Homeಕರ್ನಾಟಕಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ.

- Advertisement -
- Advertisement -

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಮರ್ಯಾದೆಗೇಡು ಹತ್ಯೆ ಮಾಡಿರುವ ಅಮಾನುಷ ಘಟನೆ ಕಲಬರುಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಜರುಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾಡಿ ಪಟ್ಟಣದ ಭೀಮ್ ನಗರದ ನಿವಾಸಿ ವಿಜಯ ಕಾಂಬಳೆ (25) ಮತ್ತು ಮುಸ್ಲಿಂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಮನೆಯವರು ಪರಸ್ಪರ ಪರಿಚಯವಿದ್ದ ಕಾರಣಕ್ಕೆ ಇವರಿಬ್ಬರ ನಡುವೆ ಪರಿಚಯ ಮತ್ತು ಪ್ರೀತಿ ಉಂಟಾಗಿತ್ತು. ಆದರೆ ಈ ಪ್ರೀತಿ ವಿಚಾರ ಹುಡುಗಿ ಮನೆಯವರಿಗೆ ತಿಳಿದ ನಂತರ ಗಲಾಟೆಯಾಗಿತ್ತು. ಊರಿನವರ ಸಮ್ಮುಖದಲ್ಲಿ ಪಂಚಾಯ್ತಿ ನಡೆಸಿ ಇಬ್ಬರೂ ಬೇರೆ ಬೇರೆಯಾಗಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಹುಡುಗ ಮತ್ತು ಹುಡುಗಿ ಪರಸ್ಪರ ಫೋನ್‌ನಲ್ಲಿ ಮಾತಾಡುತ್ತಿದ್ದರು. ಇದನ್ನು ಸಹಿಸದ ಹುಡುಗಿಯ ಕುಟುಂಬದವರನ್ನು ವಿಜಯ ಕಾಂಬಳೆಯನ್ನು ಹತ್ಯೆ ಮಾಡಿದ್ದಾರೆ ಎಂದು ಅವರ ಸಂಬಂಧಿ ರಾಜಶೇಖರ್ ದೂರಿದ್ದಾರೆ.

ವಿಜಯ್ ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಆದರೆ ಹುಡುಗಿಯ ಕಡೆಯವರು ಫೋನ್ ಮಾಡಿ ಕರೆಸಿಕೊಂಡು ರೈಲ್ವೆ ನಿಲ್ದಾಣದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕಲಬುರಗಿ ಎಸ್‌ಪಿ ಇಶಾ ಪಂತ್, “ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ 302, 34 ಹಾಗೂ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದೇ ರೀತಿಯ ಎರಡು ಮಾರ್ಯಾದೆಹೀನ ಹತ್ಯೆಗಳು ಇತ್ತೀಚೆಗೆ ಹೈದರಾಬಾದ್‌ನಲ್ಲಿ ವರದಿಯಾಗಿದ್ದವರು. ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನ ಕೊಲೆ ನಡೆದಿತ್ತು. ಅವುಗಳು ಮಾಸುವ ಮುನ್ನವೇ ಅದೇ ರೀತಿಯ ಹತ್ಯೆ ಕಲಬುರಗಿಯಲ್ಲಿಯೂ ನಡೆದಿದೆ.

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನನ್ನು ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ಹತ್ಯೆಗೈಯಲಾಗಿತ್ತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಮೇ 20ರಂದು ಇರಿದು ಕೊಂದಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶ: ಸಹೋದರರಿಂದ ಅಳಿಯನ ಕೊಲೆ – ಮರ್ಯಾದೆಗೇಡು ಹತ್ಯೆ ಶಂಕೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ. ಯಾವುದೇ ಧರ್ಮ ಇರಲಿ ಜಾತಿ ಕಾರಣಕ್ಕೆ ಕೊಲ್ಲುವುದು ಅಮಾನುಷ ಮತ್ತು ಜೀವವಿರೋಧಿ ಕೃತ್ಯ ಎಂದು ಖಂಡನೆ ವ್ಯಕ್ತವಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳನ್ನು ತಡೆಯುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾನೂನು ರೂಪಿಸಲಾಗಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಘಟನೆಗಳಿಗೆ ಜಾಮೀನು ರಹಿತ, 5 ಲಕ್ಷದವರೆಗಿನ ದಂಡ ವಿಧಿಸುವ ಮಸೂದೆಯನ್ನು ಇಂದು ಪಾಸ್ ಮಾಡಲಾಗಿದೆ. ಮಸೂದೆಯಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ. ಮರ್ಯಾದೆ ಹೆಸರಿನ ಹಿಂಸಾಚಾರ ಮತ್ತು ಕ್ರಿಮಿನಲ್ ಬೆದರಿಕೆಗಳನ್ನು ಕಠಿಣವಾಗಿ ಶಿಕ್ಷಿಸುವುದು ಇದರ ಉದ್ದೇಶ ಎಂದು ಅಲ್ಲಿನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಇದೇ ರೀತಿಯ ಕಾನೂನುಗಳನ್ನು ಎಲ್ಲಾ ರಾಜ್ಯಗಳಲ್ಲಿ ಅಳವಡಿಸುವ ತುರ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....