Homeಕರ್ನಾಟಕ'ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ..'; ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು

‘ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ..’; ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು

- Advertisement -
- Advertisement -

ಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರ ನೀಡಿರುವ ಸುಪ್ರೀಂ ಕೋರ್ಟ್‌ ತೀರ್ಪು ವಿರೋಧಿಸಿರುವ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ನಿಲುವನ್ನು ರಾಜ್ಯ ನಾಯಕರು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಸಂಯೋಜಕ ಎಂ. ಗೋಪಿನಾಥ್ ಸೇರಿದಂತೆ 5 ಮಂದಿ ಪದಾಧಿಕಾರಿಗಳು ಬಿಎಸ್‌ಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ನೀಡಿದರು.

ಈ ಕುರಿತು ಮಾತನಾಡಿದ ಮಾರಸಂದ್ರ ಮುನಿಯಪ್ಪ, “ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಡಾ. ಬಿ.ಆರ್‌. ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಿದ್ದಾಂತದಿಂದ ದೂರ ಸರಿದಿದೆ; ಪಕ್ಷವು ತನ್ನ ಪ್ರಜಾಸತ್ತಾತ್ಮಕ ಸ್ವರೂಪವನ್ನು ಕಳೆದುಕೊಂಡಿರುವುದರಿಂದಲೇ ರಾಜ್ಯ ಸಮಿತಿಯ ಪದಾಧಿಕಾರಿಗಳು ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇವೆ” ಮಾಯಾವತಿ ಅವರ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.

“ಎಸ್‍ಸಿ-ಎಸ್‍ಟಿ ಮೀಸಲಾತಿ ವಿಚಾರದಲ್ಲಿ ಮಧ್ಯಪ್ರವೇಶಿಸಲು ರಾಜ್ಯ ಸರಕಾರಕ್ಕೆ ಅಧಿಕಾರ ಇಲ್ಲ. ಮೀಸಲಾತಿ ಕೆನೆಪದರ ವಿಷಯವನ್ನು ವಿರೋಧಿಸಿರುವ ಮಾಯಾವತಿ ನಿಲುವನ್ನು ನಾವು ಅನುಮೋದಿಸುತ್ತೇವೆ. ಆದರೆ, ಒಳಮೀಸಲಾತಿ ವಿರೋಧಿಸುವ ಅವರ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದೇವೆ. 30 ವರ್ಷಗಳಿಂದ ಒಳಮೀಸಲಾತಿ ಆಂದೋಲನವನ್ನು ನಾವು ಮತ್ತು ನಮ್ಮ ಕಾರ್ಯಕರ್ತರು ಬೆಂಬಲಿಸುತ್ತಾ ಬಂದಿದ್ದೇವೆ” ಎಂದು ಹೇಳಿದರು.

“ರಾಜ್ಯದ ಮೀಸಲಾತಿ ಸ್ಥಿತಿಯ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಅವರೊಂದಿಗೆ ಮಾತನಾಡಲು ರಾಜ್ಯ ಉಸ್ತುವಾರಿ ಡಾ.ಅಶೋಕ್ ಸಿದ್ಧಾರ್ಥ್ ಮೂಲಕ ಮನವಿಯನ್ನು ಸಲ್ಲಿಸಿದೆವು. ಅಲ್ಲದೆ ಆ.9ರಂದು ಅವರೊಂದಿಗೆ ಫೋನ್ ಮೂಲಕ ನಮ್ಮ ಅಹವಾಲನ್ನು ಹೇಳಿಕೊಂಡಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ನೀಡಿ ಒಳಮೀಸಲಾತಿ ಒದಗಿಸುವಂತೆ ನ್ಯಾ.ಸದಾಶಿವ ಆಯೋಗದ ಶಿಫಾರಸ್ಸುಗಳು ಸಾಮಾಜಿಕ ನ್ಯಾಯ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳ ಪ್ರಕಾರವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೆವು” ಎಂದು ಅವರು ವಿವರಿಸಿದರು.

“ಮಾಯಾವತಿ ಅವರ ಆಹ್ವಾನದ ಮೇರೆಗೆ ರಾಜ್ಯ ಪದಾಧಿಕಾರಿಗಳ ನಿಯೋಗವು ಆ.27ರಂದು ತೆರಳಿತ್ತು. ಆದರೆ, ಅವರನ್ನು ನೇರವಾಗಿ ಭೇಟಿಯಾಗಿ ಮನವಿಯನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಿಲ್ಲ. ನಮ್ಮಂತೆಯೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಾಯಕರೂ ತಮ್ಮ ಮನವಿಯನ್ನು ಸಲ್ಲಿಸಲಾಗದೆ ಅವಮಾನ ಅನುಭವಿಸಿದ್ದಾರೆ” ಎಂದು ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜೀನಾಮೆಯ ನಂತರದಲ್ಲಿ ನಾವು ಸುಮ್ಮನೆ ಕೂರದೆ, ಫುಲೆ, ಪೆರಿಯಾರ್, ನಾರಾಯಣಗುರು, ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಆದರ್ಶಗಳ ಮೇಲೆ ಬಹುಜನ ಚಳುವಳಿ ಮುಂದುವರಿಸಲು ಸಂಕಲ್ಪ ಮಾಡಿದ್ದೇವೆ” ಎಂದು ಮಾರಸಂದ್ರ ಮುನಿಯಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ನೀಡಿದ ರಾಜ್ಯ ಸಂಯೋಜಕ ಎಂ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮುನಿಯಪ್ಪ ಮತ್ತು ಕೆ.ಬಿ.ವಾಸು ಉಪಸ್ಥಿತರಿದ್ದರು.

ಇದನ್ನೂ ಓದಿ; ‘ಸೆಂಥಿಲ್ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು 7 ತಿಂಗಳು ತೆಗೆದುಕೊಂಡಿದ್ದು ಏಕೆ..’; ತಮಿಳುನಾಡು ರಾಜ್ಯಪಾಲರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...