Homeಮುಖಪುಟಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

- Advertisement -
- Advertisement -

ಬಿಜೆಪಿಯ ಹಿರಿಯ ಮುಖಂಡ, ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭಾನುವಾರ ಲಖನೌದಲ್ಲಿ ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ಈಗ ಉತ್ತರಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಮೋದಿಯವರು ಟ್ವೀಟ್‍ ಮಾಡಿ ಶುಭಾಶಯ ಕೋರಲಿಲ್ಲ ಮತ್ತು ಉತ್ತರಪ್ರದೇಶದ ಸರ್ಕಾರಿ ಜಾಹಿರಾತುಗಳಲ್ಲಿ  ಕಳೆದ ವಾರದಿಂದ ಮೋದಿಯವರ ಭಾವಚಿತ್ರ ಮಾಯವಾಗಿದೆ. ಈ ಎರಡೂ ಅಂಶಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ನೋಡಿದಾಗ, ಕೇಂದ್ರ ನಾಯಕರು ಮತ್ತು ಯೋಗಿ ಆದಿತ್ಯನಾಥ್‍ ಅವರ ನಡುವೆ ಅಧಿಕಾರದ ಮುಸುಕಿನ ಗುದ್ದಾಟ ಆರಂಭವಾದಂತಿದೆ.

ಕಳೆದ ವಾರವಷ್ಟೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‍ ಸಂತೋಷ್‍ ಮತ್ತು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‍ ಸಿಂಗ್‍ ಲಕ್ನೋಗೆ ವಿಶೇಷ ಭೇಟಿ ನೀಡಿದ್ದರು. ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಮಂತ್ರಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದರು. ಅವರಿಬ್ಬರೂ ದೆಹಲಿ ತಲುಪಿ ಹಿರಿಯ ನಾಯಕರೊಂದಿಗೆ ಮಾತನಾಡಿದ ನಂತರ, ಭಾನುವಾರ ದಿಢೀರನೆ ರಾಧಾ ಮೋಹನ್‍ ಸಿಂಗ್‍ ಮರಳಿ ಲಕ್ನೋಗೆ ಬಂದು ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳು ಕೇಳಿದ ಯಾವ ಪ್ರಶ್ನೆಗಳಿಗೂ ರಾಧಾ ಮೋಹನ್‍ ಸಿಂಗ್‍ ಸ್ಪಷ್ಟವಾಗಿ ಉತ್ತರಿಸಿಲ್ಲ. ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳಿದಾಗ ಸಿಂಗ್ ಅವರು, ಸಚಿವ ಸಂಪುಟವನ್ನು ವಿಸ್ತರಿಸುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ರಾಜ್ಯಪಾಲರ ಜೊತೆಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಹೇಳಿದ ಸಿಂಗ್, ನಾನು ರಾಜ್ಯದ ಉಸ್ತುವಾರಿ ವಹಿಸಿಕೊಂಡಾಗಿನಿಂದ, ರಾಜ್ಯಪಾಲರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

ಹಲವಾರು ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಅವರ ಕೋವಿಡ್‍ ನಿರ್ವಹಣೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಗಮನಿಸಬಹುದು.

ಭಾನುವಾರದ ಭೇಟಿಯ ನಂತರ ಯೋಗಿಯವರೇ ಮುಂದುವರೆಯುತ್ತಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದರೆ, ಸದ್ಯಕ್ಕೆ ಈ ಸಂದರ್ಭದಲ್ಲಿ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಪಕ್ಷದಲ್ಲಿ ಗೊಂದಲ, ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿಯವರ ಬಗ್ಗೆ ಕೇಳಿದಾಗ, ‘ಯೋಗಿ ಆದಿತ್ಯನಾಥ್ ಉತ್ತಮ ಕೆಲಸ  ಮಾಡುತ್ತಿದ್ದಾರೆ ಎಂದಿರುವ ಸಿಂಗ್‍,  “ಪ್ರತಿಯೊಬ್ಬರೂ ಯೋಗಿಯವರ ನಾಯಕತ್ವವನ್ನು ನಂಬುತ್ತಾರೆ, ಅವರು ಇತ್ತೀಚೆಗೆ ಕೊರೋನಾ ನಿರ್ವಹಣೆಯನ್ನು ಚೆನ್ನಾಗಿ ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

2022ರ ಚುನಾವಣೆಯ ತಯಾರಿ?

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಕಳೆದ ವಾರ ಎನ್‍ಡಿಟಿವಿ ವರದಿ ಮಾಡಿತ್ತು.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024 ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಸದ್ಯ ಯೋಗಿ ಮತ್ತು ನರೇಂದ್ರ ಮೋದಿಯವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಆ ಮೂಲಕ ಯೋಗಿಯವರ ಆಡಳಿತವನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಬಹುದು ಎನ್ನಲಾಗಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...