Homeಕರ್ನಾಟಕಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ.

- Advertisement -
- Advertisement -

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಮರ್ಯಾದೆಗೇಡು ಹತ್ಯೆ ಮಾಡಿರುವ ಅಮಾನುಷ ಘಟನೆ ಕಲಬರುಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಜರುಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾಡಿ ಪಟ್ಟಣದ ಭೀಮ್ ನಗರದ ನಿವಾಸಿ ವಿಜಯ ಕಾಂಬಳೆ (25) ಮತ್ತು ಮುಸ್ಲಿಂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಮನೆಯವರು ಪರಸ್ಪರ ಪರಿಚಯವಿದ್ದ ಕಾರಣಕ್ಕೆ ಇವರಿಬ್ಬರ ನಡುವೆ ಪರಿಚಯ ಮತ್ತು ಪ್ರೀತಿ ಉಂಟಾಗಿತ್ತು. ಆದರೆ ಈ ಪ್ರೀತಿ ವಿಚಾರ ಹುಡುಗಿ ಮನೆಯವರಿಗೆ ತಿಳಿದ ನಂತರ ಗಲಾಟೆಯಾಗಿತ್ತು. ಊರಿನವರ ಸಮ್ಮುಖದಲ್ಲಿ ಪಂಚಾಯ್ತಿ ನಡೆಸಿ ಇಬ್ಬರೂ ಬೇರೆ ಬೇರೆಯಾಗಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಹುಡುಗ ಮತ್ತು ಹುಡುಗಿ ಪರಸ್ಪರ ಫೋನ್‌ನಲ್ಲಿ ಮಾತಾಡುತ್ತಿದ್ದರು. ಇದನ್ನು ಸಹಿಸದ ಹುಡುಗಿಯ ಕುಟುಂಬದವರನ್ನು ವಿಜಯ ಕಾಂಬಳೆಯನ್ನು ಹತ್ಯೆ ಮಾಡಿದ್ದಾರೆ ಎಂದು ಅವರ ಸಂಬಂಧಿ ರಾಜಶೇಖರ್ ದೂರಿದ್ದಾರೆ.

ವಿಜಯ್ ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಆದರೆ ಹುಡುಗಿಯ ಕಡೆಯವರು ಫೋನ್ ಮಾಡಿ ಕರೆಸಿಕೊಂಡು ರೈಲ್ವೆ ನಿಲ್ದಾಣದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕಲಬುರಗಿ ಎಸ್‌ಪಿ ಇಶಾ ಪಂತ್, “ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ 302, 34 ಹಾಗೂ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದೇ ರೀತಿಯ ಎರಡು ಮಾರ್ಯಾದೆಹೀನ ಹತ್ಯೆಗಳು ಇತ್ತೀಚೆಗೆ ಹೈದರಾಬಾದ್‌ನಲ್ಲಿ ವರದಿಯಾಗಿದ್ದವರು. ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನ ಕೊಲೆ ನಡೆದಿತ್ತು. ಅವುಗಳು ಮಾಸುವ ಮುನ್ನವೇ ಅದೇ ರೀತಿಯ ಹತ್ಯೆ ಕಲಬುರಗಿಯಲ್ಲಿಯೂ ನಡೆದಿದೆ.

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನನ್ನು ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ಹತ್ಯೆಗೈಯಲಾಗಿತ್ತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಮೇ 20ರಂದು ಇರಿದು ಕೊಂದಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶ: ಸಹೋದರರಿಂದ ಅಳಿಯನ ಕೊಲೆ – ಮರ್ಯಾದೆಗೇಡು ಹತ್ಯೆ ಶಂಕೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ. ಯಾವುದೇ ಧರ್ಮ ಇರಲಿ ಜಾತಿ ಕಾರಣಕ್ಕೆ ಕೊಲ್ಲುವುದು ಅಮಾನುಷ ಮತ್ತು ಜೀವವಿರೋಧಿ ಕೃತ್ಯ ಎಂದು ಖಂಡನೆ ವ್ಯಕ್ತವಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳನ್ನು ತಡೆಯುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾನೂನು ರೂಪಿಸಲಾಗಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಘಟನೆಗಳಿಗೆ ಜಾಮೀನು ರಹಿತ, 5 ಲಕ್ಷದವರೆಗಿನ ದಂಡ ವಿಧಿಸುವ ಮಸೂದೆಯನ್ನು ಇಂದು ಪಾಸ್ ಮಾಡಲಾಗಿದೆ. ಮಸೂದೆಯಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ. ಮರ್ಯಾದೆ ಹೆಸರಿನ ಹಿಂಸಾಚಾರ ಮತ್ತು ಕ್ರಿಮಿನಲ್ ಬೆದರಿಕೆಗಳನ್ನು ಕಠಿಣವಾಗಿ ಶಿಕ್ಷಿಸುವುದು ಇದರ ಉದ್ದೇಶ ಎಂದು ಅಲ್ಲಿನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಇದೇ ರೀತಿಯ ಕಾನೂನುಗಳನ್ನು ಎಲ್ಲಾ ರಾಜ್ಯಗಳಲ್ಲಿ ಅಳವಡಿಸುವ ತುರ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...