Homeಮುಖಪುಟಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

- Advertisement -
- Advertisement -

ಕಳೆದ ವರ್ಷದ ಆಗಸ್ಟ್‌ನಲ್ಲಿ ಅಪ್ಪಳಿಸಿದ ಪ್ರವಾಹದಿಂದಾಗಿ ಇಡೀ ಉತ್ತರ ಕರ್ನಾಟಕ ತತ್ತರವಾಗಿತ್ತು. ರಾಜ್ಯದ 20ಕ್ಕೂ ಹೆಚ್ಚು(ಮುಖ್ಯವಾಗಿ ಉತ್ತರ ಕರ್ನಾಟಕದ) ಜಿಲ್ಲೆಗಳು ಹಾನಿಗೊಳಗಾಗಿದ್ದವು. 61 ಜನರು ಪ್ರಾಣ ಕಳೆದುಕೊಂಡರೆ ಹಲವು ಜನರು ನಾಪತ್ತೆಯಾಗಿದ್ದರು. ಕೋಟಿಗೂ ಹೆಚ್ಚು ಜನ ಪ್ರವಾಹ ಸಂತ್ರಸ್ತರಾಗಿದ್ದರು.ಅದಕ್ಕೂ ಹಿಂದಿನ ವರ್ಷ ಕೊಡಗು ಸಂಪೂರ್ಣ ಜಲಾವೃತವಾಗಿತ್ತು. ಹಲವಾರು ಸಾವುನೋವುಗಳು ಆಸ್ತಿನಷ್ಟ ಉಂಟಾಗಿತ್ತು.

ಕಳೆದ ವರ್ಷದ ಪ್ರವಾಹ ನಷ್ಟ 50 ಸಾವಿರ ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಆದರೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 35,000 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿತು. ಆರಂಭಿಕವಾಗಿ ತಾತ್ಕಾಲಿಕ 1200 ಕೋಟಿ ರೂ ಮಾತ್ರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿತು. ಅದು ಪ್ರವಾಹ ಆರಂಭವಾಗಿ ತಿಂಗಳು ಕಳೆದ ನಂತರವಷ್ಟೇ..

ಇನ್ನು ಈ ವರ್ಷ ಮತ್ತೆ 1869 ಕೋಟಿ ರೂ ಪ್ರವಾಹ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಇಲಾಖೆ ಘೋಷಿಸಿತು. ಆದರೆ ಬಿಡುಗಡೆಯಾಗಿದ್ದು ಕೇವಲ 669 ಕೋಟಿ ರೂ ಮಾತ್ರ. ಇನ್ನು 1200 ಕೋಟಿ ಬಾಕಿ ಇದೆ. ಇಂತಹ ಸಂಕಷ್ಟದ ಸಮಯದಲ್ಲಿ ಮತ್ತೆ ಈ ವರ್ಷವೂ ಕರ್ನಾಟಕದಲ್ಲಿ ನೆರೆ ಕಾಣಿಸಿಕೊಂಡಿದೆ. ಮೊನ್ನೆ ಪ್ರಧಾನಿಯೊಂದಿಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ 4000 ಕೋಟಿ ಪರಿಹಾರಕ್ಕೆ ಮೊರೆ ಇಟ್ಟಿರುವುದಾಗಿ ರಾಜ್ಯ ಸರ್ಕಾರ ಹೇಳಿಕೊಂಡಿದೆ. ಯಥಾಪ್ರಕಾರ ಕೇಂದ್ರ ಸರ್ಕಾರವಿನ್ನೂ ಹಣ ಬಿಡುಗಡೆ ಮಾಡಿಲ್ಲ.

