Homeಕರ್ನಾಟಕಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ.

- Advertisement -
- Advertisement -

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಮರ್ಯಾದೆಗೇಡು ಹತ್ಯೆ ಮಾಡಿರುವ ಅಮಾನುಷ ಘಟನೆ ಕಲಬರುಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಜರುಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾಡಿ ಪಟ್ಟಣದ ಭೀಮ್ ನಗರದ ನಿವಾಸಿ ವಿಜಯ ಕಾಂಬಳೆ (25) ಮತ್ತು ಮುಸ್ಲಿಂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಮನೆಯವರು ಪರಸ್ಪರ ಪರಿಚಯವಿದ್ದ ಕಾರಣಕ್ಕೆ ಇವರಿಬ್ಬರ ನಡುವೆ ಪರಿಚಯ ಮತ್ತು ಪ್ರೀತಿ ಉಂಟಾಗಿತ್ತು. ಆದರೆ ಈ ಪ್ರೀತಿ ವಿಚಾರ ಹುಡುಗಿ ಮನೆಯವರಿಗೆ ತಿಳಿದ ನಂತರ ಗಲಾಟೆಯಾಗಿತ್ತು. ಊರಿನವರ ಸಮ್ಮುಖದಲ್ಲಿ ಪಂಚಾಯ್ತಿ ನಡೆಸಿ ಇಬ್ಬರೂ ಬೇರೆ ಬೇರೆಯಾಗಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಹುಡುಗ ಮತ್ತು ಹುಡುಗಿ ಪರಸ್ಪರ ಫೋನ್‌ನಲ್ಲಿ ಮಾತಾಡುತ್ತಿದ್ದರು. ಇದನ್ನು ಸಹಿಸದ ಹುಡುಗಿಯ ಕುಟುಂಬದವರನ್ನು ವಿಜಯ ಕಾಂಬಳೆಯನ್ನು ಹತ್ಯೆ ಮಾಡಿದ್ದಾರೆ ಎಂದು ಅವರ ಸಂಬಂಧಿ ರಾಜಶೇಖರ್ ದೂರಿದ್ದಾರೆ.

ವಿಜಯ್ ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಆದರೆ ಹುಡುಗಿಯ ಕಡೆಯವರು ಫೋನ್ ಮಾಡಿ ಕರೆಸಿಕೊಂಡು ರೈಲ್ವೆ ನಿಲ್ದಾಣದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕಲಬುರಗಿ ಎಸ್‌ಪಿ ಇಶಾ ಪಂತ್, “ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ 302, 34 ಹಾಗೂ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದೇ ರೀತಿಯ ಎರಡು ಮಾರ್ಯಾದೆಹೀನ ಹತ್ಯೆಗಳು ಇತ್ತೀಚೆಗೆ ಹೈದರಾಬಾದ್‌ನಲ್ಲಿ ವರದಿಯಾಗಿದ್ದವರು. ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನ ಕೊಲೆ ನಡೆದಿತ್ತು. ಅವುಗಳು ಮಾಸುವ ಮುನ್ನವೇ ಅದೇ ರೀತಿಯ ಹತ್ಯೆ ಕಲಬುರಗಿಯಲ್ಲಿಯೂ ನಡೆದಿದೆ.

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನನ್ನು ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ಹತ್ಯೆಗೈಯಲಾಗಿತ್ತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಮೇ 20ರಂದು ಇರಿದು ಕೊಂದಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶ: ಸಹೋದರರಿಂದ ಅಳಿಯನ ಕೊಲೆ – ಮರ್ಯಾದೆಗೇಡು ಹತ್ಯೆ ಶಂಕೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ. ಯಾವುದೇ ಧರ್ಮ ಇರಲಿ ಜಾತಿ ಕಾರಣಕ್ಕೆ ಕೊಲ್ಲುವುದು ಅಮಾನುಷ ಮತ್ತು ಜೀವವಿರೋಧಿ ಕೃತ್ಯ ಎಂದು ಖಂಡನೆ ವ್ಯಕ್ತವಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳನ್ನು ತಡೆಯುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾನೂನು ರೂಪಿಸಲಾಗಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಘಟನೆಗಳಿಗೆ ಜಾಮೀನು ರಹಿತ, 5 ಲಕ್ಷದವರೆಗಿನ ದಂಡ ವಿಧಿಸುವ ಮಸೂದೆಯನ್ನು ಇಂದು ಪಾಸ್ ಮಾಡಲಾಗಿದೆ. ಮಸೂದೆಯಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ. ಮರ್ಯಾದೆ ಹೆಸರಿನ ಹಿಂಸಾಚಾರ ಮತ್ತು ಕ್ರಿಮಿನಲ್ ಬೆದರಿಕೆಗಳನ್ನು ಕಠಿಣವಾಗಿ ಶಿಕ್ಷಿಸುವುದು ಇದರ ಉದ್ದೇಶ ಎಂದು ಅಲ್ಲಿನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಇದೇ ರೀತಿಯ ಕಾನೂನುಗಳನ್ನು ಎಲ್ಲಾ ರಾಜ್ಯಗಳಲ್ಲಿ ಅಳವಡಿಸುವ ತುರ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...