Homeಮುಖಪುಟಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

- Advertisement -
- Advertisement -

ಕಳೆದ ವರ್ಷದ ಆಗಸ್ಟ್‌ನಲ್ಲಿ ಅಪ್ಪಳಿಸಿದ ಪ್ರವಾಹದಿಂದಾಗಿ ಇಡೀ ಉತ್ತರ ಕರ್ನಾಟಕ ತತ್ತರವಾಗಿತ್ತು. ರಾಜ್ಯದ 20ಕ್ಕೂ ಹೆಚ್ಚು(ಮುಖ್ಯವಾಗಿ ಉತ್ತರ ಕರ್ನಾಟಕದ) ಜಿಲ್ಲೆಗಳು ಹಾನಿಗೊಳಗಾಗಿದ್ದವು. 61 ಜನರು ಪ್ರಾಣ ಕಳೆದುಕೊಂಡರೆ ಹಲವು ಜನರು ನಾಪತ್ತೆಯಾಗಿದ್ದರು. ಕೋಟಿಗೂ ಹೆಚ್ಚು ಜನ ಪ್ರವಾಹ ಸಂತ್ರಸ್ತರಾಗಿದ್ದರು.ಅದಕ್ಕೂ ಹಿಂದಿನ ವರ್ಷ ಕೊಡಗು ಸಂಪೂರ್ಣ ಜಲಾವೃತವಾಗಿತ್ತು. ಹಲವಾರು ಸಾವುನೋವುಗಳು ಆಸ್ತಿನಷ್ಟ ಉಂಟಾಗಿತ್ತು.

ಕಳೆದ ವರ್ಷದ ಪ್ರವಾಹ ನಷ್ಟ 50 ಸಾವಿರ ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಆದರೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 35,000 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿತು. ಆರಂಭಿಕವಾಗಿ ತಾತ್ಕಾಲಿಕ 1200 ಕೋಟಿ ರೂ ಮಾತ್ರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿತು. ಅದು ಪ್ರವಾಹ ಆರಂಭವಾಗಿ ತಿಂಗಳು ಕಳೆದ ನಂತರವಷ್ಟೇ..

ಇನ್ನು ಈ ವರ್ಷ ಮತ್ತೆ 1869 ಕೋಟಿ ರೂ ಪ್ರವಾಹ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಇಲಾಖೆ ಘೋಷಿಸಿತು. ಆದರೆ ಬಿಡುಗಡೆಯಾಗಿದ್ದು ಕೇವಲ 669 ಕೋಟಿ ರೂ ಮಾತ್ರ. ಇನ್ನು 1200 ಕೋಟಿ ಬಾಕಿ ಇದೆ. ಇಂತಹ ಸಂಕಷ್ಟದ ಸಮಯದಲ್ಲಿ ಮತ್ತೆ ಈ ವರ್ಷವೂ ಕರ್ನಾಟಕದಲ್ಲಿ ನೆರೆ ಕಾಣಿಸಿಕೊಂಡಿದೆ. ಮೊನ್ನೆ ಪ್ರಧಾನಿಯೊಂದಿಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ 4000 ಕೋಟಿ ಪರಿಹಾರಕ್ಕೆ ಮೊರೆ ಇಟ್ಟಿರುವುದಾಗಿ ರಾಜ್ಯ ಸರ್ಕಾರ ಹೇಳಿಕೊಂಡಿದೆ. ಯಥಾಪ್ರಕಾರ ಕೇಂದ್ರ ಸರ್ಕಾರವಿನ್ನೂ ಹಣ ಬಿಡುಗಡೆ ಮಾಡಿಲ್ಲ.