ಇನ್ನು ಕೊರೊನಾ ಪ್ರಕರಣಗಳಲ್ಲಿ ಕರ್ನಾಟಕ ದೇಶದಲ್ಲಿಯೇ 4ನೇ ಸ್ಥಾನದಲ್ಲಿದ್ದು ಹತ್ತಿರತ್ತಿರ 2 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಈ ವರದಿ ಬರೆಯುವ ಹೊತ್ತಿಗೆ 3510 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಬಾರಿ ಹೇರಿದ ಲಾಕ್‌ಡೌನ್‌ನಿಂದಾಗಿ ಕರ್ನಾಟಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಕೇಂದ್ರದಿಂದ ಹೆಚ್ಚಿನ ಹಣ ಬಿಡುಗಡೆಯಾಗಿಲ್ಲ. ಕರ್ನಾಟಕದ ಪಾಲಿನ ಜಿಎಸ್‌ಟಿ ಹಣ ಸಹ ಬಂದಿಲ್ಲ.

ಇಷ್ಟೆಲ್ಲ ಏಕೆ ಹೇಳಬೇಕಿದೆಯೆಂದರೆ ಈ ವಿಚಾರದ ಕುರಿತು ಗಟ್ಟಿ ದನಿಯೆತ್ತಬೇಕಾಗಿದ್ದ ಕರ್ನಾಟಕದ ಪ್ರಬಲ ಸಚಿವರು, ಸಂಸದರು ಈ ವಿಚಾರವಾಗಿ ಮೌನವಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ದಿಟ್ಟಿಸಿ ಕೇಳುವ ಧೈರ್ಯ ಇವರ್ಯಾರಿಗೂ ಇಲ್ಲ. ಆದರೆ ಸಣ್ಣಪುಟ್ಟ ಗಲಭೆಗಳಾದರೆ, ಯಾರಾದರೂ ಅನುಮಾನಾಸ್ಪದವಾಗಿ ಸಾವಿಗೀಡಾದರೆ ಇವರೆಲ್ಲ ಓಡಿ ಬರುತ್ತಾರೆ. ಸ್ಥಳಕ್ಕೆ ಧಾವಿಸುತ್ತಾರೆ. ಶಾಂತಿ ಕಾಪಾಡಲು ಮನವಿ ಮಾಡುವ ಬದಲು ಜೋರಾಗಿ ಕಿರುಚುತ್ತಾರೆ. ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬೊಬ್ಬೆಯಿಡುತ್ತಾರೆ. ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುತ್ತಾರೆ. ಆ ಬೆಂಕಿಯಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ.. ಯಾರಿವರು ಬನ್ನಿ ನೋಡೋಣ.

ಶೋಭಾ ಕರಂದ್ಲಾಜೆ

ರಾಜ್ಯ ಸರ್ಕಾರದಲ್ಲಿ ಸಚಿವರಾಗಿ, ಎರಡನೇ ಬಾರಿಗೆ ಸಂಸದರಾಗಿರುವ ಇವರು ಸಂಸತ್ತಿನಲ್ಲಿ ತಮಗೆ ಸಿಕ್ಕ ಮಾತನಾಡುವ ಅವಕಾಶವನ್ನು ರಾಜ್ಯದ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಏಕೀ ಮಿನಿಟ್ ಸರ್ ಎಂಬ ಅರ್ಧಂಬರ್ಧ ಹಿಂದಿಯಲ್ಲಿ ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್‌ಗೆ ಭಯೋತ್ಪಾದಕರೊಂದಿಗೆ ಸಂಬಂಧವಿದೆ ಎಂಬ ಕಟ್ಟುಕಥೆಗಳನ್ನು ಹೇಳಿ ಅಪಹಾಸ್ಯಕ್ಕೊಳಗಾಗಿದ್ದರು. ಅವರೇ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ.

