Homeಕರ್ನಾಟಕವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ - ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಮ್‌ಗಳನ್ನು (ಎಎಎಸ್) ಬಳಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಜೊತೆಗೆ ವಿಕಲಚೇತನರ ಪ್ರಯಾಣವನ್ನು ಸುಲಭಗೊಳಿಸಲು ಬಸ್‌ ನಿಲ್ದಾಣಗಳಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಧ್ವನಿವರ್ಧಕ ವ್ಯವಸ್ಥೆಯನ್ನು ಮಾಡಬೇಕು ಎಂದು ಹೇಳಿದೆ. ವಿಕಲಚೇತನರಿಗಾಗಿ

ವಿಕಲಚೇತನರ ಅನುಕೂಲವಾಗುವ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ, ಈ ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ ನಿಬಂಧನೆಯಲ್ಲಿ ಮೀಸಲಿಡಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂದಿನ ಎರಡು ವರ್ಷಗಳಲ್ಲಿ, ರಾಜ್ಯ ಸರ್ಕಾರವು ವಿಕಲಚೇತನರ ಅನುಕೂಲಕ್ಕಾಗಿ ಎಎಎಸ್ ಅನ್ನು ನಿರ್ವಹಿಸಬೇಕು ಮತ್ತು ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳು ಮತ್ತು ಪಾಯಿಂಟ್‌ಗಳಲ್ಲಿ ಅದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಅದರ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠವು 2022 ರಲ್ಲಿ ದೃಷ್ಟಿ ವಿಕಲಚೇತನ ಪರ ಹೋರಾಟಗಾರ ಎನ್. ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಶಿಯಲ್ ಕಾಸ್ ಸಿಇಒ ಕೃತಿಕಾ ಎನ್. ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಲೇವಾರಿ ಮಾಡುವಾಗ ಈ ನಿರ್ದೇಶನಗಳನ್ನು ನೀಡಿದೆ.

ವಿಕಲಾಂಗ ವ್ಯಕ್ತಿಗಳಿಗೆ ದೈಹಿಕವಾಗಿ ಮಾರ್ಗದರ್ಶನ, ಸಹಕಾರ ಮತ್ತು ಸಹಾಯ ಮಾಡಲು ಪ್ರಮುಖ ಸ್ಥಳಗಳು/ಬಸ್ ನಿಲ್ದಾಣಗಳಲ್ಲಿ ಮೇಲ್ವಿಚಾರಣಾ ನೌಕರರ ತಂಡವನ್ನು ನಿಯೋಜಿಸಬೇಕು. ಹೀಗೆ ಮಾಡಿದರೆ ಅವರು ಅದರಿಂದ ಪ್ರಯೋಜನಗಳನ್ನು ಪರಿಣಾಮಕಾರಿಯಾಗಿ ಮತ್ತು ಫಲಪ್ರದವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ವಿಕಲಚೇತನರಿಗಾಗಿ

ಬಸ್ ನಿಲ್ದಾಣಗಳಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ಆಡಿಯೋ ಅನೌನ್ಸ್‌ಮೆಂಟ್ ಸೌಲಭ್ಯವನ್ನು ಪ್ರಾರಂಭಿಸುವ ಮೂಲಕ ವಿಕಲಚೇತನರಿಗೆ ಅನುಕೂಲವಾಗುವಂತೆ ಮಾಡಿರುವ ಅಧಿಕಾರಿಗಳ ಪ್ರಯತ್ನವನ್ನು ಸುಪ್ರಿಂಕೋರ್ಟ್ ಸಂತಸ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...