Homeಮುಖಪುಟದ್ವೇಷ, ಹಿಂಸೆಯೆಂಬ ವಿಪತ್ತನ್ನು ಪ್ರೀತಿ ಮತ್ತು ಮಾತುಕತೆ ಮೂಲಕ ಮಾತ್ರ ಎದುರಿಸಬಹುದು: ಮಣಿಪುರ ಭೇಟಿ ಬಳಿಕ...

ದ್ವೇಷ, ಹಿಂಸೆಯೆಂಬ ವಿಪತ್ತನ್ನು ಪ್ರೀತಿ ಮತ್ತು ಮಾತುಕತೆ ಮೂಲಕ ಮಾತ್ರ ಎದುರಿಸಬಹುದು: ಮಣಿಪುರ ಭೇಟಿ ಬಳಿಕ ರಾಹುಲ್ ಗಾಂಧಿ

- Advertisement -
- Advertisement -

ದ್ವೇಷ ಮತ್ತು ಹಿಂಸೆಯೆಂಬದು ಒಂದು ವಿಪತ್ತು. ಅದನ್ನು ನಾವು ಪ್ರೀತಿ ಮತ್ತು ಮಾತುಕತೆ ಮೂಲಕ ಮಾತ್ರ ಎದುರಿಸಬಹುದು ಎಂದು ಮಣಿಪುರ ಭೇಟಿ ಬಳಿಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇಂದು ಮೊಯಿರಾಂಗ್‌ನಲ್ಲಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದೆ. ಮಣಿಪುರದ ನಮ್ಮ ಸಹೋದರ ಸಹೋದರಿಯರನ್ನು ನೋಡಿದೆ. ಅವರ ನೋವನ್ನು ಕೇಳಿದೆ ಮತ್ತು ಅನುಭವಿಸಿದೆ ಎಂದು ತಮ್ಮ ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಬರೆದಿದ್ದಾರೆ.

 

View this post on Instagram

 

A post shared by Rahul Gandhi (@rahulgandhi)

ಇದೇ ವೇಳೆ ಆಜಾದ್ ಹಿಂದ್ ಫೌಜ್ ಹುತಾತ್ಮರ ಸ್ಮಾರಕಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದೆನು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನಿನ್ನೆ ಪರಿಹಾರ ಶಿಬಿರದ ಮಹಿಳೆಯರನ್ನು ಮಾತನಾಡಿಸಿದ ನಂತರ ಅವರು “ಮಣಿಪುರಕ್ಕೆ ಚಿಕಿತ್ಸೆ ಅಗತ್ಯವಿದೆ. ಶಾಂತಿ ಮಾತ್ರ ನಮ್ಮ ಆದ್ಯತೆಯಾಗಬೇಕು” ಎಂದು ಟ್ವೀಟ್ ಮಾಡಿದ್ದರು.

ಮಣಿಪುರಕ್ಕೆ ಈಗ ಅಗತ್ಯವಿರುವ ಪ್ರಮುಖ ವಿಷಯವೆಂದರೆ ಶಾಂತಿ. ನಮ್ಮ ಜನರ ಜೀವನ ಮತ್ತು ಜೀವನೋಪಾಯವನ್ನು ಸುರಕ್ಷಿತಗೊಳಿಸುವುದು. ಆ ಗುರಿಯತ್ತ ನಮ್ಮೆಲ್ಲರ ಪ್ರಯತ್ನಗಳು ಒಂದಾಗಬೇಕು ಎಂದು ಅವರು ಹೇಳಿದ್ದರು.

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಇಂದು ಸಂಜೆ ಇಂಫಾಲ್‌ನಲ್ಲಿ 10 ಸಮಾನ ಮನಸ್ಕ ಪಕ್ಷದ ನಾಯಕರು, ಯುನೈಟೆಡ್ ನಾಗಾ ಕೌನ್ಸಿಲ್ (ಯುಎನ್‌ಸಿ) ನಾಯಕರು ಮತ್ತು ನಾಗರಿಕ ಸಮಾಜ ಸಂಘಟನೆಗಳ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೇಶಾಮ್ ಮೇಘಚಂದ್ರ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಒಂದಾದ ಚುರಾಚಂದ್‌ಪುರಕ್ಕೆ ಭೇಟಿ ನೀಡಲು ಮುಂದಾಗಿದ್ದ ರಾಹುಲ್ ಗಾಂಧಿಯವರನ್ನು ಪೊಲೀಸರು ತಡೆದಿದ್ದರು. ಆನಂತರ ಅವರು ಹೆಲಿಕ್ಯಾಪ್ಟರ್ ಮೂಲಕ ತೆರಳಿ ಸಂತ್ರಸ್ತರನ್ನು ಭೇಟಿಯಾಗಿದ್ದರು.

ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಅವರು ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಬಿರೇನ್ ಸಿಂಗ್ ಮತ್ತು ರಾಜ್ಯಪಾಲೆ ಅನುಸೂಯಾ ಉಯ್ಕೆ ಭೇಟಿಗೆ ಸಮಯ ನಿಗದಿಯಾಗಿತ್ತು. ಅದರಂತೆ ಇದೀಗ ಭೇಟಿಯಾಗಿದ್ದು, ಈ ಸಂದರ್ಭದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆ ಮಾಡುತ್ತಾರೆ ಎಂದು ಮೂಲಗಳು ಹೇಳಿವೆ.

ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದ್ದರೂ, ನಿಯಂತ್ರಿಸುವಲ್ಲಿ ಬಿರೇನ್ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಮೈತಿ ಸಮುದಾಯದ ಇಬ್ಬರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...