Homeಕರ್ನಾಟಕವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ - ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಮ್‌ಗಳನ್ನು (ಎಎಎಸ್) ಬಳಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಜೊತೆಗೆ ವಿಕಲಚೇತನರ ಪ್ರಯಾಣವನ್ನು ಸುಲಭಗೊಳಿಸಲು ಬಸ್‌ ನಿಲ್ದಾಣಗಳಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಧ್ವನಿವರ್ಧಕ ವ್ಯವಸ್ಥೆಯನ್ನು ಮಾಡಬೇಕು ಎಂದು ಹೇಳಿದೆ. ವಿಕಲಚೇತನರಿಗಾಗಿ

ವಿಕಲಚೇತನರ ಅನುಕೂಲವಾಗುವ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ, ಈ ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ ನಿಬಂಧನೆಯಲ್ಲಿ ಮೀಸಲಿಡಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂದಿನ ಎರಡು ವರ್ಷಗಳಲ್ಲಿ, ರಾಜ್ಯ ಸರ್ಕಾರವು ವಿಕಲಚೇತನರ ಅನುಕೂಲಕ್ಕಾಗಿ ಎಎಎಸ್ ಅನ್ನು ನಿರ್ವಹಿಸಬೇಕು ಮತ್ತು ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳು ಮತ್ತು ಪಾಯಿಂಟ್‌ಗಳಲ್ಲಿ ಅದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಅದರ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠವು 2022 ರಲ್ಲಿ ದೃಷ್ಟಿ ವಿಕಲಚೇತನ ಪರ ಹೋರಾಟಗಾರ ಎನ್. ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಶಿಯಲ್ ಕಾಸ್ ಸಿಇಒ ಕೃತಿಕಾ ಎನ್. ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಲೇವಾರಿ ಮಾಡುವಾಗ ಈ ನಿರ್ದೇಶನಗಳನ್ನು ನೀಡಿದೆ.

ವಿಕಲಾಂಗ ವ್ಯಕ್ತಿಗಳಿಗೆ ದೈಹಿಕವಾಗಿ ಮಾರ್ಗದರ್ಶನ, ಸಹಕಾರ ಮತ್ತು ಸಹಾಯ ಮಾಡಲು ಪ್ರಮುಖ ಸ್ಥಳಗಳು/ಬಸ್ ನಿಲ್ದಾಣಗಳಲ್ಲಿ ಮೇಲ್ವಿಚಾರಣಾ ನೌಕರರ ತಂಡವನ್ನು ನಿಯೋಜಿಸಬೇಕು. ಹೀಗೆ ಮಾಡಿದರೆ ಅವರು ಅದರಿಂದ ಪ್ರಯೋಜನಗಳನ್ನು ಪರಿಣಾಮಕಾರಿಯಾಗಿ ಮತ್ತು ಫಲಪ್ರದವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ವಿಕಲಚೇತನರಿಗಾಗಿ

ಬಸ್ ನಿಲ್ದಾಣಗಳಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ಆಡಿಯೋ ಅನೌನ್ಸ್‌ಮೆಂಟ್ ಸೌಲಭ್ಯವನ್ನು ಪ್ರಾರಂಭಿಸುವ ಮೂಲಕ ವಿಕಲಚೇತನರಿಗೆ ಅನುಕೂಲವಾಗುವಂತೆ ಮಾಡಿರುವ ಅಧಿಕಾರಿಗಳ ಪ್ರಯತ್ನವನ್ನು ಸುಪ್ರಿಂಕೋರ್ಟ್ ಸಂತಸ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...