Homeಮುಖಪುಟಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದ ಲಕ್ಷಣ ಎಂದ ಕೋರ್ಟ್‌ - ಆದಿತ್ಯನಾಥ್ ಸರ್ಕಾರಕ್ಕೆ ಮುಖಭಂಗ

ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದ ಲಕ್ಷಣ ಎಂದ ಕೋರ್ಟ್‌ – ಆದಿತ್ಯನಾಥ್ ಸರ್ಕಾರಕ್ಕೆ ಮುಖಭಂಗ

"ಆದಿತ್ಯನಾಥ್ ಉತ್ತರ ಪ್ರದೇಶವನ್ನು ‘ಜಂಗಲ್ ರಾಜ್’ ಆಗಿ ಪರಿವರ್ತಿಸಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿಲ್ಲ" ಎಂದು ಯಶವಂತ ಸಿಂಗ್ ಟ್ವೀಟ್‌ ಮಾಡಿದ್ದರು

- Advertisement -
- Advertisement -

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಟ್ವೀಟ್‌ ಮಾಡಿ ಟೀಕಿಸಿದ್ದಕ್ಕಾಗಿ, ಯಶವಂತ ಸಿಂಗ್ ಎಂಬವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿರುವ ಅಲಹಾಬಾದ್ ಹೈಕೋರ್ಟ್‌, “ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ” ಎಂದು ಹೇಳಿದೆ.

“ಆದಿತ್ಯನಾಥ್ ಉತ್ತರ ಪ್ರದೇಶವನ್ನು ‘ಜಂಗಲ್ ರಾಜ್’ ಆಗಿ ಪರಿವರ್ತಿಸಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅಸ್ತಿತ್ವದಲ್ಲಿಲ್ಲ” ಎಂದು ಯಶವಂತ ಸಿಂಗ್ ಟ್ವೀಟ್‌ ಮಾಡಿದ್ದರು. ಈ ಕಾರಣಕ್ಕಾಗಿ ರಾಜ್ಯ ಸರ್ಕಾರವು ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66-ಡಿ ಮತ್ತು ಐಪಿಸಿ ಸೆಕ್ಷನ್ 500ರ ಅಡಿ ಪ್ರಕರಣವನ್ನು ದಾಖಲಿಸಿತ್ತು. ಈಗ ಕೋರ್ಟ್ ಈ ಪ್ರಕರಣವನ್ನು ಕೈಬಿಟ್ಟಿರುವುದರಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

ತಮ್ಮ ವಿರುದ್ಧದ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ಯಶವಂತ ಸಿಂಗ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ ನಕ್ವಿ ಮತ್ತು ವಿವೇಕ ಅಗರವಾಲ್ ಅವರ ಪೀಠವು, “ರಾಜ್ಯದಲ್ಲಿಯ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯ ಬಗ್ಗೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವುದು ನಮ್ಮಂತಹ ಸಾಂವಿಧಾನಿಕ ಉದಾರವಾದಿ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದ್ದು, ಈ ಹಕ್ಕು ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ರಕ್ಷಣೆಯನ್ನು ಹೊಂದಿದೆ” ಎಂದು ಹೇಳಿತು.

ಜೊತೆಗೆ, “ರಾಜ್ಯ ಸರಕಾರದ ಕಾರ್ಯ ವೈಖರಿಯ ವಿರುದ್ಧ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವುದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಸೆಕ್ಷನ್‌‌ಗಳ ಅಡಿಯಲ್ಲಿ ಅಪರಾಧವಾಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

ಉತ್ತರ ಪ್ರದೇಶ ಸರ್ಕಾರ ಇಂತಹ ಅಸಾಂವಿಧಾನಿಕ ಕೆಲಸಕ್ಕೆ ಕೈ ಹಾಕಿರುವುದು ಇದೆ ಮೊದಲೇನಲ್ಲ. ಈ ವರ್ಷದ ಮಾರ್ಚ್‌ನಲ್ಲಿ ಆದಿತ್ಯನಾಥ್‌ರನ್ನು “ಭಯೋತ್ಪಾದಕ” ಎಂದು ಬಣ್ಣಿಸಿದ್ದ ವೀಡಿಯೊವೊಂದನ್ನು ರೀಟ್ವೀಟ್‌ ಮಾಡಿದ್ದಕ್ಕಾಗಿ ಖಾನ್‌ಪುರದ ವಕೀಲ ಅಬ್ದುಲ್ ಹನ್ನಾನ್ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಲಾಗಿತ್ತು.

ಎಪ್ರಿಲ್‌ನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತ ಪ್ರಶಾಂತ ಖನೋಜಿಯಾರನ್ನು ಲಕ್ನೋ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...