Homeಕರ್ನಾಟಕಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ.

- Advertisement -
- Advertisement -

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಮರ್ಯಾದೆಗೇಡು ಹತ್ಯೆ ಮಾಡಿರುವ ಅಮಾನುಷ ಘಟನೆ ಕಲಬರುಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಜರುಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾಡಿ ಪಟ್ಟಣದ ಭೀಮ್ ನಗರದ ನಿವಾಸಿ ವಿಜಯ ಕಾಂಬಳೆ (25) ಮತ್ತು ಮುಸ್ಲಿಂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಮನೆಯವರು ಪರಸ್ಪರ ಪರಿಚಯವಿದ್ದ ಕಾರಣಕ್ಕೆ ಇವರಿಬ್ಬರ ನಡುವೆ ಪರಿಚಯ ಮತ್ತು ಪ್ರೀತಿ ಉಂಟಾಗಿತ್ತು. ಆದರೆ ಈ ಪ್ರೀತಿ ವಿಚಾರ ಹುಡುಗಿ ಮನೆಯವರಿಗೆ ತಿಳಿದ ನಂತರ ಗಲಾಟೆಯಾಗಿತ್ತು. ಊರಿನವರ ಸಮ್ಮುಖದಲ್ಲಿ ಪಂಚಾಯ್ತಿ ನಡೆಸಿ ಇಬ್ಬರೂ ಬೇರೆ ಬೇರೆಯಾಗಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಹುಡುಗ ಮತ್ತು ಹುಡುಗಿ ಪರಸ್ಪರ ಫೋನ್‌ನಲ್ಲಿ ಮಾತಾಡುತ್ತಿದ್ದರು. ಇದನ್ನು ಸಹಿಸದ ಹುಡುಗಿಯ ಕುಟುಂಬದವರನ್ನು ವಿಜಯ ಕಾಂಬಳೆಯನ್ನು ಹತ್ಯೆ ಮಾಡಿದ್ದಾರೆ ಎಂದು ಅವರ ಸಂಬಂಧಿ ರಾಜಶೇಖರ್ ದೂರಿದ್ದಾರೆ.

ವಿಜಯ್ ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಆದರೆ ಹುಡುಗಿಯ ಕಡೆಯವರು ಫೋನ್ ಮಾಡಿ ಕರೆಸಿಕೊಂಡು ರೈಲ್ವೆ ನಿಲ್ದಾಣದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕಲಬುರಗಿ ಎಸ್‌ಪಿ ಇಶಾ ಪಂತ್, “ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ 302, 34 ಹಾಗೂ ಎಸ್‌ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದೇ ರೀತಿಯ ಎರಡು ಮಾರ್ಯಾದೆಹೀನ ಹತ್ಯೆಗಳು ಇತ್ತೀಚೆಗೆ ಹೈದರಾಬಾದ್‌ನಲ್ಲಿ ವರದಿಯಾಗಿದ್ದವರು. ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನ ಕೊಲೆ ನಡೆದಿತ್ತು. ಅವುಗಳು ಮಾಸುವ ಮುನ್ನವೇ ಅದೇ ರೀತಿಯ ಹತ್ಯೆ ಕಲಬುರಗಿಯಲ್ಲಿಯೂ ನಡೆದಿದೆ.

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನನ್ನು ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ ಹತ್ಯೆಗೈಯಲಾಗಿತ್ತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಮೇ 20ರಂದು ಇರಿದು ಕೊಂದಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶ: ಸಹೋದರರಿಂದ ಅಳಿಯನ ಕೊಲೆ – ಮರ್ಯಾದೆಗೇಡು ಹತ್ಯೆ ಶಂಕೆ

ಈ ಜಾತಿಶ್ರೇ‍ಷ್ಠತೆಯ ವ್ಯಸನ ಮುಸ್ಲಿಂ ಧರ್ಮದಲ್ಲಿಯೂ ಹಬ್ಬುತ್ತಿರುವುದಕ್ಕೆ ತೀವ್ರ ಟೀಕೆ, ಖಂಡನೆಗಳು ವ್ಯಕ್ತವಾಗಿವೆ. ಯಾವುದೇ ಧರ್ಮ ಇರಲಿ ಜಾತಿ ಕಾರಣಕ್ಕೆ ಕೊಲ್ಲುವುದು ಅಮಾನುಷ ಮತ್ತು ಜೀವವಿರೋಧಿ ಕೃತ್ಯ ಎಂದು ಖಂಡನೆ ವ್ಯಕ್ತವಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳನ್ನು ತಡೆಯುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾನೂನು ರೂಪಿಸಲಾಗಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಘಟನೆಗಳಿಗೆ ಜಾಮೀನು ರಹಿತ, 5 ಲಕ್ಷದವರೆಗಿನ ದಂಡ ವಿಧಿಸುವ ಮಸೂದೆಯನ್ನು ಇಂದು ಪಾಸ್ ಮಾಡಲಾಗಿದೆ. ಮಸೂದೆಯಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ. ಮರ್ಯಾದೆ ಹೆಸರಿನ ಹಿಂಸಾಚಾರ ಮತ್ತು ಕ್ರಿಮಿನಲ್ ಬೆದರಿಕೆಗಳನ್ನು ಕಠಿಣವಾಗಿ ಶಿಕ್ಷಿಸುವುದು ಇದರ ಉದ್ದೇಶ ಎಂದು ಅಲ್ಲಿನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಇದೇ ರೀತಿಯ ಕಾನೂನುಗಳನ್ನು ಎಲ್ಲಾ ರಾಜ್ಯಗಳಲ್ಲಿ ಅಳವಡಿಸುವ ತುರ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....