಎಂದಿದ್ದಾರೆ. ಯಾರ್‍ಯಾರು ನನ್ನ ಜೊತೆ ಕೈ ಜೋಡಿಸುತ್ತಿರಾ ಬನ್ನಿ ಎಂದು ಚಾಲೆಂಜ್ ಹಾಕಿದ್ದಾರೆ.

ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಪ್ರತಿರೋಧ ನೀಡಲು ಸಾಧ್ಯ. ‌ಈ ರೀತಿಯಲ್ಲಿ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ಕೆಲಸ ಸಿಕ್ಕಿದಂತಾಗುತ್ತದೆ, ಅವರ ಟ್ಯಾಲೆಂಟ್ ಹೊರ ಬರುತ್ತದೆ. ಕೊನೆಯದಾಗಿ ಇಂತಹ ವಿಷಯದ ಮೇಲೆ ಚಿತ್ರ ಮಾಡುವುದರಿಂದ ತುಂಬಾ ಜನಕ್ಕೆ ತಲುಪುತ್ತದೆ. ಪ್ರತಿಭಟನೆ ಮೂಲಕ ಕಮ್ಯೂನಿಕೇಟ್ ಮಾಡುವುದನ್ನು ಮತ್ತಷ್ಟು ಸ್ಟ್ರಾಂಗ್ ಆಗಿ ಮಾಡುತ್ತದೆ. ಇದಕ್ಕೆ ಸಬ್‌ ಟೈಲಲ್ ನೀಡಿ, ಯೂಟ್ಯೂಬ್‌ನಲ್ಲಿ ಫ್ರೀಯಾಗಿ ಬಿಡುಗಡೆ ಮಾಡುವ ಎಂದಿದ್ದಾರೆ.

To create a Positive Movement

Posted by Pawan Kumar on Wednesday, September 16, 2020

 

ಪವನ್ ವಿಡಿಯೋಗೆ ಹಲವು ಮಂದಿ ಪ್ರತಿಕ್ರಿಯಿಸುತ್ತಿದ್ದು, ನಿರ್ದೇಶಕ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ ನಿಮ್ಮ ಪ್ರಯತ್ನಕ್ಕೆ ನನ್ನ ಬೆಂಬಲ ಇದೆ. ನಾನು ಕೈ ಜೊಡಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಚಿತ್ರ ಸಾಹಿತಿ ಕವಿರಾಜ್ ಕೂಡ ಕಾಮೆಂಟ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚಿತ್ರ ಬಿಡುಗಡೆ ಮಾಡುವ ಉಪಾಯ ಸೂಚಿಸಿದ್ದಾರೆ.

ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ತನ್ನ ಹಿಂದಿನ ವಿವಾದಾತ್ಮಕ ಹೇಳಿಕೆಯ ಬಗ್ಗೆ ನಾನು ಗೌರಿ.ಕಾಂ ಜೊತೆ ಸ್ಪಷ್ಟನೆ ನೀಡಿದ ನಿರ್ದೇಶಕ ಪವನ್ ಕುಮಾರ್ “ನಾನು ಅಂದಿನ ದಿನ ಕೂಡ ಹಿಂದಿ ಹೇರಿಕೆ ವಿರೋಧಿಸುವವರ ವಿರುದ್ಧ ಮಾತನಾಡಲಿಲ್ಲ. ಪ್ರತಿಭಟನೆಗಳ ಸ್ವರೂಪದ ಬಗ್ಗೆ ಮಾತನಾಡಿದ್ದು. ಜನರಿಗೆ ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡಬೇಕು ಎಂದಿದ್ದು” ಎಂದು ಹೇಳಿದರು.

ಪ್ರತಿಭಟನೆಗಳು ಮಾಡಲಿ ಆದರ ಜೊತೆಗೆ ಕನ್ನಡಿಗರಿಗೆ ಕೆಲಸ ಕೂಡ ಸಿಗಬೇಕು. ಭಾಷೆ ಹೆಸರು ಇಟ್ಟುಕೊಂಡು ಹೋಗೋ ಅನ್ನೋ ರೀತಿಯಲ್ಲಿ ಮಾತನಾಡಿದರೆ ಅದು ಮತ್ತಷ್ಟು ದ್ವೇಷಕ್ಕೆ ಕಾರಣ ಆಗುತ್ತೆ ಅನ್ನೊದು ನನ್ನ ಅಭಿಪ್ರಾಯ ಎನ್ನುತ್ತಾರೆ ಪವನ್.

ಇಂದು ನಾನು ಕೊಟ್ಟಿರುವ ಉಪಾಯಕ್ಕೆ ಹಲವು ಹೊಸ ನಿರ್ದೇಶಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜೊತೆಗೆ ನಿರ್ದೇಶಕರಾದ ಪಿ.ಶೇಷಾದ್ರಿ, ಚೈತನ್ಯ ಕೆ.ಎಂ, ಸಿಂಪಲ್ ಸುನಿ ಕೂಡ ಕೈ ಜೋಡಿಸುವ ಭರವಸೆ ನೀಡಿದ್ದಾರೆ. ನನ್ನ ಕಡೆಯಿಂದ ಪ್ಲಾನ್ ಕೊಟ್ಟಿದ್ದೀನಿ ಆದರೆ ಅಷ್ಟು ಜನ ಮುಂದೆ ಬರುತ್ತಾರೋ ನೋಡೋಣ ಎಂದರು.

ನಿರ್ದೇಶಕರು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡರೂ, ಜನ ಮಾತ್ರ ಇನ್ನೂ ಅವರ ಹಳೆಯ ವಿಡಿಯೋಗೆ ಕಾಮೆಂಟ್ ಮಾಡುವುದನ್ನು ಬಿಟ್ಟಿಲ್ಲ. ಇದರ ಜೊತೆಗೆ ಇಂದಿನ ವಿಡಿಯೋಗೂ ಸಹ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು. ಕನ್ನಡ ಚಿತ್ರರಂಗ ಹೇಗೆ ಈ ಚಾಲೆಂಜ್ ಸ್ವೀಕರಿಸುತ್ತದೆ ಎಂಬುದೇ ಸದ್ಯದ ಕುತೂಹಲ.


ಇದನ್ನೂ ಓದಿ: ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ವಿರೋಧ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...