Homeಮುಖಪುಟಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

- Advertisement -
- Advertisement -

ಬಿಜೆಪಿಯ ಹಿರಿಯ ಮುಖಂಡ, ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭಾನುವಾರ ಲಖನೌದಲ್ಲಿ ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ಈಗ ಉತ್ತರಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಮೋದಿಯವರು ಟ್ವೀಟ್‍ ಮಾಡಿ ಶುಭಾಶಯ ಕೋರಲಿಲ್ಲ ಮತ್ತು ಉತ್ತರಪ್ರದೇಶದ ಸರ್ಕಾರಿ ಜಾಹಿರಾತುಗಳಲ್ಲಿ  ಕಳೆದ ವಾರದಿಂದ ಮೋದಿಯವರ ಭಾವಚಿತ್ರ ಮಾಯವಾಗಿದೆ. ಈ ಎರಡೂ ಅಂಶಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ನೋಡಿದಾಗ, ಕೇಂದ್ರ ನಾಯಕರು ಮತ್ತು ಯೋಗಿ ಆದಿತ್ಯನಾಥ್‍ ಅವರ ನಡುವೆ ಅಧಿಕಾರದ ಮುಸುಕಿನ ಗುದ್ದಾಟ ಆರಂಭವಾದಂತಿದೆ.

ಕಳೆದ ವಾರವಷ್ಟೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‍ ಸಂತೋಷ್‍ ಮತ್ತು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‍ ಸಿಂಗ್‍ ಲಕ್ನೋಗೆ ವಿಶೇಷ ಭೇಟಿ ನೀಡಿದ್ದರು. ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಮಂತ್ರಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದರು. ಅವರಿಬ್ಬರೂ ದೆಹಲಿ ತಲುಪಿ ಹಿರಿಯ ನಾಯಕರೊಂದಿಗೆ ಮಾತನಾಡಿದ ನಂತರ, ಭಾನುವಾರ ದಿಢೀರನೆ ರಾಧಾ ಮೋಹನ್‍ ಸಿಂಗ್‍ ಮರಳಿ ಲಕ್ನೋಗೆ ಬಂದು ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳು ಕೇಳಿದ ಯಾವ ಪ್ರಶ್ನೆಗಳಿಗೂ ರಾಧಾ ಮೋಹನ್‍ ಸಿಂಗ್‍ ಸ್ಪಷ್ಟವಾಗಿ ಉತ್ತರಿಸಿಲ್ಲ. ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳಿದಾಗ ಸಿಂಗ್ ಅವರು, ಸಚಿವ ಸಂಪುಟವನ್ನು ವಿಸ್ತರಿಸುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ರಾಜ್ಯಪಾಲರ ಜೊತೆಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಹೇಳಿದ ಸಿಂಗ್, ನಾನು ರಾಜ್ಯದ ಉಸ್ತುವಾರಿ ವಹಿಸಿಕೊಂಡಾಗಿನಿಂದ, ರಾಜ್ಯಪಾಲರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

ಹಲವಾರು ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಅವರ ಕೋವಿಡ್‍ ನಿರ್ವಹಣೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಗಮನಿಸಬಹುದು.

ಭಾನುವಾರದ ಭೇಟಿಯ ನಂತರ ಯೋಗಿಯವರೇ ಮುಂದುವರೆಯುತ್ತಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದರೆ, ಸದ್ಯಕ್ಕೆ ಈ ಸಂದರ್ಭದಲ್ಲಿ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಪಕ್ಷದಲ್ಲಿ ಗೊಂದಲ, ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿಯವರ ಬಗ್ಗೆ ಕೇಳಿದಾಗ, ‘ಯೋಗಿ ಆದಿತ್ಯನಾಥ್ ಉತ್ತಮ ಕೆಲಸ  ಮಾಡುತ್ತಿದ್ದಾರೆ ಎಂದಿರುವ ಸಿಂಗ್‍,  “ಪ್ರತಿಯೊಬ್ಬರೂ ಯೋಗಿಯವರ ನಾಯಕತ್ವವನ್ನು ನಂಬುತ್ತಾರೆ, ಅವರು ಇತ್ತೀಚೆಗೆ ಕೊರೋನಾ ನಿರ್ವಹಣೆಯನ್ನು ಚೆನ್ನಾಗಿ ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

2022ರ ಚುನಾವಣೆಯ ತಯಾರಿ?

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಕಳೆದ ವಾರ ಎನ್‍ಡಿಟಿವಿ ವರದಿ ಮಾಡಿತ್ತು.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024 ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಸದ್ಯ ಯೋಗಿ ಮತ್ತು ನರೇಂದ್ರ ಮೋದಿಯವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಆ ಮೂಲಕ ಯೋಗಿಯವರ ಆಡಳಿತವನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಬಹುದು ಎನ್ನಲಾಗಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...