ಇನ್ನು ಕೊರೊನಾ ಪ್ರಕರಣಗಳಲ್ಲಿ ಕರ್ನಾಟಕ ದೇಶದಲ್ಲಿಯೇ 4ನೇ ಸ್ಥಾನದಲ್ಲಿದ್ದು ಹತ್ತಿರತ್ತಿರ 2 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಈ ವರದಿ ಬರೆಯುವ ಹೊತ್ತಿಗೆ 3510 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಬಾರಿ ಹೇರಿದ ಲಾಕ್‌ಡೌನ್‌ನಿಂದಾಗಿ ಕರ್ನಾಟಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಕೇಂದ್ರದಿಂದ ಹೆಚ್ಚಿನ ಹಣ ಬಿಡುಗಡೆಯಾಗಿಲ್ಲ. ಕರ್ನಾಟಕದ ಪಾಲಿನ ಜಿಎಸ್‌ಟಿ ಹಣ ಸಹ ಬಂದಿಲ್ಲ.

ಇಷ್ಟೆಲ್ಲ ಏಕೆ ಹೇಳಬೇಕಿದೆಯೆಂದರೆ ಈ ವಿಚಾರದ ಕುರಿತು ಗಟ್ಟಿ ದನಿಯೆತ್ತಬೇಕಾಗಿದ್ದ ಕರ್ನಾಟಕದ ಪ್ರಬಲ ಸಚಿವರು, ಸಂಸದರು ಈ ವಿಚಾರವಾಗಿ ಮೌನವಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ದಿಟ್ಟಿಸಿ ಕೇಳುವ ಧೈರ್ಯ ಇವರ್ಯಾರಿಗೂ ಇಲ್ಲ. ಆದರೆ ಸಣ್ಣಪುಟ್ಟ ಗಲಭೆಗಳಾದರೆ, ಯಾರಾದರೂ ಅನುಮಾನಾಸ್ಪದವಾಗಿ ಸಾವಿಗೀಡಾದರೆ ಇವರೆಲ್ಲ ಓಡಿ ಬರುತ್ತಾರೆ. ಸ್ಥಳಕ್ಕೆ ಧಾವಿಸುತ್ತಾರೆ. ಶಾಂತಿ ಕಾಪಾಡಲು ಮನವಿ ಮಾಡುವ ಬದಲು ಜೋರಾಗಿ ಕಿರುಚುತ್ತಾರೆ. ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬೊಬ್ಬೆಯಿಡುತ್ತಾರೆ. ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುತ್ತಾರೆ. ಆ ಬೆಂಕಿಯಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ.. ಯಾರಿವರು ಬನ್ನಿ ನೋಡೋಣ.

ಶೋಭಾ ಕರಂದ್ಲಾಜೆ

ರಾಜ್ಯ ಸರ್ಕಾರದಲ್ಲಿ ಸಚಿವರಾಗಿ, ಎರಡನೇ ಬಾರಿಗೆ ಸಂಸದರಾಗಿರುವ ಇವರು ಸಂಸತ್ತಿನಲ್ಲಿ ತಮಗೆ ಸಿಕ್ಕ ಮಾತನಾಡುವ ಅವಕಾಶವನ್ನು ರಾಜ್ಯದ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಏಕೀ ಮಿನಿಟ್ ಸರ್ ಎಂಬ ಅರ್ಧಂಬರ್ಧ ಹಿಂದಿಯಲ್ಲಿ ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್‌ಗೆ ಭಯೋತ್ಪಾದಕರೊಂದಿಗೆ ಸಂಬಂಧವಿದೆ ಎಂಬ ಕಟ್ಟುಕಥೆಗಳನ್ನು ಹೇಳಿ ಅಪಹಾಸ್ಯಕ್ಕೊಳಗಾಗಿದ್ದರು. ಅವರೇ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ.

