Homeಮುಖಪುಟಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ - ಸುಪ್ರೀಂ ಕೋರ್ಟ್

ಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ – ಸುಪ್ರೀಂ ಕೋರ್ಟ್

- Advertisement -
- Advertisement -

ಮದುವೆಗೆ ಅಸಮ್ಮತಿ ವ್ಯಕ್ತಪಡಿಸುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ದ್ವಿಸದಸ್ಯ ಪೀಠವು ಈ ತೀರ್ಪು ನೀಡದೆ. ಮದುವೆಗೆ ಅಸಮ್ಮತಿ

ತನ್ನ ಮಗನನ್ನು ಪ್ರೀತಿಸುತ್ತಿದ್ದ ಯುವತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತ ಮಹಿಳೆಯ ವಿರುದ್ಧದ ಆರೋಪಪಟ್ಟಿಯನ್ನು ರದ್ದುಗೊಳಿಸುವಾಗ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.  ಆರೋಪಪಟ್ಟಿ ಮತ್ತು ಸಾಕ್ಷಿಗಳ ಹೇಳಿಕೆಗಳು ಸೇರಿದಂತೆ ದಾಖಲೆಯಲ್ಲಿರುವ ಎಲ್ಲಾ ಪುರಾವೆಗಳು ಸರಿಯಾಗಿದ್ದರೂ ಸಹ, ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿದವರ (ಆರೋಪಿ) ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ. ಮದುವೆಗೆ ಅಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೇಲ್ಮನವಿ ಸಲ್ಲಿಸಿದವರ ಕೃತ್ಯಗಳು ಐಪಿಸಿಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಅಪರಾಧವನ್ನು ರೂಪಿಸಲು ಸಾಧ್ಯವಿಲ್ಲ. ಈ ಸಾವು ಪರೋಕ್ಷವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮೃತ ವ್ಯಕ್ತಿಗೆ ಆತ್ಮಹತ್ಯೆಯಂತಹ ದುರದೃಷ್ಟಕರ ಕೃತ್ಯವನ್ನು ಮಾಡುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬುವುದು ಸರಿಯಲ್ಲ” ಎಂದು ಪೀಠವು ಹೇಳಿದೆ.

ಈ ಆರೋಪಗಳು ಮೃತ ಯುವತಿ ಮತ್ತು ಮೇಲ್ಮನವಿ ಸಲ್ಲಿಸಿದ ವ್ಯಕ್ತಿಯ ಮಗನ ನಡುವಿನ ವಿವಾದಗಳನ್ನು ಆಧರಿಸಿವೆ. ಆದರೆ ಮಹಿಳೆಯು ತನ್ನ ಮಗ ಈ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದರು. ಮೇಲ್ಮನವಿ ಸಲ್ಲಿಸಿದವರ ಮೇಲೆ ಮದುವೆಯನ್ನು ವಿರೋಧಿಸಿದ ಮತ್ತು ಮೃತರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು.

ಮೃತ ಯುವತಿಯು ತಮ್ಮ ಪ್ರಿಯಕರನನ್ನು ಮದುವೆಯಾಗದೆ ಬದುಕಿರಲು ಸಾಧ್ಯವಾಗುವುದಿಲ್ಲ ಎಂಬ ಹೇಳಿಕೆಯು ಸರಿಯಲ್ಲ. ಅಷ್ಟಕ್ಕೆ ಅವರ ಆತ್ಮಹತ್ಯೆಗೆ ಪ್ರಿಯಕರ ತಾಯಿ ಕಾರಣವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...