ಅವರು 2017ರಲ್ಲಿ ರಾಜ್ಯದಲ್ಲಿ 4 ವರ್ಷದಲ್ಲಿ ಕೋಮುಗಲಭೆಗಳಲ್ಲಿ ಮೃತರಾದ ಹಿಂದೂಗಳ ಪಟ್ಟಿ ತಯಾರಿಸಿದ್ದ ಅವರು ಅದರಲ್ಲಿ ಅಶೋಕ್ ಪೂಜಾರಿ ಎಂಬ ಬದುಕಿದ್ದವರ ಹೆಸರನ್ನು ಸೇರಿಸಿ ವಿವಾದಕ್ಕೊಳಗಾಗಿದ್ದರು. ಅದೇ ವರ್ಷ ಡಿಸೆಂಬರ್‌ನಲ್ಲಿ ಪರೇಶ್ ಮೇಸ್ತ ಎಂಬ ಯುವಕನ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡಿದ ಇವರು “ಅಜಾದ್ ಅಣ್ಣಿಗೇರಿ ಈ ಪ್ರಕರಣದಲ್ಲಿ ಪಾಲುದಾರರಾಗಿದ್ದು ಅವರಿಗೆ ಐಸಿಸ್‌ನೊಂದಿಗೆ ನಂಟಿದೆ” ಎಂದು ಆರೋಪಿಸಿದ್ದರು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಂತರ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಿತ್ತು. ಪರೇಶ್ ಮೇಸ್ತ ಪಾಲಕರಿಗೆ ನ್ಯಾಯ ಸಿಗಲಿಲ್ಲ. ಶೋಭಾ ಕರಂದ್ಲಾಜೆ ಮಾತ್ರ ಪ್ರಕರಣದತ್ತ ಮತ್ತೆ ಸುಳಿಯಲಿಲ್ಲ.

ಸಿಎಎ 2019 ಅನ್ನು ಬೆಂಬಲಿಸಿದ್ದಕ್ಕಾಗಿ, ಕೇರಳದ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‌ನ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಲಾಗಿದೆ. ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ, ಹಿಂದೂಗಳ ವಿರುದ್ಧ ಅಲ್ಲಿನ ಎಡಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಆ ಸುದ್ದಿ ಸುಳ್ಳೆಂದು ಅವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

ಈ ರೀತಿಯಾಗಿ ಎಲ್ಲೇ ಸಾವಾದರೂ ಅದನ್ನು ರಾಜಕೀಯಗೊಳಿಸುವುದರಲ್ಲಿ ಇವರು ಎತ್ತಿದ ಕೈ. ಈಗ ಬೆಂಗಳೂರಿನ ಫೇಸ್‌ಬುಕ್‌ ಪೋಸ್ಟ್‌ ವಿಚಾರಕ್ಕೆ ಗಲಭೆಯಾದ ಮಾರನೇಯ ದಿನವೇ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿಂತು ‘ಹಿಂದೂಗಳನ್ನು ಟಾರ್ಗೆಟ್‌ ಮಾಡಿ ದಾಳಿ ಮಾಡಲಾಗಿದೆ. ಪಿಎಫ್‌ಐ, ಎಸ್‌ಡಿಪಿಐನವರು ಇದಕ್ಕೆ ಕಾರಣ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು’ ಆಗ್ರಹಿಸಿದ್ದಾರೆ. ವಿಶೇಷವೆಂದರೆ ಗಲಭೆಗೆ ಕಾರಣವಾದ ಪ್ರವಾದಿ ನಿಂದನೆ ಪೋಸ್ಟ್, ಅದನ್ನು ಮಾಡಿದವರನ್ನು ಅವರು ಅಪ್ಪಿ ತಪ್ಪಿಯೂ ವಿರೋಧಿಸಿಲ್ಲ!

ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಡಿಕೆಯಲ್ಲಿ ಕ್ಯಾನ್ಸರ್‌ಕಾರಕ ವಿಷಕಾರಿ ಅಂಶವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವು ಅಫಿಡವಿಟ್‌ ಅನ್ನು ಹಿಂಪಡೆಯಬೇಕು ಮತ್ತು ಅಡಿಕೆಗೆ ಸ್ಥಿರ ಬೆಲೆ ಒದಗಿಸಬೇಕೆಂದು ಅಡಿಕೆ ಬೆಳೆಗಾರರು ಹಲವು ವರ್ಷಗಳಿಂದ ಕೇಳುತ್ತಿದ್ದಾರೆ. ಶೋಭಾ ಕರಂದ್ಲಾಚೆಯವರು ಈ ಕುರಿತು ಕೇಂದ್ರ ಆರೋಗ್ಯ ಮಂತ್ರಿಗಳಿಗೆ ಒಂದು ಮನವಿ ಕೊಟ್ಟಿದ್ದು ಬಿಟ್ಟರೆ ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಈ ಸದ್ಯ ಭಾರೀ ಮಳೆಯಿಂದಾಗಿ ತಮ್ಮ ಕ್ಷೇತ್ರದ ಕೊಪ್ಪ, ಶೃಂಗೇರಿ, ಕಳಸ ಭಾಗದ ಗ್ರಾಮಸ್ಥರು ಸಂಕಷ್ಟದಲ್ಲಿದ್ದರು ಅತ್ತ ಗಮನಹರಿಸದ ಅವರು ಸೀದಾ ಬೆಂಗಳೂರಿನ ಕೆ.ಜಿ ಹಳ್ಳಿಗೆ ಭೇಟಿ ನೀಡಿದ್ದಾರೆ. ಹಿಂದೂ ದೇವಾಲಯದ ಮೇಲೆ ಎಸ್‌ಡಿಪಿಐ ಬಾವುಟ ಹಾಕಿದ್ದಾರೆ ಎಂಬುದರ ವಿರುದ್ಧ ಹೋರಾಡುತ್ತಿದ್ದಾರೆ!

ಅನಂತ್ ಕುಮಾರ್ ಹೆಗಡೆ

ಹಿಂದೂ ಹುಡುಗಿ ಮುಟ್ಟಿದವರ ಕೈ ಇರಬಾರದು‘. ಈ ಪ್ರಚೋದನಾಕಾರಿ ಹೇಳಿಕೆ ಮಾಜಿ ಸಚಿವ, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯವರದು. ಬ್ರೀಟಿಷರು ಉಪವಾಸಕ್ಕೆ ಹೆದರಿ ಓಡಿಹೋಗಲಿಲ್ಲ, ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬುದು ಇವರ ಮತ್ತೊಂದು ಅಣಿಮುತ್ತು. ನಾವು ಬಂದಿರುವುದು ಸಂವಿಧಾನ ಬದಲಿಸಲ್ಲಿಕ್ಕೆ ಎಂಬ ದೌಲತ್ತು ಬೇರೆ. ಕೇಂದ್ರ ಕೌಶಲ ಅಭಿವೃದ್ದಿ ಸಚಿವರಾದರೂ ನಯಾ ಪೈಸೆ ಕೆಲಸ ಮಾಡದ ಇವರು ಯುವಜನರಿಗೆ ಉದ್ಯೋಗ ಸಿಗದಿರುವುದಕ್ಕೆ ಕೌಶಲ ಇರದಿರುವುದೇ ಕಾರಣ ಎಂದು ಹೇಳಿ ಟೀಕೆಕ್ಕೊಳಗಾಗಿದ್ದರು.

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಇವರು ರಾಜ್ಯದ ಅಭಿವೃದ್ದಿಯ ಪರವಾಗಿ ಮಾತನಾಡಿದ್ದು ಕಡಿಮೆ. ಇವರ ದ್ವೇಷ ಭಾಷಣ, ಕೋಮು ಪ್ರಚೋದಿತ ಹೇಳಿಕೆಗಳಿಂದಾಗಿ ಟ್ವಿಟ್ಟರ್‌ ಖಾತೆಯನ್ನು ಅಮಾನತ್ತು ಮಾಡಿತ್ತು.

ನಳಿನ್ ಕುಮಾರ್ ಕಟೀಲ್;

ಮಂಗಳೂರಿನ ಸಂಸದರು, ಹಾಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಆದ ನಳಿನ್ ಕುಮಾರ್ ಕಟೀಲ್‌ರವರು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ 1 ಡಾಲರ್ ಮೌಲ್ಯ 15ರೂ ಆಗುತ್ತದೆ ಎಂದಿದ್ದರು. ಆದರೆ ನರೇಂದ್ರ ಮೋದಿಯವರು 2ನೇ ಬಾರಿ ಅಧಿಕಾರಕ್ಕೆ ಬಂದರೂ ಸಹ 1 ಡಾಲರ್ ಮೌಲ್ಯ 74ರೂ ಆಗಿದೆ. ಪಂಪ್‌ವೇಲ್‌ ಮೇಲ್ಸೇತುವೆ ಕಟ್ಟಲು ಹಲವು ಬಾರಿ ಗಡುವುಗಳನ್ನು ವಿಧಿಸಿದ್ದ ಅವರು ಕೊನೆಗೂ ಹತ್ತು ವರ್ಷದ ನಂತರ ಪೂರ್ಣಗೊಳಿಸಿದ್ದರು.

ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುವ ಮೂಲಕ…..ನಮ್ಮ ಹೆಮ್ಮೆ ನಮ್ಮ ಎಂಪಿ ????

Posted by Satya_Meva_Jayate on Tuesday, March 26, 2019

ಆದರೆ ಬಿಜೆಪಿ ಕಾರ್ಯಕರ್ತ ಕಾರ್ತಿಕ್‌ ರಾಜ್ ಎಂಬ ಹುಡುಗನ ಕೊಲೆ ವಿಚಾರವೊಂದರಲ್ಲಿ ಇವರು ಆರೋಪಿಗಳನ್ನು ಹತ್ತು ದಿನದಲ್ಲಿ ಬಂಧಿಸದಿದ್ದರೆ ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೇವೆ ಎಂದು ಪ್ರಚೋದನೆ ನೀಡಿದ್ದರು. ವಿಡಿಯೋ ವೈರಲ್ ಆಗಿತ್ತು. ನಂತರ ತನಿಖೆಯಿಂದ ತಿಳಿದ್ದಿದ್ದೇನೆಂದರೆ ಕೊಲೆ ಆರೋಪಿ ಕಾರ್ತಿಕ್ ರಾಜ್‌ನ ಸ್ವತಃ ಸಹೋದರಿಯಾಗದ್ದಳು.

ಪ್ರತಾಪ್ ಸಿಂಹ:

ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿರು ಪ್ರತಾಪ್‌ ಸಿಂಹರವರು ಪ್ರವಾಹ ಪರಿಹಾರವನ್ನು ಯಾರೂ ತಮ್ಮ ಕಿಸೆಯಿಂದ ಕೊಡಲಾಗುವುದಿಲ್ಲ ಎಂದಿದ್ದರು. ಅಷ್ಟು ಮಾತ್ರವಲ್ಲದೇ ಪ್ರವಾಹ ಪರಿಹಾರ ಕೇಳುವುದೇ ತಪ್ಪು ಎನ್ನುವ ಅಭಿಪ್ರಾಯ ಇರುವ ಪ್ರತಾಪ್ ಸಿಂಹ ಹನುಮಾ ಜಯಂತಿ ಮಾಡಿಯೇ ತೀರುತ್ತೇವೆ ಎಂದು ಕರ್ಫ್ಯೂ ಉಲ್ಲಂಘಿಸಿದ್ದರು.

ಚಿಕ್ಕಮಗೂರಿನ ಬಾಬಬುಡನ್ ಗಿರಿ ವಿಚಾರವಾಗಿ ಅದನ್ನು ದತ್ತಪೀಠ ಮಾಡೆಬೇಕೆನ್ನುತ ಅಧಿಕಾರಕ್ಕೆ ಸಿ.ಟಿ ರವರು ಅಭಿವೃದ್ದಿ ವಿಷಯ ಮಾತನಾಡಿದ್ದು ಕಡಿಮೆ. ಇದಲ್ಲದೇ ಬಿಜೆಪಿಯ ಕೆ.ಎಸ್ ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್, ತೇಜಸ್ವಿ ಸೂರ್ಯ ಸೇರಿದಂತೆ ಇತರರು ಅಭಿವೃದ್ದಿ ಕುರಿತ ಮಾತುಗಳಿಗಿಂತ ಕೋಮು ಪ್ರಚೋದಿತ ಹೇಳಿಕೆ ನೀಡುವುದರಲ್ಲೇ ನಿಸ್ಸೀಮರಾಗಿದ್ದಾರೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...