ಅವರು 2017ರಲ್ಲಿ ರಾಜ್ಯದಲ್ಲಿ 4 ವರ್ಷದಲ್ಲಿ ಕೋಮುಗಲಭೆಗಳಲ್ಲಿ ಮೃತರಾದ ಹಿಂದೂಗಳ ಪಟ್ಟಿ ತಯಾರಿಸಿದ್ದ ಅವರು ಅದರಲ್ಲಿ ಅಶೋಕ್ ಪೂಜಾರಿ ಎಂಬ ಬದುಕಿದ್ದವರ ಹೆಸರನ್ನು ಸೇರಿಸಿ ವಿವಾದಕ್ಕೊಳಗಾಗಿದ್ದರು. ಅದೇ ವರ್ಷ ಡಿಸೆಂಬರ್‌ನಲ್ಲಿ ಪರೇಶ್ ಮೇಸ್ತ ಎಂಬ ಯುವಕನ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡಿದ ಇವರು “ಅಜಾದ್ ಅಣ್ಣಿಗೇರಿ ಈ ಪ್ರಕರಣದಲ್ಲಿ ಪಾಲುದಾರರಾಗಿದ್ದು ಅವರಿಗೆ ಐಸಿಸ್‌ನೊಂದಿಗೆ ನಂಟಿದೆ” ಎಂದು ಆರೋಪಿಸಿದ್ದರು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಂತರ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಿತ್ತು. ಪರೇಶ್ ಮೇಸ್ತ ಪಾಲಕರಿಗೆ ನ್ಯಾಯ ಸಿಗಲಿಲ್ಲ. ಶೋಭಾ ಕರಂದ್ಲಾಜೆ ಮಾತ್ರ ಪ್ರಕರಣದತ್ತ ಮತ್ತೆ ಸುಳಿಯಲಿಲ್ಲ.

ಸಿಎಎ 2019 ಅನ್ನು ಬೆಂಬಲಿಸಿದ್ದಕ್ಕಾಗಿ, ಕೇರಳದ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‌ನ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಲಾಗಿದೆ. ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ, ಹಿಂದೂಗಳ ವಿರುದ್ಧ ಅಲ್ಲಿನ ಎಡಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಆ ಸುದ್ದಿ ಸುಳ್ಳೆಂದು ಅವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

ಈ ರೀತಿಯಾಗಿ ಎಲ್ಲೇ ಸಾವಾದರೂ ಅದನ್ನು ರಾಜಕೀಯಗೊಳಿಸುವುದರಲ್ಲಿ ಇವರು ಎತ್ತಿದ ಕೈ. ಈಗ ಬೆಂಗಳೂರಿನ ಫೇಸ್‌ಬುಕ್‌ ಪೋಸ್ಟ್‌ ವಿಚಾರಕ್ಕೆ ಗಲಭೆಯಾದ ಮಾರನೇಯ ದಿನವೇ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿಂತು ‘ಹಿಂದೂಗಳನ್ನು ಟಾರ್ಗೆಟ್‌ ಮಾಡಿ ದಾಳಿ ಮಾಡಲಾಗಿದೆ. ಪಿಎಫ್‌ಐ, ಎಸ್‌ಡಿಪಿಐನವರು ಇದಕ್ಕೆ ಕಾರಣ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು’ ಆಗ್ರಹಿಸಿದ್ದಾರೆ. ವಿಶೇಷವೆಂದರೆ ಗಲಭೆಗೆ ಕಾರಣವಾದ ಪ್ರವಾದಿ ನಿಂದನೆ ಪೋಸ್ಟ್, ಅದನ್ನು ಮಾಡಿದವರನ್ನು ಅವರು ಅಪ್ಪಿ ತಪ್ಪಿಯೂ ವಿರೋಧಿಸಿಲ್ಲ!

ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಡಿಕೆಯಲ್ಲಿ ಕ್ಯಾನ್ಸರ್‌ಕಾರಕ ವಿಷಕಾರಿ ಅಂಶವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವು ಅಫಿಡವಿಟ್‌ ಅನ್ನು ಹಿಂಪಡೆಯಬೇಕು ಮತ್ತು ಅಡಿಕೆಗೆ ಸ್ಥಿರ ಬೆಲೆ ಒದಗಿಸಬೇಕೆಂದು ಅಡಿಕೆ ಬೆಳೆಗಾರರು ಹಲವು ವರ್ಷಗಳಿಂದ ಕೇಳುತ್ತಿದ್ದಾರೆ. ಶೋಭಾ ಕರಂದ್ಲಾಚೆಯವರು ಈ ಕುರಿತು ಕೇಂದ್ರ ಆರೋಗ್ಯ ಮಂತ್ರಿಗಳಿಗೆ ಒಂದು ಮನವಿ ಕೊಟ್ಟಿದ್ದು ಬಿಟ್ಟರೆ ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಈ ಸದ್ಯ ಭಾರೀ ಮಳೆಯಿಂದಾಗಿ ತಮ್ಮ ಕ್ಷೇತ್ರದ ಕೊಪ್ಪ, ಶೃಂಗೇರಿ, ಕಳಸ ಭಾಗದ ಗ್ರಾಮಸ್ಥರು ಸಂಕಷ್ಟದಲ್ಲಿದ್ದರು ಅತ್ತ ಗಮನಹರಿಸದ ಅವರು ಸೀದಾ ಬೆಂಗಳೂರಿನ ಕೆ.ಜಿ ಹಳ್ಳಿಗೆ ಭೇಟಿ ನೀಡಿದ್ದಾರೆ. ಹಿಂದೂ ದೇವಾಲಯದ ಮೇಲೆ ಎಸ್‌ಡಿಪಿಐ ಬಾವುಟ ಹಾಕಿದ್ದಾರೆ ಎಂಬುದರ ವಿರುದ್ಧ ಹೋರಾಡುತ್ತಿದ್ದಾರೆ!

ಅನಂತ್ ಕುಮಾರ್ ಹೆಗಡೆ

ಹಿಂದೂ ಹುಡುಗಿ ಮುಟ್ಟಿದವರ ಕೈ ಇರಬಾರದು‘. ಈ ಪ್ರಚೋದನಾಕಾರಿ ಹೇಳಿಕೆ ಮಾಜಿ ಸಚಿವ, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯವರದು. ಬ್ರೀಟಿಷರು ಉಪವಾಸಕ್ಕೆ ಹೆದರಿ ಓಡಿಹೋಗಲಿಲ್ಲ, ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬುದು ಇವರ ಮತ್ತೊಂದು ಅಣಿಮುತ್ತು. ನಾವು ಬಂದಿರುವುದು ಸಂವಿಧಾನ ಬದಲಿಸಲ್ಲಿಕ್ಕೆ ಎಂಬ ದೌಲತ್ತು ಬೇರೆ. ಕೇಂದ್ರ ಕೌಶಲ ಅಭಿವೃದ್ದಿ ಸಚಿವರಾದರೂ ನಯಾ ಪೈಸೆ ಕೆಲಸ ಮಾಡದ ಇವರು ಯುವಜನರಿಗೆ ಉದ್ಯೋಗ ಸಿಗದಿರುವುದಕ್ಕೆ ಕೌಶಲ ಇರದಿರುವುದೇ ಕಾರಣ ಎಂದು ಹೇಳಿ ಟೀಕೆಕ್ಕೊಳಗಾಗಿದ್ದರು.

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಇವರು ರಾಜ್ಯದ ಅಭಿವೃದ್ದಿಯ ಪರವಾಗಿ ಮಾತನಾಡಿದ್ದು ಕಡಿಮೆ. ಇವರ ದ್ವೇಷ ಭಾಷಣ, ಕೋಮು ಪ್ರಚೋದಿತ ಹೇಳಿಕೆಗಳಿಂದಾಗಿ ಟ್ವಿಟ್ಟರ್‌ ಖಾತೆಯನ್ನು ಅಮಾನತ್ತು ಮಾಡಿತ್ತು.

ನಳಿನ್ ಕುಮಾರ್ ಕಟೀಲ್;

ಮಂಗಳೂರಿನ ಸಂಸದರು, ಹಾಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಆದ ನಳಿನ್ ಕುಮಾರ್ ಕಟೀಲ್‌ರವರು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ 1 ಡಾಲರ್ ಮೌಲ್ಯ 15ರೂ ಆಗುತ್ತದೆ ಎಂದಿದ್ದರು. ಆದರೆ ನರೇಂದ್ರ ಮೋದಿಯವರು 2ನೇ ಬಾರಿ ಅಧಿಕಾರಕ್ಕೆ ಬಂದರೂ ಸಹ 1 ಡಾಲರ್ ಮೌಲ್ಯ 74ರೂ ಆಗಿದೆ. ಪಂಪ್‌ವೇಲ್‌ ಮೇಲ್ಸೇತುವೆ ಕಟ್ಟಲು ಹಲವು ಬಾರಿ ಗಡುವುಗಳನ್ನು ವಿಧಿಸಿದ್ದ ಅವರು ಕೊನೆಗೂ ಹತ್ತು ವರ್ಷದ ನಂತರ ಪೂರ್ಣಗೊಳಿಸಿದ್ದರು.

ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುವ ಮೂಲಕ…..ನಮ್ಮ ಹೆಮ್ಮೆ ನಮ್ಮ ಎಂಪಿ ????

Posted by Satya_Meva_Jayate on Tuesday, March 26, 2019

ಆದರೆ ಬಿಜೆಪಿ ಕಾರ್ಯಕರ್ತ ಕಾರ್ತಿಕ್‌ ರಾಜ್ ಎಂಬ ಹುಡುಗನ ಕೊಲೆ ವಿಚಾರವೊಂದರಲ್ಲಿ ಇವರು ಆರೋಪಿಗಳನ್ನು ಹತ್ತು ದಿನದಲ್ಲಿ ಬಂಧಿಸದಿದ್ದರೆ ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೇವೆ ಎಂದು ಪ್ರಚೋದನೆ ನೀಡಿದ್ದರು. ವಿಡಿಯೋ ವೈರಲ್ ಆಗಿತ್ತು. ನಂತರ ತನಿಖೆಯಿಂದ ತಿಳಿದ್ದಿದ್ದೇನೆಂದರೆ ಕೊಲೆ ಆರೋಪಿ ಕಾರ್ತಿಕ್ ರಾಜ್‌ನ ಸ್ವತಃ ಸಹೋದರಿಯಾಗದ್ದಳು.

ಪ್ರತಾಪ್ ಸಿಂಹ:

ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿರು ಪ್ರತಾಪ್‌ ಸಿಂಹರವರು ಪ್ರವಾಹ ಪರಿಹಾರವನ್ನು ಯಾರೂ ತಮ್ಮ ಕಿಸೆಯಿಂದ ಕೊಡಲಾಗುವುದಿಲ್ಲ ಎಂದಿದ್ದರು. ಅಷ್ಟು ಮಾತ್ರವಲ್ಲದೇ ಪ್ರವಾಹ ಪರಿಹಾರ ಕೇಳುವುದೇ ತಪ್ಪು ಎನ್ನುವ ಅಭಿಪ್ರಾಯ ಇರುವ ಪ್ರತಾಪ್ ಸಿಂಹ ಹನುಮಾ ಜಯಂತಿ ಮಾಡಿಯೇ ತೀರುತ್ತೇವೆ ಎಂದು ಕರ್ಫ್ಯೂ ಉಲ್ಲಂಘಿಸಿದ್ದರು.

ಚಿಕ್ಕಮಗೂರಿನ ಬಾಬಬುಡನ್ ಗಿರಿ ವಿಚಾರವಾಗಿ ಅದನ್ನು ದತ್ತಪೀಠ ಮಾಡೆಬೇಕೆನ್ನುತ ಅಧಿಕಾರಕ್ಕೆ ಸಿ.ಟಿ ರವರು ಅಭಿವೃದ್ದಿ ವಿಷಯ ಮಾತನಾಡಿದ್ದು ಕಡಿಮೆ. ಇದಲ್ಲದೇ ಬಿಜೆಪಿಯ ಕೆ.ಎಸ್ ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್, ತೇಜಸ್ವಿ ಸೂರ್ಯ ಸೇರಿದಂತೆ ಇತರರು ಅಭಿವೃದ್ದಿ ಕುರಿತ ಮಾತುಗಳಿಗಿಂತ ಕೋಮು ಪ್ರಚೋದಿತ ಹೇಳಿಕೆ ನೀಡುವುದರಲ್ಲೇ ನಿಸ್ಸೀಮರಾಗಿದ್ದಾರೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....