Homeಮುಖಪುಟಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

- Advertisement -
- Advertisement -

ಬಿಜೆಪಿಯ ಹಿರಿಯ ಮುಖಂಡ, ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭಾನುವಾರ ಲಖನೌದಲ್ಲಿ ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ಈಗ ಉತ್ತರಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಮೋದಿಯವರು ಟ್ವೀಟ್‍ ಮಾಡಿ ಶುಭಾಶಯ ಕೋರಲಿಲ್ಲ ಮತ್ತು ಉತ್ತರಪ್ರದೇಶದ ಸರ್ಕಾರಿ ಜಾಹಿರಾತುಗಳಲ್ಲಿ  ಕಳೆದ ವಾರದಿಂದ ಮೋದಿಯವರ ಭಾವಚಿತ್ರ ಮಾಯವಾಗಿದೆ. ಈ ಎರಡೂ ಅಂಶಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ನೋಡಿದಾಗ, ಕೇಂದ್ರ ನಾಯಕರು ಮತ್ತು ಯೋಗಿ ಆದಿತ್ಯನಾಥ್‍ ಅವರ ನಡುವೆ ಅಧಿಕಾರದ ಮುಸುಕಿನ ಗುದ್ದಾಟ ಆರಂಭವಾದಂತಿದೆ.

ಕಳೆದ ವಾರವಷ್ಟೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‍ ಸಂತೋಷ್‍ ಮತ್ತು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‍ ಸಿಂಗ್‍ ಲಕ್ನೋಗೆ ವಿಶೇಷ ಭೇಟಿ ನೀಡಿದ್ದರು. ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಮಂತ್ರಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದರು. ಅವರಿಬ್ಬರೂ ದೆಹಲಿ ತಲುಪಿ ಹಿರಿಯ ನಾಯಕರೊಂದಿಗೆ ಮಾತನಾಡಿದ ನಂತರ, ಭಾನುವಾರ ದಿಢೀರನೆ ರಾಧಾ ಮೋಹನ್‍ ಸಿಂಗ್‍ ಮರಳಿ ಲಕ್ನೋಗೆ ಬಂದು ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳು ಕೇಳಿದ ಯಾವ ಪ್ರಶ್ನೆಗಳಿಗೂ ರಾಧಾ ಮೋಹನ್‍ ಸಿಂಗ್‍ ಸ್ಪಷ್ಟವಾಗಿ ಉತ್ತರಿಸಿಲ್ಲ. ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳಿದಾಗ ಸಿಂಗ್ ಅವರು, ಸಚಿವ ಸಂಪುಟವನ್ನು ವಿಸ್ತರಿಸುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ರಾಜ್ಯಪಾಲರ ಜೊತೆಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಹೇಳಿದ ಸಿಂಗ್, ನಾನು ರಾಜ್ಯದ ಉಸ್ತುವಾರಿ ವಹಿಸಿಕೊಂಡಾಗಿನಿಂದ, ರಾಜ್ಯಪಾಲರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

ಹಲವಾರು ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಅವರ ಕೋವಿಡ್‍ ನಿರ್ವಹಣೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಗಮನಿಸಬಹುದು.

ಭಾನುವಾರದ ಭೇಟಿಯ ನಂತರ ಯೋಗಿಯವರೇ ಮುಂದುವರೆಯುತ್ತಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದರೆ, ಸದ್ಯಕ್ಕೆ ಈ ಸಂದರ್ಭದಲ್ಲಿ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಪಕ್ಷದಲ್ಲಿ ಗೊಂದಲ, ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿಯವರ ಬಗ್ಗೆ ಕೇಳಿದಾಗ, ‘ಯೋಗಿ ಆದಿತ್ಯನಾಥ್ ಉತ್ತಮ ಕೆಲಸ  ಮಾಡುತ್ತಿದ್ದಾರೆ ಎಂದಿರುವ ಸಿಂಗ್‍,  “ಪ್ರತಿಯೊಬ್ಬರೂ ಯೋಗಿಯವರ ನಾಯಕತ್ವವನ್ನು ನಂಬುತ್ತಾರೆ, ಅವರು ಇತ್ತೀಚೆಗೆ ಕೊರೋನಾ ನಿರ್ವಹಣೆಯನ್ನು ಚೆನ್ನಾಗಿ ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

2022ರ ಚುನಾವಣೆಯ ತಯಾರಿ?

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಕಳೆದ ವಾರ ಎನ್‍ಡಿಟಿವಿ ವರದಿ ಮಾಡಿತ್ತು.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024 ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಸದ್ಯ ಯೋಗಿ ಮತ್ತು ನರೇಂದ್ರ ಮೋದಿಯವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಆ ಮೂಲಕ ಯೋಗಿಯವರ ಆಡಳಿತವನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಬಹುದು ಎನ್ನಲಾಗಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...